ಬೆಳಗಾವಿ: ವರದಕ್ಷಿಣೆಗಾಗಿ ಬಲಿಯಾಯ್ತು ಒಂದು ವರ್ಷದ ಹಸುಳೆ
ಬೆಳಗಾವಿ, ಡಿಸೆಂಬರ್ 5 : ವರದಕ್ಷಿಣೆಗಾಗಿ ಒಂದು ವರ್ಷದ ಕಂದಮ್ಮನನ್ನು ತಂದೆ ಹಾಗೂ ಅಜ್ಜಿ ಸೇರಿಕೊಂಡು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ನಡೆದಿದ್ದು, ಮಂಗಳವಾರ ಬೆಳಕಿಗೆ ಬಂದಿದೆ.
ಜೋಯೆಲ್ ನಾಮದೇವ ನಡುವಿನಕೇರಿ (1) ಮೃತ ಮಗು. ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಹಣಕ್ಕಾಗಿ ಮಗುವನ್ನು ಕೊಲೆ ಮಾಡಿದ್ದರೆಂದು ಮೃತ ಮಗುವಿನ ತಾಯಿ ಆರೋಪಿಸಿದ್ದಾರೆ.
ಕಳೆದ ಒಂದು ವರ್ಷದಿಂದ ದಾಂಡೇಲಿಯಲ್ಲಿರುವ ತವರು ಮನೆಯಲ್ಲಿ ತಾಯಿ-ಮಗು ವಾಸಿಸುತ್ತಿದ್ದರು. ಮಗುವಿನ ತಾಯಿ 10 ದಿನಗಳ ಹಿಂದೆ ಗಂಡನ ಮನೆಗೆ ಹಸುಗೂಸನ್ನು ಕರೆದುಕೊಂಡು ಹೋಗಿದ್ದರು.
ಶುಕ್ರವಾರ ನನ್ನನ್ನು ಹೊರಗಡೆ ಕಳಿಸಿ ನನ್ನ ಗಂಡ ನಾಮದೇವ ಹಾಗೂ ಅವರ ತಾಯಿ ಮಗುವಿಗೆ ಕೀಟನಾಶಕ ಸಿಂಪಡಿಸಿ ಕೊಲೆ ಮಾಡಿದ್ದಾರೆ ಎಂದು ಮಗುವಿನ ತಾಯಿ ಆರೋಪಿಸಿದ್ದಾರೆ. ಈ ಬಗ್ಗೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Comments
belagavi dowry dowry harassment district news murder ಬೆಳಗಾವಿ ವರದಕ್ಷಿಣೆ ವರದಕ್ಷಿಣೆ ಕಿರುಕುಳ ಜಿಲ್ಲಾಸುದ್ದಿ ಕೊಲೆ
English summary
Father killed his 1-year-old child for dowry in Kotabagi at Balagavi district. The child mother alleged that her husband by dowry harassment.
Story first published: Tuesday, December 5, 2017, 14:02 [IST]