ಬಾಡಿಗೆ ಪ್ರತಿಭಟನಾಕಾರರು : ಕಾಂಗ್ರೆಸ್ ಬಣ್ಣ ಬಯಲು?
ಬೆಳಗಾವಿ, ನವೆಂಬರ್ 24: ಸುವರ್ಣ ವಿಧಾನ ಸೌಧದ ಎದರು ಮಹಿಳೆಯರು ಬುಧವಾರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಪ್ರತಿಭಟನೆ ವೇಳೆ ಒಬ್ಬ ಮಹಿಳೆ ನೀಡಿದ ಹೇಳಿಕೆ ಕಾಂಗ್ರೆಸ್ ಗೆ ತೀವ್ರ ಮುಜುಗರವನ್ನುಂಟುಮಾಡಿದೆ.
ಅಪನಗದೀಕರಣ ಮಾಡಿದ ಮೋದಿ ಸರ್ಕಾರದ ವಿರುದ್ಧ ಪ್ರತಿಭಟಿಸಲು ಮಹಿಳೆಗೆ ಹಣ ನೀಡಿ ಕರೆಸಲಾಗಿತ್ತು ಎಂಬುದು ಕಾಂಗ್ರೆಸ್ ಗೆ ತಲೆ ನೋವಾಗಿ ಪರಿಣಮಿಸಿದೆ.[ನರೇಂದ್ರ ಮೋದಿ ಸಮೀಕ್ಷೆ: ನೋಟು ರದ್ದು ಬೆಂಬಲಿಸಿದ ಶೇ 93ರಷ್ಟು ಜನ!]

ದೇಶದಲ್ಲಿ ನೋಟು ನಿಷೇಧವಾಗಿರುವುದಕ್ಕೆ ರಾಜ್ಯದಲ್ಲಿ ಆಗಿರುವ ತೊಂದರೆ, ರೈತರಿಗೆ ಸರಿಯಾದ ಪರಿಹಾರ ಸಿಗುತ್ತಿಲ್ಲ ಎಂಬ ಬಗ್ಗೆ ಸದನದಲ್ಲಿ ಚರ್ಚೆಯಾಗಿದ್ದು, ಕೇಂದ್ರದ ಬಿಜೆಪಿ ನಡೆಯುನ್ನು ಖಂಡಿಸಿ ರಾಜ್ಯದಕಾಂಗ್ರೆಸ್ ನ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನೂರಾರು ಕಾಂಗ್ರೆಸ್ ಸದಸ್ಯರು ಈ ಪ್ರತಿಭಟನೆಯಲ್ಲಿಭಾಗವಹಿಸಿದ್ದರು. ಆದರೆ ಸ್ಥಳೀಯ ಮಹಿಳೆಯರನ್ನು ಹಣ ನೀಡಿ ಕರೆಸಿದ್ದರು ಹಾಗು ಮಹಿಳೆಯೊಬ್ಬರು ಕಪ್ಪುಹಣದ ವಿರುದ್ಧ ಏಕೆ ಪ್ರತಿಭಟಿಸಬೇಕು ಎಂದು ಹೇಳಿದ್ದು ಚರ್ಚೆಗೆ ಕಾರಣವಾಗಿದೆ.
ಆ ಮಹಿಳೆ ಹೇಳುವಂತೆ ಪ್ರತಿ ಮಹಿಳೆಗೆ 100 ರು ನೀಡಿ ಪಡಿತರ ಚೀಟಿಗಾಗಿ ಮೋದಿ ಸರ್ಕಾರದ ವಿರುದ್ಧ ಪ್ರತಿಭಟಿಸಬೇಕಂದು ಹೇಳಿದ್ದರು. ಆದರೆ ನಾವೇಕೆ ಪ್ರತಿಭಟಿಸಬೇಕು ಅಪನಗದೀಕರಣವಾಗಿರುವುದು ಕಪ್ಪುಹಣನಿರ್ಮೂಲನಕ್ಕೆ ಎಂದು ಸುದ್ದಿವಾಹಿನಿಗೆ ಮಹಿಳೆ ತಿಳಿಸಿದ್ದಾರೆ.
ಆದರೆ ಕಾಂಗ್ರೆಸ್ ಈ ವಿಷಯವನ್ನು ತಳ್ಳಿ ಹಾಕಿದ್ದು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಆ ಮಹಿಳೆ ಹೇಳುತ್ತಿರುವುದೇನೆಂದು ನನಗೆ ಸರಿಯಾಗಿ ತಿಳಿದು ಬಂದಿಲ್ಲ. ನೀವು ಸ್ಥಳೀಯ ಎಂಎಲ್ ಎ ಗಳಿಂದಮಾಹಿತಿ ಪಡೆಯಬಹುದೆಂದು ವರದಿಗಾರರು ಕೇಳುತ್ತಿದ್ದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದೇ ಕಾರಿನಲ್ಲಿ ಹೊರಟು ಹೋಗಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications