ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪತ್ರಕರ್ತ ರವಿ ಬೆಳಗೆರೆ, ಅನಿಲ್ ರಾಜ್ ಬಂಧನಕ್ಕೆ ಗೃಹ ಇಲಾಖೆಗೆ ಪತ್ರ

|
Google Oneindia Kannada News

ಬೆಳಗಾವಿ, ನವೆಂಬರ್ 22: ಹಾಯ್ ಬೆಂಗಳೂರ್ ವಾರಪತ್ರಿಕೆ ಸಂಪಾದಕ- ಪತ್ರಕರ್ತ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್ ಸಂಪಾದಕ ಅನಿಲ್ ರಾಜ್ ಗೆ ಬಂಧನದ ಭೀತಿ ಎದುರಾಗಿದೆ. ಇಬ್ಬರನ್ನೂ ಕೂಡಲೇ ಬಂಧಿಸಲು ಕ್ರಮ ಕೈಗೊಳ್ಳುವಂತೆ ವಿಧಾನಸಭಾ ಸಚಿವಾಲಯದಿಂದ ಗೃಹ ಇಲಾಖೆಗೆ ಪತ್ರ ಕಳುಹಿಸಲಾಗಿದೆ.

ಪತ್ರಕರ್ತ ರವಿ ಬೆಳಗೆರೆ ವಕೀಲರ ವಾದ ಮಂಡನೆಗೆ ಸಿಗದ ಅವಕಾಶಪತ್ರಕರ್ತ ರವಿ ಬೆಳಗೆರೆ ವಕೀಲರ ವಾದ ಮಂಡನೆಗೆ ಸಿಗದ ಅವಕಾಶ

ಈ ಹಿಂದೆ ಹಕ್ಕುಬಾಧ್ಯತಾ ಸಮಿತಿಯಿಂದ ಶಿಫಾರಸು ಮಾಡಿದ್ದ ಒಂದು ವರ್ಷದ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ತೀರ್ಮಾನವನ್ನು ವಿಧಾನಸಭೆಯಲ್ಲಿ ಮಂಗಳವಾರ ಎತ್ತಿ ಹಿಡಿಯಲಾಗಿದೆ. ಸದನದ ನಿರ್ಣಯವನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ತಿಳಿಸಿದ್ದಾರೆ.

Karnataka assembly writes letter to arrest journalist Ravi Belagare

ಅಂದಹಾಗೆ, ಪತ್ರಕರ್ತರಾದ ರವಿ ಬೆಳಗೆರೆ ಹಾಗೂ ಅನಿಲ್ ರಾಜ್ ಗೆ ಹಕ್ಕುಬಾಧ್ಯತಾ ಸಮಿತಿಯು ಒಂದು ವರ್ಷ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ರುಪಾಯಿ ದಂಡ ವಿಧಿಸಿತ್ತು. ಈ ತೀರ್ಮಾನದ ವಿರುದ್ಧ ಇಬ್ಬರೂ ಪತ್ರಕರ್ತರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆ ನಂತರ ಈ ಪ್ರಕರಣದ ಮರುಪರಿಶೀಲಿಸುವಂತೆ ವಿಧಾನಸಭೆ ಅಧ್ಯಕ್ಷ ಕೆ.ಬಿ.ಕೋಳಿವಾಡ ಅವರಿಗೆ ಮನವಿ ಮಾಡಿದ್ದರು.

English summary
Karnataka assembly ministry writes letter to home department to arrest Hai Bangalore Kannada weekly editor, journalist Ravi Belagare and Anil Raj following a House resolution sentencing them to one-year imprisonment and a fine of Rs 10,000 for breach of privilege.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X