ಕರ್ನಾಟಕ ಚುನಾವಣೆ : ಎಂಇಎಸ್ ಟಿಕೆಟ್ಗಾಗಿ ಭಾರೀ ಪೈಪೋಟಿ
ಬೆಳಗಾವಿ, ಏಪ್ರಿಲ್ 08 : ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಎಂಇಎಸ್ನ ಇಬ್ಬರು ಶಾಸಕರಿಗೆ ಟಿಕೆಟ್ ಕೈ ತಪ್ಪುವ ಆತಂಕ ಎದುರಾಗಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಭಿನ್ನಮತ ಉಂಟಾಗಿದೆ.
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನ ಇಬ್ಬರು ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆಯೇ? ಎಂಬ ಪ್ರಶ್ನೆ ಎದ್ದಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಸಂಭಾಜಿ ಪಾಟೀಲ್ ಮತ್ತು ಖಾನಾಪುರ ಕ್ಷೇತ್ರದಿಂದ ಅರವಿಂದ್ ಪಾಟೀಲ್ ಅವರು ಶಾಸಕರಾಗಿ 2013ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು.
ಕೆಲವು ದಿನಗಳ ಹಿಂದೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಸಂಭಾಜಿ ಪಾಟೀಲ್ ಕಾಂಗ್ರೆಸ್ ಬೆಂಬಲಿಸಿದ್ದರು. ಅರವಿಂದ ಪಾಟೀಲ್ ಅವರು ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಹಾಕಿದ್ದರು. ಈಗ ಎಂಇಎಸ್ನಲ್ಲಿ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದೆ.
ಹಾಲಿ ಇಬ್ಬರು ಶಾಸಕರಿಗೂ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿದೆ. ಆದ್ದರಿಂದ, ಮಹಾರಾಷ್ಟ್ರದ ನಾಯಕರು ಕರ್ನಾಟಕದ ಚುನಾವಣೆಯಲ್ಲಿ ಯಾರು ಅಭ್ಯರ್ಥಿಗಳಾಗಬೇಕು? ಎಂದು ತೀರ್ಮಾನ ಕೈಗೊಳ್ಳಲಿದ್ದಾರೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಎನ್.ಡಿ.ಪಾಟೀಲ್ ಅವರು ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ. ಎರಡು ದಿನದಲ್ಲಿ ಎಂಇಎಸ್ ಅಭ್ಯರ್ಥಿಗಳು ಯಾರು? ಎಂಬ ಘೋಷಣೆಯಾಗುವ ಸಾಧ್ಯತೆ ಇದೆ.