ಬೆಳಗಾವಿಯಲ್ಲಿ ಸಿಕ್ಕಿಬಿದ್ದವರ ಬಳಿ 36 ವಿಡಿಯೋಗಳು ಇವೆ
ಬೆಳಗಾವಿ, ಡಿಸೆಂಬರ್ 08 : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ಹಾಗೂ ರಾಜ್ಯದ ನಿರ್ಬಂಧಿತ ಸ್ಥಳಗಳ ಫೋಟೋ ತೆಗೆದ ಆರೋಪದ ಮೇಲೆ ಬಂಧಿತರಾಗಿರುವ ಮಹಮ್ಮದ್ ಎಜಾಜ್ ಬಿಹಾರಿ ಮತ್ತು ಆತನ ಸಹಚರ ಹಲವು ವಿಡಿಯೋಗಳನ್ನು ತೆಗೆದಿರುವುದು ತನಿಖೆ ವೇಳೆ ಬಯಲಾಗಿದೆ.
ಬೆಂಗಳೂರು, ಮೈಸೂರು, ಬಾಗಲಕೋಟೆ, ವಿಜಯಪುರ, ಹುಬ್ಬಳ್ಳಿ-ಧಾರವಾಡ, ಗದಗ ಮುಂತಾದ ಸ್ಥಳಗಳ ವಿಡಿಯೋಗಳು ಬಂಧಿತರ ಬಳಿ ಪತ್ತೆಯಾಗಿವೆ. ಬಂಧಿತರಿಂದ ಸುಮಾರು 36 ವಿಡಿಯೋ ತುಣುಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. [ಉಗ್ರರ ಕರಿನೆರಳು ಬೆಳಗಾವಿಯ ಮೇಲೂ ಬಿತ್ತೇ?]

ಉರ್ದು ನಿಯತಕಾಲಿಕೆ ಸಂಪಾದಕ ಮಹಮ್ಮದ್ ಎಜಾಜ್ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದು, ಪತ್ರಿಕೆಯ ಸಂಗ್ರಹಕ್ಕಾಗಿ ಫೋಟೋ ಮತ್ತು ವಿಡಿಯೋಗಳನ್ನು ತೆಗೆಯಲಾಗಿದೆ ಎಂದು ಹೇಳಿದ್ದಾನೆ. ಬಿಹಾರಿ ಮತ್ತು ಮಹ್ಮದ್ ಹುಸೇನ್ ಅಲಿ ಖುರೇಷಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಳಗಾವಿ 3ನೇ ಜೆಎಂಎಫ್ಸಿ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. [ಉಗ್ರಗಾಮಿ ಸಂಘಟನೆ ಸೇರೋದ್ರಲ್ಲಿ ಕರ್ನಾಟಕವೇ ಫಸ್ಟ್!]
ಅಂತಿಮ ನಿರ್ಧಾರಕ್ಕೆ ಬಂದಿಲ್ಲ : ಫೋಟೋ ತೆಗೆದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಒನ್ ಇಂಡಿಯಾಕ್ಕೆ ಜೊತೆ ಮಾತನಾಡಿದ್ದು, 'ಇಲ್ಲಿಯ ತನಕ ಯಾವುದೇ ಅಂತಿಮ ತೀರ್ಮಾನಕ್ಕೆ ನಾವು ಬಂದಿಲ್ಲ. ಫೋಟೋ ಮತ್ತು ವಿಡಿಯೋಗಳನ್ನು ಏಕೆ ತೆಗೆಯಲಾಗಿದೆ? ಎಂಬ ಬಗ್ಗೆ ವಿವರವಾದ ತನಿಖೆಯ ಅಗತ್ಯವಿದೆ' ಎಂದು ಹೇಳಿದ್ದಾರೆ.
ಬಿಹಾರಿ ನೇಮಕ ಮಾಡಿಕೊಂಡಿದ್ದ : ಇದುವರೆಗಿನ ತನಿಖೆಯಿಂದ ಮಹ್ಮದ್ ಹುಸೇನ್ ಅಲಿ ಖುರೇಷಿಯನ್ನು
ಬಿಹಾರಿ ಫೋಟೋ ಮತ್ತು ವಿಡಿಯೋ ತೆಗೆಯಲು ನೇಮಕ ಮಾಡಿಕೊಂಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಭಯೋತ್ಪಾದನೆ ಕೃತ್ಯ ನಡೆಸಲು ವಿಡಿಯೋ ಮತ್ತು ಫೋಟೋ ತೆಗೆದಿದ್ದಾರೆ ಎಂಬ ಖಚಿತವಾದ ತೀರ್ಮಾನಕ್ಕೆ ಪೊಲೀಸರು ಇನ್ನೂ ಬಂದಿಲ್ಲ.
ಮಹಮ್ಮದ್ ಎಜಾಜ್ ಬಿಹಾರಿ ಮೂಲತಃ ಬಿಹಾರದವನಾಗಿದ್ದು ಹಲವು ವರ್ಷಗಳ ಹಿಂದೆಯೇ ಕಲಬುರಗಿಗೆ ಬಂದು ವಾಸ್ತವ್ಯ ಹೂಡಿದ್ದ. ಉರ್ದು ಪತ್ರಿಕೆಯನ್ನು ನಡೆಸುತ್ತಾ ಜೀವನ ಸಾಗಿಸುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಪತ್ರಿಕೆಗಾಗಿ ಮಾತ್ರವಾದರೆ ನಿಷೇಧಿತ ಸ್ಥಳಗಳ ಚಿತ್ರಗಳನ್ನು ಮಾತ್ರ ಏಕೆ ಸಂಗ್ರಹಿಸುತ್ತಿದ್ದರು? ಎಂದು ಕಲಬುರಗಿ ಮತ್ತು ಬೆಳಗಾವಿ ಪೊಲೀಸರು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications