ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಮುಂದೆ ವಿಷ ಕುಡಿಯಲೂ ಸಿದ್ಧ: ಪ್ರಕಾಶ್ ಹುಕ್ಕೇರಿ

By ಚಿಕ್ಕೋಡಿ ಪ್ರತಿನಿಧಿ
|
Google Oneindia Kannada News

ಚಿಕ್ಕೋಡಿ, ಫೆಬ್ರವರಿ 06: ಚಿಕ್ಕೋಡಿಗೆ ಜಿಲ್ಲಾ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಎದುರಿಗೆ ವಿಷ ಕುಡಿಯಲೂ ಸಿದ್ದನಿದ್ದೇನೆ ಎಂದು ಕಾಂಗ್ರೆಸ್ ಸಂಸದ ಪ್ರಕಾಶ ಹುಕ್ಕೇರಿ ಆಶ್ವಾಸನೆ ನೀಡಿದರು.

ಚಿಕ್ಕೋಡಿ ಜಿಲ್ಲಾ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು 'ಹೋರಾಟಕ್ಕಾಗಿ ನಾನು ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೂ ಸಿದ್ಧನಿದ್ದೇನೆ, ಚಿಕ್ಕೋಡಿ ಜಿಲ್ಲೆ ಆಗಲೇ ಬೇಕು' ಎಂದು ರೋಷಾವೇಶದಿಂದ ಹೇಳಿದರು.

ಸ್ಥಳೀಯ ಶಾಸಕರು ಮತ್ತು ರಾಜಕೀಯ ಮುಖಂಡರಿಗೆ ರಾಜಕೀಯ ಇಚ್ಛಾಶಕ್ತಿ ಇಲ್ಲ ಅವರಿಗೆ ಚಿಕ್ಕೋಡಿ ಜಿಲ್ಲೆಯಾಗುವುದು ಬೇಕಿಲ್ಲ ಎಂದ ಅವರು ನಾನು ಯಾವುದೇ ಕಾರಣಕ್ಕೂ ಜಿಲ್ಲಾ ಹೋರಾಟದಲ್ಲಿ ರಾಜಕಾರಣ ಮಾಡುತ್ತಿಲ್ಲ ಎಂದರು.

MP Prakash Hukkeri extended support to Chikkodi district Activists

ಹೋರಾಟಗಾರರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೊ ಅದಕ್ಕೆ ಬದ್ಧನಾಗಿರುವುದಾಗಿ ಹೇಳಿದ ಪ್ರಕಾಶ್ ಹುಕ್ಕೇರಿ, ಚಿಕ್ಕೋಡಿಯನ್ನು ಜಿಲ್ಲೆ ಮಾಡುವವರೆಗೆ ಹೋರಾಟದಲ್ಲಿ ಜೊತೆಯಾಗಿರುವುದಾಗಿ ಹೇಳಿದರು.

ಜಿಲ್ಲಾ ಹೋರಾಟ ಸಮಿತಿ ಅದ್ಯಕ್ಷ ಬಿ ಆರ್ ಸಂಗಪ್ಪಗೋಳ ಅವರ ನೇತೃತ್ವದಲ್ಲಿ ಚಿಕ್ಕೋಡಿಯನ್ನು ಜಿಲ್ಲೆ ಮಾಡಬೇಕೆಂದು ಸತತ ಪ್ರತಿಭಟನೆ ನಡೆಯುತ್ತಿದೆ.

English summary
MP Prakash Hukkeri said Chikkodi must be declared as district center. He also said that 'he will with the activists and will participate in protests which made for district cause'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X