ಬೆಳಗಾವಿ ಅಧಿವೇಶನ, ಶಾಸಕರಿಗೆ ಡಿನ್ನರ್ ಮಿಸ್
ಬೆಳಗಾವಿ, ಡಿ.1 : ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಸಭೆ ಚಳಿಗಾಲದ ಅಧಿವೇಶನದ ಖರ್ಚನ್ನು ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿತ್ತು. ಅದರಂತೆ, ಹಲವು ಸೌಲಭ್ಯಗಳಿಗೆ ಕತ್ತರಿ ಹಾಕಲಾಗಿದೆ. ಶಾಸಕರು ಅಧಿವೇಶನದ ಅವಧಿಯಲ್ಲಿ ರಾತ್ರಿ ಊಟವನ್ನು ತಮ್ಮ ಖರ್ಚಿನಲ್ಲಿಯೇ ಮಾಡಬೇಕಾಗುತ್ತದೆ.
ಡಿ.9ರಿಂದ 20ರವರೆಗೆ ನಡೆಯಲಿರುವ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಗೆ ನೀಡುವ ಸೌಲಭ್ಯಗಳ ಕುರಿತು ವಿಧಾನಸಭೆ ಕಾರ್ಯದರ್ಶಿ ಓಂ ಪ್ರಕಾಶ್ ಅವರು ಆದೇಶ ಹೊರಡಿಸಿದ್ದಾರೆ. ಇದರ ಅನ್ವಯ ಶಾಸಕರಿಗೆ ವಾಹನ ಸೌಲಭ್ಯದ ಬದಲು ಭತ್ಯೆ ನೀಡಲಾಗುತ್ತದೆ ಮತ್ತು ರಾತ್ರಿ ಊಟದ ವ್ಯವಸ್ಥೆಯನ್ನು ಶಾಸಕರೇ ನೋಡಿಕೊಳ್ಳಬೇಕು.

ಶಾಸಕರು ತಮ್ಮ ಆಪ್ತ ಸಹಾಯಕರು ಮತ್ತು ಭದ್ರತಾ ಸಿಬ್ಬಂದಿಗೆ ವಸತಿ ವ್ಯವಸ್ಥೆ ಮಾಡಿಕೊಳ್ಳಬೇಕು. ಬೆಳಗಾವಿ ಅಧಿವೇಶನದ ವೇಳೆ ಶಾಸಕರಿಗೆ ವಸತಿ ಮತ್ತು ವಾಹನ ಸೌಲಭ್ಯ ಒದಗಿಸುವ ಕುರಿತು ಸೂಕ್ತ ಶಿಫಾರಸುಗಳೊಂದಿಗೆ ಸಭಾಧ್ಯಕ್ಷರಿಗೆ ವರದಿ ಸಲ್ಲಿಸಲು ಎನ್.ಎಚ್.ಶಿವಶಂಕರ ರೆಡ್ಡಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. [ಹತ್ತು ದಿನದ ಅಧಿವೇಶನಕ್ಕೆ 14 ಕೋಟಿ ಖರ್ಚು]
ಶಾಸಕರಿಗೆ ಏನು ಸಿಗುತ್ತೆ : ಅಧಿವೇಶನದ ಅವಧಿಯಲ್ಲಿ ಶಾಸಕರಿಗೆ ಬೆಳಗಾವಿ, ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ವಸತಿ ಸ್ಥಳದಿಂದ ಅಧಿವೇಶನಕ್ಕೆ ಬರಲು ವಾಹನ ವ್ಯವಸ್ಥೆ ಬದಲಾಗಿ ಪ್ರತಿದಿನ 2,500 ರೂ. ಭತ್ಯೆ ನೀಡಲಾಗುತ್ತದೆ.[ಅಧಿವೇಶನಕ್ಕೆ ಭದ್ರತೆ ಹೇಗಿದೆ?]
ಬೆಳಗ್ಗೆ ಶಾಸಕರಿಗೆ ಅವರಿರುವ ಹೋಟೆಲ್ನಲ್ಲಿ ತಿಂಡಿ ಮತ್ತು ಸುವರ್ಣ ವಿಧಾನಸೌಧದಲ್ಲಿ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ. ರಾತ್ರಿ ಊಟದ ವ್ಯವಸ್ಥೆಯನ್ನು ಶಾಸಕರು ಮಾಡಿಕೊಳ್ಳಬೇಕು. ಇದಕ್ಕೆ ಹೆಚ್ಚುವರಿ ಭತ್ಯೆಯನ್ನು ನೀಡಲಾಗುವುದಿಲ್ಲ.
ಶಾಸಕರೊಂದಿಗೆ ಬೆಳಗಾವಿಗೆ ಆಗಮಿಸುವ ಅವರ ಆಪ್ತ ಸಹಾಯಕರು ಮತ್ತು ಭದ್ರತಾ ಸಿಬ್ಬಂದಿಗೆ ಸರ್ಕಾರ ವಸತಿ ವ್ಯವಸ್ಥೆ ಮಾಡುವುದಿಲ್ಲ. ಈ ಕುರಿತು ಎಲ್ಲಾ ಶಾಸಕರಿಗೆ ಈಗಾಗಲೇ ಪತ್ರವನ್ನು ರವಾನಿಸಲಾಗಿದೆ.
ಅಂದಹಾಗೆ ಬೆಂಗಳೂರು ಬಿಟ್ಟು ದೂರದ ಬೆಳಗಾವಿಯ ಸುವರ್ಣ ಸೌಧದಲ್ಲಿ ಮೊದಲ ಅಧಿವೇಶನ ನಡೆಸಿದ ಬಿಜೆಪಿ ಸರ್ಕಾರ 7.39 ಕೋಟಿ ರೂ.ಗಳನ್ನು ಅಧಿವೇಶನಕ್ಕಾಗಿ ಖರ್ಚು ಮಾಡಿತ್ತು. ಕಳೆದ ವರ್ಷದ ಡಿಸೆಂಬರ್ನಲ್ಲಿ ನಡೆದ 10 ದಿನದ ಅಧಿವೇಶನಕ್ಕೆ 14 ಕೋಟಿ ಹಣ ಖರ್ಚಾಗಿತ್ತು. ಆದ್ದರಿಂದ ಈ ಬಾರಿ ಶಾಸಕರ ಸೌಲಭ್ಯಗಳಿಗೆ ಕತ್ತರಿ ಬಿದ್ದಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications