ಮಾಧ್ಯಮಗಳ ವಿರುದ್ಧ ರಮೇಶ್ ಜಾರಕಿಹೊಳಿ ಗರಂ
Recommended Video
ಬೆಳಗಾವಿ, ಜನವರಿ 03 : 'ನೀವು ಹುಚ್ಚರಿದ್ದೀರಿ..ನಿಮ್ಮನ್ನು ಜಾಡಿಸಿ ಒದಿಬೇಕು...ನಿಮ್ಮದು ಅತಿ ಆಯಿತು' ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಧ್ಯಮಗಳ ವಿರುದ್ಧ ಅಸಮಾಧಾನಗೊಂಡರು.
ಗುರುವಾರ ಬೆಳಗ್ಗೆ ಬ್ಯಾಡ್ಮಿಂಟನ್ ಆಟ ಮುಗಿಸಿ ಗೋಕಾಕ್ನ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಆಗಮಿಸಿದರು. ಆಗ ಮಾಧ್ಯಮದವರು ಅವರನ್ನು ಪ್ರಶ್ನಿಸಲು ಮುಂದಾದರು. ಈ ಸಮಯದಲ್ಲಿ ಅವರು ಅಸಮಾಧಾನ ಹೊರ ಹಾಕಿದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸ್ನೇಹಿತನ ಪತ್ರ!
ಜಾರಕಿಹೊಳಿ ಅವರನ್ನು ಮಾಧ್ಯಮದವರು ಪ್ರಶ್ನಿಸಲು ಮುಂದಾದಾಗ, 'ನೀವು ಹುಚ್ಚರಿದ್ದೀರಿ. ನಿಮ್ಮನ್ನು ಜಾಡಿಸಿ ಒದಿಬೇಕು, ನಿಮ್ಮದು ಅತಿ ಆಯಿತು' ಎಂದು ಪ್ರತಿಕ್ರಿಯೆ ನೀಡಿದರು.
ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಎಂಬುದು ನನಗೆ ಗೊತ್ತಿಲ್ಲ: ಸಿದ್ದರಾಮಯ್ಯ
ನಾಪತ್ತೆಯಾಗಿದ್ದರು : ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ಪುನಾರಚನೆ ಮಾಡುವಾಗ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಡಲಾಗಿತ್ತು. ಈ ಬೆಳವಣಿಗೆ ಬಳಿಕ ರಮೇಶ್ ಜಾರಕಿಹೊಳಿ ನಾಪತ್ತೆಯಾಗಿದ್ದರು.
'ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಎಲ್ಲೂ ಹೋಗಲ್ಲ'
4 ದಿನ ಸಮಯ ಕೇಳಿದ ಮಾಜಿ ಸಚಿವ : ರಮೇಶ್ ಜಾರಕಿಹೊಳಿ ಅವರು ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸಲು 4 ದಿನಗಳ ಕಾಲಾವಕಾಶ ಕೇಳಿದ್ದಾರೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲಿದ್ದಾರೆಯೇ? ಎಂದು ಕಾದು ನೋಡಬೇಕು.