ಬೆಳಗಾವಿ: ಯಲ್ಲಮ್ಮ ಜಾತ್ರೆಯಲ್ಲಿ ದರೋಡೆಕೋರರ ಆರ್ಭಟ
ಬೆಳಗಾವಿ, ಡಿಸೆಂಬರ್ 15: ಬೆಳಗಾವಿ ಗಡಿಯಲ್ಲಿನ ಕೊಕಟನೂರು ಯಲ್ಲಮ್ಮನ ಜಾತ್ರೆಯಲ್ಲಿ ದರೋಡೆಕೋರರ ಗುಂಪು ದಾಳಿ ಮಾಡಿ ಭಕ್ತಾದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಗ-ನಾಣ್ಯ ದೋಚಿದೆ.
ತಡ ರಾತ್ರಿ ದಾಳಿ ನಡೆಸಿರುವ 20ಕ್ಕೂ ಹೆಚ್ಚು ಜನ ದರೋಡೆಕೋರರ ಗುಂಪು, ಬಹಿರ್ದೆಸೆಗೆಂದು ಬಯಲಿಗೆ ತೆರಳಿದ್ದ ಭಕ್ತಾದಿಗಳ ಮೇಲೆ ದಾಳಿ ನಡೆಸಿ ಚಾಕುವಿನಿಂದ ಮನಸೋಇಚ್ಛೆ ಹಲ್ಲೆ ನಡೆಸಿ ಹಣ, ಒಡವೆ, ಮೊಬೈಲ್ ಗಳನ್ನು ದೋಚಿದೆ.
ಬೆಳಗಾವಿ: ಪ್ರೇಮಿಗಳನ್ನು ದೋಚುತ್ತಿದ್ದ ಐವರ ಬಂಧನ
ಇರಿತಕ್ಕೊಳಗಾದವರಲ್ಲಿ ಸತೀಶ ಪಾಟೀಲ, ಪ್ರವೀಣ ಸ್ವಾಮಿ ಎಂಬುವವರಿಗೆ ತೀರ್ವ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ನಡೆಯುತ್ತಿರುವ ಈ ಜಾತ್ರೆಯಲ್ಲಿ ಉತ್ತರ ಕರ್ನಾಟಕ-ದಕ್ಷಿಣ ಮಹಾರಾಷ್ಟ್ರ ದಿಂದ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ, ಕಳೆದೆಂದೂ ಈ ರೀತಿಯ ಅಹಿತಕರ ಘಟನೆ ನಡೆದಿರಲಿಲ್ಲ, ಆದರೆ ಈಗ ನಡೆದಿರುವ ಘಟನೆ ಭಕ್ತಾದಿಗಳನ್ನು ಬೆಚ್ಚಿ ಬೀಳಿಸಿದೆ.
ಇರಿತಕ್ಕೊಳಗಾದ ಬಹುತೇಕರು ಭಕ್ತರು ಮಹಾರಾಷ್ಟ್ರದ ಕೊಲ್ಹಾಪುರ ನಿವಾಸಿಗಳು ಎನ್ನಲಾಗಿದೆ. ಗಾಯಾಳುಗಳನ್ನು ಅಥಣಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.