ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಗೊಳ್ಳಿ ರಾಯಣ್ಣ ಸೊಸೈಟಿ ಅವ್ಯವಹಾರ ಸಿಐಡಿ ತನಿಖೆಗೆ?

By Mahesh
|
Google Oneindia Kannada News

ಬೆಳಗಾವಿ, ಸೆ. 22: ಕನ್ನಡ ಸಿನಿಮಾ ನಿರ್ಮಾಪಕ ಆನಂದ್ ಅಪ್ಪುಗೋಳ್ ಅವರು ವ್ಯವಸ್ಥಾಪಕ ನಿರ್ದೇಶಕರಾಗಿರುವ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಕೋ-ಆಪ್ ಕ್ರೆಡಿಟ್ ಸೊಸೈಟಿಯ 300 ಕೋಟಿ ರು ಪ್ರಕರಣವನ್ನು ಸಿಐಡಿಗೆ ವಹಿಸುವ ಎಲ್ಲಾ ಸಾಧ್ಯತೆಗಳು ಕಂಡು ಬಂದಿದೆ.

ಸಹಕಾರ ಬ್ಯಾಂಕಿನಲ್ಲಿ ಠೇವಣಿ ಇಟ್ಟಿದ್ದ ಹಣದಲ್ಲಿ ಭೂ ವ್ಯವಹಾರ ನಡೆಸಿರುವುದು ನಿಯಮ ಉಲ್ಲಂಘನೆಯಾಗಿದೆ. ಗ್ರಾಹಕರಿಂದ ಸಂಗ್ರಹಿಸಿದ ಹಣವನ್ನು ಎಲ್ಲೆಲ್ಲಿ ಹೂಡಿಕೆ ಮಾಡಲಾಗಿದೆ ಎಂಬುದರ ಮಾಹಿತಿ ಸಂಪೂರ್ಣವಾಗಿಲ್ಲ. ಭೂ ಅವ್ಯವಹಾರದ ಬಗ್ಗೆ ಆನಂದ್ ವಿವರ ನೀಡಿದರೂ, ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿಲ್ಲ ಎಂದು ತಿಳಿದು ಬಂದಿದೆ.

ಅಪರಾಧ ವಿಭಾಗದ ಎಸಿಪಿ ಕಲ್ಯಾಣ ಶೆಟ್ಟಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಭೂ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಆನಂದ ಅಪ್ಪುಗೋಳ ಬ್ಯಾಂಕ್‌ನಿಂದ ವ್ಯವಹಾರ ನಡೆಸದಂತೆ ತನಿಖಾ ತಂಡ ಸೂಚಿಸಲಾಗಿದೆ.

ಅಪರಾಧ ವಿಭಾಗದ ಡಿಸಿಪಿ ಅಮರನಾಥ ರೆಡ್ಡಿ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಸೊಸೈಟಿಯ ಇನ್ನುಳಿದ 16 ಜನ ನಿರ್ದೇಶಕರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ ಎಂದಿದ್ದಾರೆ.

Sangolli Rayanna Society Scam : CID likely to probe Anand Appugol' s fraud case
English summary
Sangolli Rayanna SocietyScam : CID likely to probe Sangolli Rayanna Co-operative Society MD Anand Appugol' s fraud case. Bank is facing financial bankruptcy and Anand need to pay more than Rs 300 cr to customers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X