ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಗಳೂರು ಚಲೋ
Recommended Video
ಬೆಳಗಾವಿ, ಜೂನ್ 18: ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಸತೀಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಮಾನವ ಬಂಧುತ್ವ ವೇದಿಕೆಯು 'ಬೆಂಗಳೂರು ಚಲೋ' ಮಾಡಲಿದ್ದಾರೆ. ಹೀಗೊಂದು ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮಾನವ ಬಂಧುತ್ವ ವೇದಿಕೆ ವತಿಯಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲೇಬೆಕೆಂದು ಒತ್ತಾಯಿಸಿ ಬೆಳಗಾವಿಯಿಂದ ಬೆಂಗಳೂರಿಗೆ ಜೂನ್ 19ರಂದು ಸತೀಶ್ ಜಾರಕೊಹೊಳಿ ಬೆಂಬಲಿಗರು ಹೊರಡಲಿದ್ದಾರೆ. ಜೂನ್ 19ರಂದು ಬೆಳಗವಿಯ ಸಿಟಿ ರೈಲ್ವೇ ನಿಲ್ದಾಣದಿಂದ ಪ್ರತಿಭಟನೆ ಪ್ರಾರಂಭವಾಗಲಿದೆ.
'ಸಿದ್ದರಾಮಯ್ಯ-ಕುಮಾರಸ್ವಾಮಿ ಮಧ್ಯೆ ಯಾವುದೇ ಜಟಾಪಟಿಯಲ್ಲ'
ಮಾನವ ಬಂಧುತ್ವ ವೇದಿಕೆಯು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 'ಜನಾಗ್ರಹ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇಲ್ಲಿಯೂ ಸಹ ಕಾಂಗ್ರೆಸ್ ಹೈಕಮಾಂಡ್ ನಿಲುವಿನ ವಿರುದ್ಧ ಪ್ರತಿಭಟನೆ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ಮಟ್ಟು ಸೇರಿ ಹಲವು ಮುಖಂಡರು ಭಾಗವಹಿಸಲಿದ್ದಾರೆ.
ಸತೀಶ್ ಜಾರಕಿಹೊಳಿ ಅವರು ಕಳೆದ ಬಾರಿ ಸಚಿವರಾಗಿದ್ದರು. ಆದರೆ ಈ ಬಾರಿ ಅವರ ಸಹೋದರ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದ ಸತೀಶ್ ಅವರು ಭಾರಿ ಅಸಮಾಧಾನ ವ್ಯಕ್ತಪಡಿಸಿದರು. ಸಚಿವ ಸ್ಥಾನ ಸಿಗದುದ್ದಕ್ಕೆ ಬೇಸರಗೊಂಡು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೂ ಅವರು ರಾಜಿನಾಮೆ ನೀಡಿದ್ದಾರೆ.
ಕೆಪಿಸಿಸಿ ಹುದ್ದೆ ಬೇಡವೆಂದು ವರಿಷ್ಠರಲ್ಲಿ ಹೇಳಿದ್ದೇನೆ: ಜಾರಕಿಹೊಳಿ
ಅತೃಪ್ತ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಸತೀಶ್ ಅವರು ವೇಣುಗೋಪಾಲ್ ಅವರೊಂದಿಗೆ ಸಭೆಯ ಬಳಿಕ, ಸಚಿವ ಸ್ಥಾನ ಪ್ರಯತ್ನವನ್ನು ಕೈಬಿಟ್ಟಿದ್ದಾಗಿ ಹೇಳಿದ್ದರು. ಆದರೆ ನಮ್ಮೊಂದಿಗೆ ಇದ್ದ ಶಾಸಕರಿಗೆ ನಿಗಮ ಮಂಡಳಿ ಸ್ಥಾನಗಳನ್ನು ಕೊಡಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದಿದ್ದರು.