ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ : ಡಾ.ರವೀಂದ್ರ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ನವೆಂಬರ್ 14 : 'ಇಂದಿನಿಂದ ಖಾಸಗಿ ಆಸ್ಪತ್ರೆಗಳ ವೈದ್ಯರು ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ' ಎಂದು ಡಾ.ಎಚ್.ಎನ್.ರವೀಂದ್ರ ಹೇಳಿದರು.

'ಬೇಡಿಕೆಗೆ ಸರ್ಕಾರ ಬಗ್ಗದಿದ್ದರೆ, ವೃತ್ತಿ ತೊರೆಯುವ ಬೆದರಿಕೆ''ಬೇಡಿಕೆಗೆ ಸರ್ಕಾರ ಬಗ್ಗದಿದ್ದರೆ, ವೃತ್ತಿ ತೊರೆಯುವ ಬೆದರಿಕೆ'

ಬೆಳಗಾವಿಯಲ್ಲಿ ಮಂಗಳವಾರ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಎಚ್.ಎನ್.ರವೀಂದ್ರ ಅವರು, 'ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭವಾಗಲಿದೆ.

We will continue hunger strike says Dr. HN Ravindra

ನಾನು ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇನೆ' ಎಂದು ಹೇಳಿದರು.

ವೈದ್ಯರ ಮುಷ್ಕರವೂ ವೈದ್ಯನೇ ಹರಿಃ ಎಂಬ ತಪ್ಪು ಕಲ್ಪನೆಯೂವೈದ್ಯರ ಮುಷ್ಕರವೂ ವೈದ್ಯನೇ ಹರಿಃ ಎಂಬ ತಪ್ಪು ಕಲ್ಪನೆಯೂ

'ಈ ಮಸೂದೆ ತಿದ್ದುಪಡಿಯಾಗಿ ಮಂಡನೆಯಾಗುವ ತನಕ ಉಪವಾಸ ಮುಂದುವರೆಯಲಿದೆ. ಬಾಗಲಕೋಟೆ, ಹಾವೇರಿ, ಬೆಳಗಾವಿ, ಕೆಜಿಎಫ್, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳ ವೈದ್ಯರು ಇದಕ್ಕಾಗಿ ಆಗಮಿಸಿದ್ದಾರೆ' ಎಂದರು.

ಸಚಿವ ಸ್ಥಾನ ತೊರೆಯುವ ಬೆದರಿಕೆ ಹಾಕಿದ ರಮೇಶ್ ಕುಮಾರ್?ಸಚಿವ ಸ್ಥಾನ ತೊರೆಯುವ ಬೆದರಿಕೆ ಹಾಕಿದ ರಮೇಶ್ ಕುಮಾರ್?

ರಾಜೀನಾಮೆ ನೀಡುತ್ತೇನೆ ಎಂಬ ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರವೀಂದ್ರ ಅವರು, 'ರಾಜೀನಾಮೆ ಕೊಡುವೆ ಎನ್ನುವುದು ಅವರ ವಯಕ್ತಿಕ ವಿಚಾರ. ಅವರು ರಾಜೀನಾಮೆ ಕೊಡುವ ಬದಲು ಸಮಸ್ಯೆಗೆ ಸ್ಪಂದಿಸಲಿ. ಇಲ್ಲವಾದರೆ ನಮ್ಮನ್ನಾದರೂ ಕೊಲ್ಲಲಿ. ಸುಮ್ಮನೆ ಸಂಬಂಧಗಳನ್ನು ಹಾಳು ಮಾಡಿಕೊಳ್ಳುವುದು ಬೇಡ' ಎಂದರು.

ಗಂಭೀರವಾಗಿ ತೆಗೆದುಕೊಳ್ಳಿ : 'ವೈದ್ಯರ ಪ್ರತಿಭಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, 'ಈಗಾಗಲೇ ಎರಡು ಸಾವು ಸಂಭವಿಸಿದೆ. ಇನ್ನಷ್ಟು ಅನಾಹುತ ಆಗುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಸರ್ಕಾರವೇ ಆಗುವ ದುಷ್ಪರಿಣಾಮಗಳಿಗೆ ಕಾರಣವಾಗುತ್ತದೆ' ಎಂದರು.

English summary
Indian Medical Association state president Dr.H.N.Ravindra said we will continue hunger strike. Private hospital doctors demanding for the Karnataka government not to table Karnataka Private Medical Establishments (KPME) Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X