ಬೆಳಗಾವಿ ಅಧಿವೇಶನಕ್ಕೆ ಹಾಜರಾಗುವಂತೆ ಕಾಂಗ್ರೆಸ್ ನಿಂದ ವಿಪ್ ಜಾರಿ
ಬೆಳಗಾವಿ, ನವೆಂಬರ್ 13: ಇಂದಿನಿಂದ (ಸೋಮವಾರ) ಆರಂಭವಾಗಿರುವ ಚಳಿಗಾಲ ಅಧಿವೇಶನದ ಮೊದಲ ದಿನವೇ ಶಾಸಕರು, ಸಚಿವರು ಇಲ್ಲದೆ ಬೆಳಗಾವಿಯ ಸುವರ್ಣ ಸೌಧ ಬಿಕೋ ಎನ್ನುತಿತ್ತು.
ಖಾಲಿ ಕುರ್ಚಿಗಳ ಅಧಿವೇಶನ, ಅತ್ತ ಮರಾಠಿ ಪುಂಡಾಟ; ದಿನದ 10 ಬೆಳವಣಿಗೆಗಳು
ಮಂಗಳವಾರದಿಂದ ಅಧಿವೇಶನದಲ್ಲಿ ಜಾರ್ಜ್ ತಲೆದಂಡ, ಮತ್ತಿತರ ವಿಷಯಗಳ ಚರ್ಚೆ ತಾರಕಕ್ಕೇರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಎಲ್ಲರೂ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗಬೇಕೆಂದು ವಿಧಾನಸಭೆ, ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ವಿಪ್ ಜಾರಿ ಮಾಡಿದೆ.
ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು ಎಂದು ಕಾಂಗ್ರೆಸ್ ಸಚೇತಕ ಅಶೋಕ್ ಪಟ್ಟಣ್ ಅವರು ಶಾಸಕರಿಗೆ ಶಾಸಕರು ವಿಪ್ ಜಾರಿಗೊಳಿಸಿದರು.
ಪ್ರತೀ ವರ್ಷದಂತೆ ಈ ವರ್ಷವೂ ಬೆಳಗಾವಿ ಅಧಿವೇಶನ ನೀರಸವಾಗಿಯೇ ಆರಂಭವಾಗಿದೆ. ಮೊದಲ ದಿನ ವಿಧಾನಸಭೆಯಲ್ಲಿ ಸಚಿವರು ಸೇರಿ ಕೇವಲ 53 ಜನರು ಹಾಜರಿದ್ದರು. ಹಲವು ರೋಚಕವೂ ಅಷ್ಟೇ ನೀರಸವೂ ಆದ ಬೆಳವಣಿಗೆಗಳಿಗೆ ಇಂದಿನ ಬೆಳಗಾವಿ ವಿಧಾನಸಭೆ ಕಲಾಪ ಸಾಕ್ಷಿಯಾಯಿತು.
Comments
belagavi assembly session congress bjp jds district news ಬೆಳಗಾವಿ ಕಾಂಗ್ರೆಸ್ ವಿಧಾನಸಭೆ ಅಧಿವೇಶನ ಜಿಲ್ಲಾಸುದ್ದಿ
English summary
The Karnataka congress issued whip to ministers and MLA and MLC for attend in the Belagavi winter assembly season.
Story first published: Monday, November 13, 2017, 21:40 [IST]