ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಾರಸ್ವಾಮಿ ರಾಜ್ಯ ಒಡೆಯಲು ಹೊರಟಿದ್ದಾರೆ: ಯಡಿಯೂರಪ್ಪ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿಯನ್ನ ತರಾಟೆಗೆ ತೆಗೆದುಕೊಂಡ ಬಿ ಎಸ್ ಯಡಿಯೂರಪ್ಪ | Oneindia Kannada

ಬೆಳಗಾವಿ, ಜುಲೈ.31: ಕರ್ನಾಟಕ ಏಕೀಕರಣ ಆದ ಮೇಲೆ ಇದುವರೆಗೆ ಇಷ್ಟು ದೊಡ್ಡ ಪ್ರಮಾಣದ ಹೋರಾಟ ಆಗಿರಲಿಲ್ಲ. ಇಂದು ಸುವರ್ಣ ಸೌಧದ ಎದುರು ಸ್ವಾಮೀಜಿಗಳು ಪ್ರತಿಭಟನೆ ಮಾಡುವ ಸಂದರ್ಭ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.

ಇಂದಿನ ಪ್ರತಿಭಟನೆಗೆ ಕಾರಣ ಮುಖ್ಯಮಂತ್ರಿ ಕುಮಾರಸ್ವಾಮಿಯರ ಹೇಳಿಕೆ. ಇದುವರೆಗೆ ಮಾಜಿ ಪ್ರಧಾನಿ ದೇವೇಗೌಡರು ಒಂದು ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿಲ್ಲ. ಕುಮಾರಸ್ವಾಮಿಯವರು ತಂದೆಯ ಸಹಮತವಿಲ್ಲದೆ ಯಾವುದೇ ಮಾತುಗಳನ್ನು ಆಡುವುದಿಲ್ಲ.

ಉಸಿರಿರುವ ತನಕ ರಾಜ್ಯ ವಿಭಜನೆಗೆ ಅವಕಾಶ ಕೊಡಲಾರೆ: ಯಡಿಯೂರಪ್ಪಉಸಿರಿರುವ ತನಕ ರಾಜ್ಯ ವಿಭಜನೆಗೆ ಅವಕಾಶ ಕೊಡಲಾರೆ: ಯಡಿಯೂರಪ್ಪ

ನಾನು ಹೋರಾಟಗಾರರಲ್ಲಿ ಕೈಮುಗಿದು ಮನವಿ ಮಾಡಿಕೊಳ್ಳುತ್ತಾನೆ. ಯಾರೂ ಕೂಡ 2ನೇ ತಾರಿಖಿನಂದು ಬಂದ್ ಆಚರಿಸಬೇಡಿ. ನಾವು ಸದನದ ಒಳಗೆ ಹೊರಗೆ ನಿಮ್ಮ ಪರವಾಗಿ ಹೋರಾಟ ನಡೆಸಲು ಸಿದ್ಧರಿದ್ದೇವೆ.

Yeddyurappa Says Kumaraswamy is going to break the state

ಎಷ್ಟೋ ಜನ ಸಾಹಿತಿಗಳು, ಗಣ್ಯರ ಹೋರಾಟದಿಂದ ಅಖಂಡ ಕರ್ನಾಟಕ ನಿರ್ಮಾಣವಾಗಿದೆ. ನಿಜವಾಗಿಯೂ ಮುಖ್ಯಮಂತ್ರಿಗಳಿಗೆ ಕಾಳಜಿ ಇದ್ದರೆ ಅವರು ಇಲ್ಲಿ ಬಂದು ಜನರ ಹತ್ತಿರ ಕ್ಷಮೆ ಕೇಳಬೇಕಿತ್ತು.

ಕುಟುಂಬ ರಾಜಕಾರಣಕ್ಕೆ ನೀವು ಪಕ್ಷಗಳನ್ನ ಒಡೆದಿದ್ದಿರಿ. ನಿಮ್ಮೊಂದಿಗಿದ್ದವರಿಗೆ ಮೋಸ ಮಾಡಿದ್ದಿರಿ. ಇಂದು ರಾಜ್ಯ ಒಡೆಯಲು ಹೊರಟಿದ್ದೀರಿ. ಆರುವರೆ ಕೋಟಿ ಕನ್ನಡದ ಜನ ನಿಮ್ಮನ್ನ ಕ್ಷಮಿಸಲ್ಲ ಎಂದು ಮುಖ್ಯಮಂತ್ರಿಗಳ ವಿರುದ್ಧ ಹರಿಹಾಯ್ದರು.

English summary
Former Chief Minister BS Yeddyurappa Said that Kumaraswamy is going to break the state. Parties have been broken to family politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X