Get Updates
Get notified of breaking news, exclusive insights, and must-see stories!

ಕಲಾ ಪ್ರವೀಣೆ ಬಳ್ಳಾರಿಯ ಅನಿತಾಗೆ ಐಎಎಸ್ ಮಾಡುವ ಕನಸು

ಬಳ್ಳಾರಿ, ಮೇ 25 : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಬಳ್ಳಾರಿಯ ಅನಿತಾ ಬಸಪ್ಪ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಐಎಎಸ್ ಅಧಿಕಾರಿ ಆಗಬೇಕು ಎಂಬುದು ಅನಿತಾ ಅವರ ಕನಸಾಗಿದೆ. [ಕಲೆಯಲ್ಲಿ ಅರಳಿದ ಧಾರವಾಡದ ಪ್ರತಿಭೆ ಶಶಿಕಲಾ]

ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಇಂದೂ ಪಿಯು ಕಾಲೇಜಿನ ಅನಿತಾ ಬಸಪ್ಪ 600 ಕ್ಕೆ 585 ಅಂಕಗಳನ್ನು ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅನಿತಾ ಅವರ ಮನೆಯ ಬಡತನ ಅವರ ಓದಿಗೆ ಅಡ್ಡಿಯಾಗಿಲ್ಲ. [ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ]

anitha basappa

ಅನಿತಾ ಅವರ ತಂದೆ ಬಸಪ್ಪ ಅವರು ಕೊಟ್ಟೂರು ಬಸ್ ನಿಲ್ದಾಣದಲ್ಲಿ ಬಾಳೆ ಹಣ್ಣು ಮಾರಾಟ ಮಾಡುತ್ತಾರೆ. ಮನೆಯ ಕಷ್ಟದ ನಡುವೆಯೂ ಅನಿತಾ ಅವರ ಓದಿಗೆ ಮನೆಯವರು ಸಂಪೂರ್ಣ ಬೆಂಬಲ ನೀಡಿದ್ದಾರೆ. [ಬಳ್ಳಾರಿಯ ಯಶ್ವಿತಾ ಸಾಧನೆಗೆ ಅಡ್ಡಿಯಾಗದ ಬಡತನ]

basappa

ಫಲಿತಾಂಶದ ಬಳಿಕ ಒನ್ ಇಂಡಿಯಾ ಜೊತೆ ಮಾತನಾಡಿದ ಅನಿತಾ ಅವರು ಸಂತಸ ಹಂಚಿಕೊಂಡರು. 'ಐಎಎಸ್ ಅಧಿಕಾರಿಯಾಗಿ ಸಮಾಜ ಸೇವೆ ಮಾಡಬೇಕು ಎಂಬ ಕನಸು ಹೊಂದಿರುವುದಾಗಿ' ತಿಳಿಸಿದರು. [2ನೇ ಪಿಯುಸಿ ಫಲಿತಾಂಶ: ಯಾವ ಜಿಲ್ಲೆ ಯಾವ ಸ್ಥಾನದಲ್ಲಿದೆ?]

'ಎರಡು ಅಥವ ಮೂರನೇ ಸ್ಥಾನಗಳಿಸುವ ನಿರೀಕ್ಷೆ ಇತ್ತು. ಆದರೆ, ಮೊದಲ ಸ್ಥಾನ ಪಡೆದಿರುವುದು ಸಂತಸ ಮೂಡಿಸಿದೆ. ನನ್ನ ಸಾಧನೆಗೆ ತಂದೆ-ತಾಯಿ ಸೇರಿದಂತೆ ಕುಟುಂಬದವರೆಲ್ಲರ ಸಹಕಾರವೂ ಇದೆ' ಎನ್ನುತ್ತಾಳೆ ಅನಿತಾ. [ಇಂಗ್ಲಿಶ್ ನಲ್ಲಿ ಓದಿ]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+