ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ಬಾರಿ ಹಂಪಿ ಉತ್ಸವ ಸರಳವಾಗಿ ಆಚರಣೆ: ಎಚ್‌ಡಿ ಕುಮಾರಸ್ವಾಮಿ

|
Google Oneindia Kannada News

ಬಳ್ಳಾರಿ, ಡಿಸೆಂಬರ್ 4: ಪ್ರತಿಪಕ್ಷ ಬಿಜೆಪಿ ಹಂಪಿ ಉತ್ಸವ ರದ್ದತಿ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಹಂಪಿ ಉತ್ಸವ ಆಚರಿಸಲು ಮುಂದಾಗಿದೆ.

 ಹಂಪಿ ಉತ್ಸವಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌ ಹಂಪಿ ಉತ್ಸವಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌

ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮ ಸ್ವಂತ ವೆಚ್ಚದಲ್ಲಿ ಹಂಪಿ ಉತ್ಸವ ಆಚರಿಸಲು ಮುಂದಾಗಿರುವ ಬೆನ್ನಲ್ಲೇ ಬಿಜೆಪಿಗೆ ಟಾಂಗ್ ಕೊಡಲು ಮುಂದಾದ ಎಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವೇ ಸರಳವಾಗಿ ಹಂಪಿ ಉತ್ಸವ ಆಚರಿಸಲಿದೆ ಎಂದು ಹೇಳಿದರು.

 ದಶಕಗಳ ಹಂಪಿ ಉತ್ಸವಕ್ಕೆ ಸರ್ಕಾರದ ತಿಲಾಂಜಲಿ? ದಶಕಗಳ ಹಂಪಿ ಉತ್ಸವಕ್ಕೆ ಸರ್ಕಾರದ ತಿಲಾಂಜಲಿ?

ವಿಧಾನಸೌಧದಲ್ಲಿ ಮಂಗಳವಾರ ರಾಜ್ಯ ಸಂಸದರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂಪಿ ಉತ್ಸವವನ್ನು ಮಾಡುವುದಿಲ್ಲ ಎಂದು ನಾವೆಲ್ಲಿಯೂ ಹೇಳಿಲ್ಲ ಆದರೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಸಭೆ ಕರೆದು ಕೆಲವು ತೀರ್ಮಾನಗಳನ್ನು ತೆಗೆದುಕೊಂಡಿದ್ದರು.

CM clarifies govt will celebrate Hampi Utsav

ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬರಗಾಲ ತೀವ್ರವಾಗಿರುವುದರಿಂದ ಈ ರೀತಿಯ ನಿರ್ಧಾರಕ್ಕೆ ಚಿಂತನೆ ನಡೆಸಲಾಗಿತ್ತು. ಆದರೆ ರಾಜ್ಯ ಸರ್ಕಾರ ಸರಳವಾಗಿಯಾದರೂ ಈ ಬಾರಿ ಹಂಪಿ ಉತ್ಸವವನ್ನು ಆಚರಿಸಲಿದೆ. ಬಳ್ಳಾರಿ ಜಿಲ್ಲೆ ಹಾಗೂ ಆ ಭಾಗದ ಜನರ ಭಾವನೆಗಳಿಗೆ ಸ್ಪಂದಿಸಿ ಸರ್ಕಾರ ಹಂಪಿ ಉತ್ಸವ ಆಚರಿಸಲಿದೆ ಎಂದು ಸ್ಪಷ್ಟಪಡಿಸಿದರು.

 ವೀಕ್ಷಿಸಲೇಬೇಕಾದ 98 ಸ್ಥಳಗಳ ಪಟ್ಟಿಯಲ್ಲಿ ಹಂಪಿ ಇಲ್ಲ, ಏನಿದೆಲ್ಲ? ವೀಕ್ಷಿಸಲೇಬೇಕಾದ 98 ಸ್ಥಳಗಳ ಪಟ್ಟಿಯಲ್ಲಿ ಹಂಪಿ ಇಲ್ಲ, ಏನಿದೆಲ್ಲ?

ಇತ್ತೀಚೆಗಷ್ಟೆ ಬಳ್ಳಾರಿ ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂಪಿ ಉತ್ಸವವನ್ನು ಆಚರಿಸದೆ ಇರಲು ನಿರ್ಧರಿಸಿದೆ ಎಂದು ಪ್ರಕಟಿಸಿದ್ದರು.

English summary
Chief minister HD Kumaraswamy has clarified that state government never declared that Hampi utsav not been celebrated. He also said owing to the feelings of the Ballari district people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X