ಸಿ. ಆರ್. ನಸೀರ್ ಅಹಮದ್ ಸಂಕ್ಷಿಪ್ತ ಪರಿಚಯ
ಕೃಷ್ಣದೇವರಾಯ ವಿವಿಯಿಂದ ಗೌರವ ಡಾಕ್ಟರೇಟ್ ಪದವಿಗೆ ಪ್ರಾತ್ರರಾಗುತ್ತಿರುವ ಸಿ.ಆರ್.ನಸೀರ್ ಅಹಮದ್ ಅವರು, ಜನವರಿ 5, 1972ರಲ್ಲಿ ದಾವಣೆಗೆರೆಯ ಪ್ರತಿಷ್ಠಿತ ಉರ್ದು ಶಿಕ್ಷಕರ ಕುಟುಂಬದಲ್ಲಿ ಜನಿಸಿದರು.
ಪ್ರಸ್ತುತ ರಹಮಾನಿಯ ಅರಬಿಕ್ ಮದರಸಾ ಮತ್ತು ಅನಾಥಾಶ್ರಮ, ದಾವಣಗೆರೆ ಹಾಗೂ ಮೌಲಾನಾ ಅಜಾದ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ, ಅಂಜುಮನ್-ಎ-ತರಕ್ಕಿಯ ಉಪಾಧ್ಯಕ್ಷರಾಗಿ, ತಂಜೀಮುಲ್ ಮುಸ್ಲಿಂ ನಿಧಿ ಸಂಘದ ಆಡಳಿತ ಮಂಡಳಿಯ ಸದಸ್ಯರಾಗಿ, ಹಾಗೂ ಇನ್ನೂ ಅನೇಕ ಸಂಘಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸಿ.ಆರ್.ನಸೀರ್ ಅಹಮದ್ ಅವರು, ಲೋಕೋಪಕಾರಿ ಮತ್ತು ಸಾಮಾಜಿಕ ಕೆಲಸ ಕಾರ್ಯಗಳಿಗೆ ಹೆಸರುವಾಸಿಯಾಗಿರುತ್ತಾರೆ. ಬಡತನ ರೇಖೆಗಿಂತ ಕೆಳಗಿರುವ ಜನರಿಗೆ, ಅಂಗ ವಿಕಲರಿಗೆ, ವಿಧವೆಯರಿಗೆ, ಬಡ ವಿದ್ಯಾರ್ಥಿಗಳಿಗೆ ಹಾಗೂ ಸಮಾಜದಲ್ಲಿ ತುಳಿತಕ್ಕೊಳಗಾದವರಿಗೆ ನೆರವು ನೀಡಿ ಆಧಾರವಾಗಿರುತ್ತಾರೆ.
ಸಿ.ಆರ್.ನಸೀರ್ ಅಹಮದ್ ಅವರ ಆಸಕ್ತಿಯನ್ನು ಗುರುತಿಸಿ ಕರ್ನಾಟಕ ಸರ್ಕಾರವು ಇವರನ್ನು ಕರ್ನಾಟಕ ರಾಜ್ಯ ಯೋಜನಾ ಮಂಡಳಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮಂಡಳಿ, ಕರ್ನಾಟಕ ಅಭಿವೃದ್ಧಿ ಅವಲೋಕನ ಸಮಿತಿ, ವಕ್ಫ್ ಸಲಹಾ ಸಮಿತಿ ಹಾಗೂ ಇನ್ನೂ ಹಲವು ಮಂಡಳಿಗಳಿಗೆ ನಾಮ ನಿರ್ದೇಶನ ಮಾಡಿರುತ್ತದೆ.
ಭಾರತ ಸರ್ಕಾರವು ಇವರನ್ನು ಸಿಂಡಿಕೇಟ್ ಬ್ಯಾಂಕಿನ ಅಧಿಕಾರೇತರ ನಿರ್ದೇಶಕರನ್ನಾಗಿ, ಕರಕುಶಲ ಮಂಡಳಿಯ ಸದಸ್ಯರನ್ನಾಗಿ, ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿ, ಬೆಂಗಳೂರು ಇದರ ಸದಸ್ಯರನ್ನಾಗಿ, ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಿರುತ್ತದೆ. ಇವರ ಎಲ್ಲಾ ಸೇವೆಗಳನ್ನು ಪರಿಗಣಿಸಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸುತ್ತಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications