ವೀರಶೈವ ಸಮಾಜಕ್ಕೆ ಸಿಎಂ ಸ್ಥಾನ ತಪ್ಪಿದ್ದಕ್ಕೆ ರಂಭಾಪುರಿ ಶ್ರೀ ಆಕ್ರೋಶ
ಬಳ್ಳಾರಿ, ಮೇ 20: ವೀರಶೈವ ಸಮಾಜದ ಮುಖಂಡ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ರಂಭಾಪುರಿ ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವೀರಶೈವ ಸಮಾಜದ ಮುಖಂಡ ಯಡಿಯೂರಪ್ಪ ಅವರಿಗೆ ಅಧಿಕಾರ ತಪ್ಪಿಸಲು ಜೆಡಿಎಸ್-ಕಾಂಗ್ರೆಸ್ ಕುತಂತ್ರ ಮಾಡಿರುವುದನ್ನು ರಾಜ್ಯದ ಜನ ಒಪ್ಪಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.
ಸಿಕ್ಕ ಅವಕಾಶ ಬಳಸಿಕೊಳ್ಳಲು ವಿಫಲರಾದ ಯಡಿಯೂರಪ್ಪ ಎಡವಿದ್ದು ಎಲ್ಲಿ?
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಪವಿತ್ರವಾಗಿದ್ದು, ಈ ಮೈತ್ರಿ ರಾಜ್ಯದ ಜನರಿಗೆ ನೋವುಂಟು ಮಾಡಿದೆ, ಯಡಿಯೂರಪ್ಪ ಅವರಿಗೆ ಹಲವು ಜೆಡಿಎಸ್-ಕಾಂಗ್ರೆಸ್ ಶಾಸಕರು ಬೆಂಬಲ ನೀಡಲು ಮುಂದಾಗಿದ್ದರು ಆದರೆ ಅವರನ್ನು ಕಟ್ಟಿಹಾಕಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.
ಚುನಾವಣೆಗೆ ಮುನ್ನ ಮೈತ್ರಿ ಮಾಡಿಕೊಳ್ಳದ ಕಾಂಗ್ರೆಸ್, ಜೆಡಿಎಸ್ ಚುನಾವಣೆ ನಂತರ ಕೇವಲ ಅಧಿಕಾರದ ಆಸೆಗಾಗಿ ಮೈತ್ರಿ ಮಾಡಿಕೊಂಡಿದೆ, ಯಡಿಯೂರಪ್ಪ ಅವರು ರಾಜ್ಯದ ಜನರ ಮನಸ್ಸಿನಲ್ಲಿದ್ದಾರೆಂದು ಅವರು ಹೇಳಿದರು.
Comments
district news yediyurappa jds congress alliance ಬಳ್ಳಾರಿ ಜಿಲ್ಲಾಸುದ್ದಿ ಯಡಿಯೂರಪ್ಪ ವೀರಶೈವ ಜೆಡಿಎಸ್ ಕಾಂಗ್ರೆಸ್ ಮೈತ್ರಿ veerashaiva
English summary
Rambapuri Sri lambasted on JDS-Congress alliance. He upset about Veerashiva leader BS Yeddyurappa missed the CM post. He said JDS-Congress alliance is not pure.
Story first published: Sunday, May 20, 2018, 14:44 [IST]