ಕರೆದಲ್ಲಿಗೆ ಬಾರದ, ಬಂದರೂ ಹೆಚ್ಚು ವಸೂಲಿ ಮಾಡಿದ 1,116 ಆಟೋ ಚಾಲಕರ ವಿರುದ್ಧ ಕೇಸ್
ಬೆಂಗಳೂರು, ಅಕ್ಟೋಬರ್ 25: ಪ್ರಯಾಣಿಕರಿಗೆ ಹೆಚ್ಚುವರಿ ಶುಲ್ಕ ವಿಧಿಸುವ ಹಾಗೂ ಕರೆದಲ್ಲಿಗೆ ಬಾರದೆ ಪ್ರಯಾಣ ನಿರಾಕರಿಸುವ ಆಟೋ ಚಾಲಕರ ವಿರುದ್ಧ ಬೆಂಗಳೂರು ನಗರ ಸಂಚಾರ ಪೊಲೀಸರು ಸಮರ ಸಾರಿದ್ದಾರೆ. ವಿಶೇಷ ಕಾರ್ಯಾಚರಣೆ ಮೂಲಕ 1,116 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಬೆಂಗಳೂರು ನಾಗರಿಕರಿಂದ ಸಲ್ಲಿಕೆಯಾದ ದೂರಿನ ಮೇರೆಗೆ ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಬಿ. ಆರ್.ರವಿಕಾಂತೇಗೌಡ ಅವರ ಮಾರ್ಗದರ್ಶನದಲ್ಲಿ ಬೆಂಗಳೂರಿನಾದ್ಯಂತ ಸಂಚಾರ ಪೊಲೀಸರು ಮಂಗಳವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಪ್ರಯಾಣಿಕರ ಮೇಲೆ ಹೆಚ್ಚುವರಿ ಪ್ರಯಾಣ ಶುಲ್ಕ ವಿಧಿಸುವ ಹಾಗೂ ಕರೆದಲ್ಲಿಗೆ ಬಾರದ ಸವಾರಿಯನ್ನು ತಿರಸ್ಕರಿಸುವ ಆಟೋಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.
Today we have conducted special drive against Auto Rickshaw and booked Refuse to go for hire-03 Cases & Demanding excess fare-02 Cases Total 05 Cases booked & taken legal action as per law.@blrcitytraffic @DCPTrNorthBCP @BlrCityPolice pic.twitter.com/j2pw90xR7f
— HEBBALA TRAFFIC PS (@hebbaltrafficps) October 24, 2022
ಸಮರ್ಪಕ ಸೇವೆ ನೀಡದೇ ತಪ್ಪೆಸಗಿದ ಆಟೋ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಂಡು, 1,000 ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ಒಟ್ಟು 312 ಆಟೋಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಚಾಲಕರು ದಂಡ ಪಾವತಿಸಿದ ಬಳಿಕ 307 ವಾಹನಗಳನ್ನು ಬಿಟ್ಟು ಕಳುಹಿಸಲಾಗಿದೆ.

ಕಾರ್ಯಾಚರಣೆ ವೇಳೆ ಸಂಚಾರ ಪೊಲೀಸರು ಚಾಲಕರು ಸವಾರಿ ನಿರಾಕರಿಸಿದಕ್ಕೆ 270 ಆಟೋಗಳು ಮತ್ತು ಸುಮಾರು 312 ಪ್ರಯಾಣಿಕರಿಗೆ ಹೆಚ್ಚಿನ ಶುಲ್ಕ ವಿಧಿಸಿದ್ದ ಆರೋಪ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
ಮಫ್ತಿಯಲ್ಲಿ ಕಾರ್ಯಾಚರಣೆ !
ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಬಿ.ಆರ್.ರವಿಕಾಂತೇಗೌಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸಾರ್ವಜನಿಕರಿಂದ ವಿಶೇಷವಾಗಿ ಹಿರಿಯ ನಾಗರಿಕರಿಂದ ಆಟೋ ಚಾಲಕರು ಮಾಡುವ ತಪ್ಪುಗಳ ಬಗ್ಗೆ ದೂರುಗಳು ಬಂದಿದ್ದವು. ಅದರ ಆಧಾರದಲ್ಲಿ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ.
ನಮ್ಮ ಟ್ರಾಫಿಕ್ ಪೊಲೀಸರು ಮಫ್ತಿಯಲ್ಲಿ ಪ್ರಯಾಣಿಕರಂತೆ ಆಟೋಗಳಲ್ಲಿ ಪ್ರಯಾಣಿಸಿದ್ದಾರೆ. ಪ್ರಯಾಣದ ನಂತರ ಆಟೋ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟ ಹಾಗೂ ಸವಾರಿ ತಿರಸ್ಕರಿಸಿದ ಚಾಲಕರು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ ಹಲವು ಚಾಲಕರ ಸಮವಸ್ತ್ರ ಧರಿಸದೇ ಸೇವೆ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಜೊತೆಗೆ ಚಾಲನೆ ಮಾಡುವಾಗ ಮೊಬೈಲ್ ಫೋನ್ಗಳ ಬಳಕೆ, ದೋಷಯುಕ್ತ ನಂಬರ್ ಪ್ಲೇಟ್ಗಳು ಸೇರಿದಂತೆ ಇನ್ನಿತರ ಕಾರಣಗಳಿಗೂ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications