1 ಕೋಟಿ ಸಸಿ ನೆಡುವ ವಿಶ್ವದಾಖಲೆಯಲ್ಲಿ ಪಾಲ್ಗೊಳ್ಳಿ
ಬೆಂಗಳೂರು, ಜು.28: ಭಾರತದೆಲ್ಲೆಡೆ ಒಂದು ದಿನದಲ್ಲಿ ಒಂದು ಕೋಟಿ ಸಸಿಯನ್ನು ನೆಟ್ಟು ವಿಶ್ವ ದಾಖಲೆ ನಿರ್ಮಿಸಲು ಯುನಿಕ್ ವರ್ಲ್ಡ್ ರೆಕಾರ್ಡ್ ಸಂಸ್ಥೆ ಉದ್ದೇಶಿಸಿದ್ದು, ಈ ವಿಶ್ವ ದಾಖಲೆ ತೀರ್ಪುಗಾರರಾಗಿ ರೆಕಾರ್ಡ್ ರಮೇಶ್ ಬಾಬು ಆಯ್ಕೆಯಾಗಿದ್ದಾರೆ.
ಆಗಸ್ಟ್ 24ರಂದು ಸಸಿ ನೆಡುವ ವಿಶ್ವದಾಖಲೆ ನಡೆಯಲಿದ್ದು, ಭಾರತದ ನೈರುತ್ಯ ವಲಯದ ತೀರ್ಪುಗಾರರಾಗಿ ರೆಕಾರ್ಡ್ ರಮೇಶ್ ಬಾಬು ಅವರನ್ನು ಯುನಿಕ್ ವರ್ಲ್ಡ್ ರೆಕಾರ್ಡ್ ಸಂಸ್ಥೆ ನೇಮಿಸಿದೆ. [ವಿಶ್ವ ದಾಖಲೆ ವೀರ ರಮೇಶ್ ಬಾಬು ಸಂದರ್ಶನ]

ಅಂದು ಬೆಳಗ್ಗೆ 9 ಗಂಟೆಯಿಂದ 5 ಗಂಟೆಯ ಒಳಗಡೆ ದೇಶದೆಲ್ಲೆಡೆ ಯಾರು ಬೇಕಾದರೂ ಯಾವುದೇ ಸಸಿಯನ್ನು ನೆಡುವ ಮೂಲಕ ಈ ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದು ರಮೇಶ್ ಬಾಬು ತಿಳಿಸಿದ್ದಾರೆ.
ಬೆಂಗಳೂರಿನ ನಿವೃತ್ತ ಮೆಟಲರ್ಜಿ ವಿಜ್ಞಾನಿ ಆಗಿರುವ ಪ್ರೊ.ಡಾ. ಎಸ್. ರಮೇಶ್ ಬಾಬು ಇದುವರೆಗೂ 50 ವಿಶ್ವ ದಾಖಲೆ 9 ರಾಷ್ಟ್ರೀಯ ದಾಖಲೆಗಳನ್ನು ಬರೆದಿದ್ದಾರೆ. ಇವರಿಗೆ ದಾಖಲೆ ಮಾಡುವುದು ಅಂದರೆ ನೀರು ಕುಡಿದಷ್ಟು ಸಲೀಸು.
ದಾಖಲೆ ಮಾಡುವುದನ್ನೇ ಹವ್ಯಾಸ ವಾಗಿರಿಸಿಕೊಂಡಿರುವ ಇವರು ಭಾರತದಲ್ಲೇ ಅತಿ ಹೆಚ್ಚು ದಾಖಲೆ ಮಾಡಿದ ವ್ಯಕ್ತಿ ಎಂಬ ಪಟ್ಟಕ್ಕೆ ಭಾಜನರಾಗಿದ್ದಾರೆ. ದಾಖಲೆಗಳ ಸಂಖ್ಯೆಯಿಂದಾಗಿಯೇ ಈಗ ''ರೆಕಾರ್ಡ್ ರಮೇಶ್'' ಎಂದು ಪ್ರಸಿದ್ಧಿ ಪಡೆದಿದ್ದಾರೆ. ಬೆಂಗಳೂರಿನ ಟಾಟಾ ನಗರದ ನಿವಾಸಿಯಾಗಿರುವ 57 ವರ್ಷದ ರಮೇಶ್ ಬಾಬು ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ರಾಷ್ಟ್ರ ಮತ್ತು ವಿಶ್ವ ಮಟ್ಟದಲ್ಲಿ ದಾಖಲೆ ನಿರ್ಮಿಸುತ್ತಿದ್ದಾರೆ.
ಇವರ ದಾಖಲೆಗಳನ್ನು ಮೆಚ್ಚಿ ಇದೀಗ ಇವರಿಗೆ ಯುನಿಕ್ ವರ್ಲ್ಡ್ ರೆಕಾರ್ಡ್ ಸಂಸ್ಥೆ ಒಂದು ಕೋಟಿ ಗಿಡ ನೆಡುವ ವಿಶ್ವದಾಖಲೆ ನಿರ್ಮಿಸುವ ವನಮಹೋತ್ಸವ ಕಾರ್ಯಕ್ರಮದ ನೈರುತ್ಯ ವಲಯದ ತೀರ್ಪುಗಾರರಾಗಿ ನೇಮಿಸಿದೆ.
ಹೆಚ್ಚಿನ ಮಾಹಿತಿಗೆ ರಮೇಶ್ ಬಾಬು ಅವರನ್ನು ಸಂಪರ್ಕಿಸಬಹುದು: 94490 13887
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications