1 ಕೋಟಿ ಸಸಿ ನೆಡುವ ವಿಶ್ವದಾಖಲೆಯಲ್ಲಿ ಪಾಲ್ಗೊಳ್ಳಿ
ಬೆಂಗಳೂರು, ಜು.28: ಭಾರತದೆಲ್ಲೆಡೆ ಒಂದು ದಿನದಲ್ಲಿ ಒಂದು ಕೋಟಿ ಸಸಿಯನ್ನು ನೆಟ್ಟು ವಿಶ್ವ ದಾಖಲೆ ನಿರ್ಮಿಸಲು ಯುನಿಕ್ ವರ್ಲ್ಡ್ ರೆಕಾರ್ಡ್ ಸಂಸ್ಥೆ ಉದ್ದೇಶಿಸಿದ್ದು, ಈ ವಿಶ್ವ ದಾಖಲೆ ತೀರ್ಪುಗಾರರಾಗಿ ರೆಕಾರ್ಡ್ ರಮೇಶ್ ಬಾಬು ಆಯ್ಕೆಯಾಗಿದ್ದಾರೆ.
ಆಗಸ್ಟ್ 24ರಂದು ಸಸಿ ನೆಡುವ ವಿಶ್ವದಾಖಲೆ ನಡೆಯಲಿದ್ದು, ಭಾರತದ ನೈರುತ್ಯ ವಲಯದ ತೀರ್ಪುಗಾರರಾಗಿ ರೆಕಾರ್ಡ್ ರಮೇಶ್ ಬಾಬು ಅವರನ್ನು ಯುನಿಕ್ ವರ್ಲ್ಡ್ ರೆಕಾರ್ಡ್ ಸಂಸ್ಥೆ ನೇಮಿಸಿದೆ. [ವಿಶ್ವ ದಾಖಲೆ ವೀರ ರಮೇಶ್ ಬಾಬು ಸಂದರ್ಶನ]

ಅಂದು ಬೆಳಗ್ಗೆ 9 ಗಂಟೆಯಿಂದ 5 ಗಂಟೆಯ ಒಳಗಡೆ ದೇಶದೆಲ್ಲೆಡೆ ಯಾರು ಬೇಕಾದರೂ ಯಾವುದೇ ಸಸಿಯನ್ನು ನೆಡುವ ಮೂಲಕ ಈ ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದು ರಮೇಶ್ ಬಾಬು ತಿಳಿಸಿದ್ದಾರೆ.
ಬೆಂಗಳೂರಿನ ನಿವೃತ್ತ ಮೆಟಲರ್ಜಿ ವಿಜ್ಞಾನಿ ಆಗಿರುವ ಪ್ರೊ.ಡಾ. ಎಸ್. ರಮೇಶ್ ಬಾಬು ಇದುವರೆಗೂ 50 ವಿಶ್ವ ದಾಖಲೆ 9 ರಾಷ್ಟ್ರೀಯ ದಾಖಲೆಗಳನ್ನು ಬರೆದಿದ್ದಾರೆ. ಇವರಿಗೆ ದಾಖಲೆ ಮಾಡುವುದು ಅಂದರೆ ನೀರು ಕುಡಿದಷ್ಟು ಸಲೀಸು.
ದಾಖಲೆ ಮಾಡುವುದನ್ನೇ ಹವ್ಯಾಸ ವಾಗಿರಿಸಿಕೊಂಡಿರುವ ಇವರು ಭಾರತದಲ್ಲೇ ಅತಿ ಹೆಚ್ಚು ದಾಖಲೆ ಮಾಡಿದ ವ್ಯಕ್ತಿ ಎಂಬ ಪಟ್ಟಕ್ಕೆ ಭಾಜನರಾಗಿದ್ದಾರೆ. ದಾಖಲೆಗಳ ಸಂಖ್ಯೆಯಿಂದಾಗಿಯೇ ಈಗ ''ರೆಕಾರ್ಡ್ ರಮೇಶ್'' ಎಂದು ಪ್ರಸಿದ್ಧಿ ಪಡೆದಿದ್ದಾರೆ. ಬೆಂಗಳೂರಿನ ಟಾಟಾ ನಗರದ ನಿವಾಸಿಯಾಗಿರುವ 57 ವರ್ಷದ ರಮೇಶ್ ಬಾಬು ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ರಾಷ್ಟ್ರ ಮತ್ತು ವಿಶ್ವ ಮಟ್ಟದಲ್ಲಿ ದಾಖಲೆ ನಿರ್ಮಿಸುತ್ತಿದ್ದಾರೆ.
ಇವರ ದಾಖಲೆಗಳನ್ನು ಮೆಚ್ಚಿ ಇದೀಗ ಇವರಿಗೆ ಯುನಿಕ್ ವರ್ಲ್ಡ್ ರೆಕಾರ್ಡ್ ಸಂಸ್ಥೆ ಒಂದು ಕೋಟಿ ಗಿಡ ನೆಡುವ ವಿಶ್ವದಾಖಲೆ ನಿರ್ಮಿಸುವ ವನಮಹೋತ್ಸವ ಕಾರ್ಯಕ್ರಮದ ನೈರುತ್ಯ ವಲಯದ ತೀರ್ಪುಗಾರರಾಗಿ ನೇಮಿಸಿದೆ.
ಹೆಚ್ಚಿನ ಮಾಹಿತಿಗೆ ರಮೇಶ್ ಬಾಬು ಅವರನ್ನು ಸಂಪರ್ಕಿಸಬಹುದು: 94490 13887
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications