"ಬೆಂಗಳೂರಿಗೆ ಒಬ್ಬರೇ ಮೇಯರ್ ಸಾಕಾಗಲ್ಲ"!
ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕಳೆದ ಐದು ವರ್ಷಗಳಿಂದ ಚುನಾವಣೆಯೇ ನಡೆದಿಲ್ಲ. 2020ನೇ ಸಾಲಿನಲ್ಲಿ ಬಿಬಿಎಂಪಿಯಲ್ಲಿ ಮೇಯರ್ ಹಾಗೂ ಪಾಲಿಕೆ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಿದೆ. ಅಲ್ಲಿಂದ ಸ್ಥಳೀಯ ಸಂಸ್ಥೆಗೆ ಚುನಾವಣೆಯೇ ನಡೆದಿಲ್ಲ. ಇದೀಗ ಬಿಬಿಎಂಪಿಗೆ ಒಬ್ಬರೇ ಮೇಯರ್ ಹಾಗೂ ಆಯುಕ್ತರು ಸಾಕಾಗಲ್ಲ ಎನ್ನುವ ಬಗ್ಗೆ ಜೋರು ಚರ್ಚೆಗಳು ಶುರುವಾಗಿದೆ. ಇದಕ್ಕೆ ಕಾರಣ ಬೆಂಗಳೂರಿನಲ್ಲಿ ನಡೆಯುತ್ತಿರುವ ಗ್ರೇಟರ್ ಬೆಂಗಳೂರು ಚರ್ಚೆ. ಬೆಂಗಳೂರಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರ ಅನ್ವಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡುವುದಕ್ಕೆ ಬಿಬಿಎಂಪಿ ಹಾಗೂ ಸರ್ಕಾರದ ಮುಂದಾಗಿದೆ. ಹೀಗಾಗಿ, ಈ ವಿಚಾರದ ಬಗ್ಗೆ ಈಗ ಚರ್ಚೆ ಜೋರಾಗಿದೆ. ಆದರೆ, ಬೆಂಗಳೂರಿಗೆ ಹಲವು ಮೇಯರ್ಗಳು ಬಂದರೆ ಕನ್ನಡಿಗರ ಕಡೆಗಣನೆ ಆಗಲಿದೆ ಎನ್ನುವ ಆರೋಪವೂ ಕೇಳಿಬಂದಿದೆ.
ಬೆಂಗಳೂರು ಬೃಹತ್ ಆಗಿ ಬೆಳೆಯುತ್ತಿದೆ. ಈ ರೀತಿ ಬೆಳೆಯುತ್ತಿರುವ ಬೆಂಗಳೂರಿಗೆ ಒಬ್ಬರೇ ಮೇಯರ್ ಹಾಗೂ ಒಬ್ಬರೇ ಆಯುಕ್ತರಿಂದ ನಿರ್ವಹಣೆ ಮಾಡುವುದು ತುಂಬಾ ಕಷ್ಟವಾಗಲಿದೆ ಎಂದು ಗ್ರೇಟರ್ ಬೆಂಗಳೂರು ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಬೆಂಗಳೂರಿನ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ಹೆಚ್ಚು ನಗರ ಪಾಲಿಕೆ / ಈಗ ಇರುವ ಬಿಬಿಎಂಪಿಯ ಸಣ್ಣ ಸಣ್ಣ ಭಾಗಗಳ ರಚನೆಯಾಗಬೇಕು ಎನ್ನುವ ಅಭಿಪ್ರಾಯ ಸರ್ಕಾರದಿಂದ ಕೇಳಿ ಬಂದಿದೆ. ಆದರೆ, ಇದಕ್ಕೆ ಬೆಂಗಳೂರಿನ ಜನರು ವಿರೋಧ ವ್ಯಕ್ತಪಡಿಸಿದ್ದಾರೆ.

ಈ ರೀತಿ ಹೆಚ್ಚು ಪಾಲಿಕೆಗಳು ಇದ್ದರೆ ಸ್ಥಳೀಯ ಮಟ್ಟದಲ್ಲೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದಕ್ಕೆ ಸಾಧ್ಯವಿದೆ ಎಂದು ಗ್ರೇಟರ್ ಬೆಂಗಳೂರು ಸಭೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್ ಅವರು ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ವಿಭಜನೆ ಬೇಡ: ಇನ್ನು ಶಾಸಕ ರಿಜ್ವಾನ್ ಅರ್ಷದ್ ಅವರ ಹೇಳಿಕೆಗೆ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ - 2024ರ ಪರಿಶೀಲನೆ ಹಾಗೂ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಜನರಿಂದಲೇ ವಿರೋಧ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ಪಾಲಿಕೆಯನ್ನು ವಿಭಜನೆ ಮಾಡಬೇಡಿ. ಈಗ ಬೆಂಗಳೂರಲ್ಲಿ ಎಂಟು ವಲಯಗಳಿವೆ. ಆ ವಲಯಗಳ ಸಂಖ್ಯೆಯನ್ನೇ ಹೆಚ್ಚಳ ಮಾಡಿ. ಮೊದಲು ಚುನಾವಣೆ ನಡೆಸಿ ಅಂತ ಜನ ಹೇಳಿದ್ದಾರೆ. ವಿಭಜನೆ ಮಾಡುವುದು ಅತ್ಯಂತ ಅವೈಜ್ಞಾನಿಕ ಎಂದೂ ಜನ ಅಭಿಪ್ರಾಯಪಟ್ಟಿದ್ದಾರೆ. ಇನ್ನು ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲೂ ಜನರಿಂದ ವಿರೋಧ ವ್ಯಕ್ತವಾಗುತ್ತಿದೆ.
ರೋಹಿತ್ ಎನ್ನುವವರು ಇದರ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು. ಬೆಂಗಳೂರು ಕನ್ನಡಿಗರ ನಗರ. ಅದರ ನಿರ್ವಹಣೆಯೂ ಕನ್ನಡಿಗರ ಕೈಯಲ್ಲಿಯೇ ಇರಬೇಕು. ಇಲ್ಲದಿದ್ದರೆ, ನಮ್ಮ ಶತಮಾನಗಳ ಪರಂಪರೆಯ ನಗರವನ್ನು ಇಲ್ಲಿಗೆ ವಲಸೆ ಬಂದವರ ಆಡಳಿತಕ್ಕೆ ಒಳಪಡಿಸುವಂತೆ ಆಗುತ್ತದೆ. ಹಾಗಾಗಿ, ಈ ಪರಿಸ್ಥಿತಿಯನ್ನು ಕನ್ನಡಿಗರು ಎಚ್ಚರಿಕೆಯಿಂದ ಅವಲೋಕಿಸಬೇಕು, ಮತ್ತು ನಮ್ಮ ಹಕ್ಕುಗಳನ್ನು ಕಾಪಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದ್ದಾರೆ.
ನಿಮ್ಮ ಅಭಿಪ್ರಾಯವೇನು ಎಂದು ಕೇಳಿರುವ ಅವರು, ಈ ಬಗ್ಗೆ ನಿಮ್ಮ ಅಭಿಪ್ರಾಯ, ಅನುಭವ, ಮತ್ತು ಪ್ರಸ್ತಾಪಗಳನ್ನು ಈ ವೇದಿಕೆಯಲ್ಲಿ ಹಂಚಿಕೊಳ್ಳಿ. ನಮ್ಮ ಭವಿಷ್ಯ ಹೇಗಿರಬೇಕು ಎಂಬುದನ್ನು ಕನ್ನಡಿಗರೇ ನಿರ್ಧರಿಸೋಣ ಎಂದಿದ್ದಾರೆ. ಸಂವಾದಕ್ಕೆ ಸ್ವಾಗತ! ನಿಮ್ಮ ದೃಷ್ಟಿಕೋನವನ್ನು ಶಿಷ್ಟವಾಗಿ, ಸಮರ್ಥನೀಯವಾಗಿ ಮತ್ತು ಉದಾಹರಣೆಗಳೊಂದಿಗೆ ಹಂಚಿಕೊಳ್ಳಿ ಎಂದಿದ್ದು ಹಲವು ಕನ್ನಡಿಗರು ಇದಕ್ಕೆ ರಿಯಾಕ್ಟ್ ಮಾಡಿದ್ದಾರೆ.
-
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications