3 ತಿಂಗಳಲ್ಲಿ 10,000 ಗುತ್ತಿಗೆ ಪೌರ ಕಾರ್ಮಿಕರ ಖಾಯಂ: ಸಿದ್ದರಾಮಯ್ಯ
ಬೆಂಗಳೂರು, ಜೂನ್ 23 : ಹಲವು ದಿನಗಳಿಂದ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸಬೇಕೆಂಬ ಕೂಗಿಗೆ ಕೊನೆಗೂ ರಾಜ್ಯ ಸರ್ಕಾರ ಕಿವಿ ಕೊಟ್ಟಿದೆ.
ಸುಮಾರು 11 ಸಾವಿರ ಗುತ್ತಿಗೆ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಹಂತದಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ.

ಹಲವು ದಿನಗಳಿಂದ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರ ಸೇವಾ ನೌಕರರ ಸಂಘ ಪ್ರತಿಭಟನೆ ನಡೆಸುತ್ತಿದ್ದವು.
ವಿಧಾಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪೌರ ಕಾರ್ಮಿಕರ ಗುತ್ತಿಗೆ ಪದ್ದತಿಯನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ.
ಮುಂದಿನ ಮೂರು ತಿಂಗಳಲ್ಲಿ ಮೊದಲ ಹಂತದಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಿಕೊಳ್ಳಲಾಗುವುದು. ಉಳಿದ 1 ಸಾವಿರ ಪೌರ ಕಾರ್ಮಿಕರ ನೇಮಕವನ್ನು ನಂತರ ಖಾಯಂಗೊಳಿಸಲಾಗುವುದು ಎಂದು ತಿಳಿಸಿದರು.
ಪೌರಕಾರ್ಮಿಕರಿಗೆ ಮಧ್ಯಾಹ್ನದ ಊಟದ ಜತೆಗೆ ಒಂದು ದಿನದ ರಜೆ ನೀಡಲಾಗುವುದು. ಪೌರ ಕಾರ್ಮಿಕರು ದುಷ್ಚಟಗಳಿಂದ ದೂರವಿರಬೇಕು. ಯಾವುದೇ ಕಾರಣಕ್ಕೂ ಪೌರ ಕಾರ್ಮಿಕರು ಮ್ಯಾನ್ ಹೋಲ್ಗೆ ಇಳಿಯಬಾರದು ಎಂದು ಸಲಹೆ ನೀಡಿದರು.
ಇದೇ ವೇಳೆ ಪೌರ ಕಾರ್ಮಿಕರಿಗೆ ಜೀವ ವಿಮೆ, ಆರೋಗ್ಯ ಹಾಗೂ ಬಿಸಿ ಊಟ ಸೇರಿದಂತೆ ಇತರೆ ಸರ್ಕಾರಿ ಉದ್ಯೋಗಿಗಳಿಗೆ ದೊರೆಯುವಂತಹ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಆದೇಶ ಹೊರಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
-
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications