ಚಿಕ್ಕಬಾಣಾವರದ ಮನೆಯಲ್ಲಿ ಊಟದ ಡಬ್ಬಿಗಳಲ್ಲೂ ಬಾಂಬ್ ಇಟ್ಟಿದ್ದ ಉಗ್ರರು
ಬೆಂಗಳೂರು, ಜುಲೈ 8: ಬೆಂಗಳೂರಿನ ಜನರು ಬೆಚ್ಚಿ ಬೀಳುವಂಥ ಸಂಗತಿಯೊಂದು ಎನ್ ಐಎ ಕಾರ್ಯಾಚರಣೆಯಿಂದ ಬಯಲಾಗಿದೆ. ಚಿಕ್ಕಬಾಣಾವರದ ಹಳೆ ರೈಲು ನಿಲ್ದಾಣ ರಸ್ತೆಯಲ್ಲಿನ ಮನೆಯೊಂದರ ಮೇಲೆ ಭಾನುವಾರ ಸಂಜೆ ಎನ್ ಐಎನಿಂದ ದಾಳಿ ನಡೆಸಿದರು. ಆ ವೇಳೆ ಹತ್ತು ಜೀವಂತ ಬಾಂಬ್ ಹಾಗೂ ದೊಡ್ಡ್ ಪ್ರಮಾಣದಲ್ಲಿ ಸ್ಫೋಟಕ ಸಾಮಗ್ರಿ ಪತ್ತೆ ಆಗಿದೆ.
ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಸ್ಫೋಟಕ್ಕೆ ಸಂಚು ನಡೆಸಿದ್ದುದು ಬಹಿರಂಗವಾಗಿದೆ. ಈ ಮನೆಯು ಸ್ಥಳೀಯ ಮುಸ್ತಾನ್ ಎಂಬುವವರಿಗೆ ಸೇರಿದ್ದಾಗಿದೆ. ರಾತ್ರಿ ಪೂರ್ತಿ ಶೋಧ ನಡೆಸಿರುವ ಎನ್ ಐಎ ಅಧಿಕಾರಿಗಳು ಬಾಂಬ್, ಏರ್ ಗನ್ ಮತ್ತು ಸ್ಫೋಟಕ ಸಾಮಗ್ರಿಗಳನ್ನು ಮನೆಯಲ್ಲಿ ಪತ್ತೆ ಮಾಡಿದ್ದಾರೆ.
ಈಚೆಗೆ ದೊಡ್ಡಬಳ್ಳಾಪುರದ ಬಂಧಿಸಿದ್ದ ಶಂಕಿತ ಉಗ್ರಗಾಮಿ ಹಬೀಬುರ್ ರೆಹಮಾನ್ ತನ್ನ ಸ್ನೇಹಿತರ ಜತೆಗೆ ಇದೇ ಮನೆಯಲ್ಲಿ ವಾಸವಿದ್ದ. ವಿಚಾರಣೆ ವೇಳೆಯಲ್ಲಿ ಆತ ಬಾಯ್ಬಿಟ್ಟ ಸಂಗತಿಗಳ ಆಧಾರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಲ ವರ್ಷಗಳ ಹಿಂದೆ ಚಿಕ್ಕ ಬಾಣಾವರದಲ್ಲಿ ಮನೆ ಮಾಡಿದ್ದ ಹಬೀಬುರ್ ಮತ್ತು ಸ್ನೇಹಿತರು ಈ ಮನೆಯಲ್ಲೇ ಬಾಂಬ್ ತಯಾರಿಸುತ್ತಿದ್ದರು. ಎರಡು ತಿಂಗಳ ಹಿಂದಷ್ಟೇ ಮನೆ ಖಾಲಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಆಕ್ಕಪಕ್ಕದ ಮನೆಯವರಿಗೆ ತಾವು ವ್ಯಾಪಾರಿಗಳು ಅಂತಲೇ ಪರಿಚಯಿಸಿಕೊಂಡಿದ್ದ ಈ ಮೂವರು, ಸಂಜೆ ಹೊತ್ತು ಮಾತ್ರ ಮನೆಯಿಂದ ಆಚೆ ಬರುತ್ತಿದ್ದರು. ಈ ಬಾಡಿಗೆ ಮನೆ ತುಂಬಾ ಬಾಂಬ್ ಗಳೇ ತುಂಬಿದ್ದವು. ಕೊನೆಗೆ ಊಟದ ಡಬ್ಬಿಗಳಲ್ಲೂ ಸ್ಫೋಟಾಕ ಸಾಮಗ್ರಿಗಳು ಪತ್ತೆ ಆಗಿವೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications