ಬೆಂಗಳೂರು ಏರ್ಪೋರ್ಟಲ್ಲಿ 2 ಕೋಟಿ ಬೆಲೆಯ ಮಾದಕ ವಸ್ತು ವಶ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರಿಂದ ರಫ್ತಾಗಲು ಹೊರಟಿದ್ದ 10 ಕೆಜಿ ಮಾದಕ ಪದಾರ್ಥ ಎಫೆಡ್ರಿನ್ ವಶಕ್ಕೆ ಪಡೆಯಲಾಗಿದೆ. ಮಾರುಕಟ್ಟೆಯಲ್ಲಿ ಇದರ ಬೆಲೆ ಸುಮಾರು 2 ಕೋಟಿ ಎಂದು ಅಂದಾಜು ಮಾಡಲಾಗಿದೆ.
ಬೆಂಗಳೂರು, ಮೇ 25: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರಿಂದ ರಫ್ತಾಗಲು ಹೊರಟಿದ್ದ 10 ಕೆಜಿ ಮಾದಕ ಪದಾರ್ಥ ವಶಕ್ಕೆ ಪಡೆಯಲಾಗಿದೆ.
ವಶಕ್ಕೆ ಪಡೆದ ನಿಷೇಧಿತ ಮಾದಕ ವಸ್ತುವನ್ನು ಎಫೆಡ್ರಿನ್ ಎಂದು ಗುರುತಿಸಲಾಗಿದೆ. ಇದೊಂದು ದುಬಾರಿ ಮಾದಕ ವಸ್ತುವಾಗಿದ್ದು ಮಾರುಕಟ್ಟೆಯಲ್ಲಿ ಇದರ ಬೆಲೆ ಸುಮಾರು 2 ಕೋಟಿ ರೂ. ಎಂದು ಅಂದಾಜು ಮಾಡಲಾಗಿದೆ.

ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ವಲಯದ ಮಾದಕ ವಸ್ತು ನಿಯಂತ್ರಣ ದಳ (ಎನ್ ಸಿಬಿ) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇದನ್ನು ವಶಕ್ಕೆ ಪಡೆದಿದ್ದಾರೆ.
ಮುಜೀಬುರ್ ರೆಹಮಾನ್ ನೈನಾ ಮೊಹಮ್ಮದ್ ಎಂಬ ಚೆನ್ನೈ ಮೂಲದ ವ್ಯಕ್ತಿಯ ಬ್ಯಾಗಿನಲ್ಲಿ ಈ ಮಾದಕ ವಸ್ತು ಪತ್ತೆಯಾಗಿದೆ. ಆತ ವಿಮಾನ ಬೆಂಗಳೂರಿನಿಂದ ಮಲೇಷ್ಯಾಗೆ ಪ್ರಯಾಣಿಸಲು ಹೊರಟಿದ್ದ ಎನ್ನಲಾಗಿದೆ. ಆತನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಆತನ ಬಳಿ 35 ಮಕ್ಕಳ ಬ್ಯಾಗುಗಳಿತ್ತು. ಇದರಲ್ಲಿ ಈ ಮಾದಕ ವಸ್ತುಗಳನ್ನು ಅಡಗಿಸಡಲಾಗಿತ್ತು. ಇನ್ನು ವಿಚಾರಣೆ ವೇಳೆ ತಾನು ಮಲೇಷ್ಯಾ. ಶ್ರೀಲಂಕಾ ಮೊದಲಾದ ದೇಶಗಳಿಗೆ ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದುದಾಗಿ ಆತ ಹೇಳಿದ್ದಾನೆ ಎನ್ನಲಾಗಿದೆ.
ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿಯಲ್ಲಿ ಎಫೆಡ್ರಿನ್ ಕಳ್ಳ ಸಾಗಣೆ ಮಾಡಿದರೆ 10 ವರ್ಷ ತನಕ ಜೈಲು ಶಿಕ್ಷೆ ವಿಧಿಸುವ ಅವಕಾಶಗಳಿವೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications