Get Updates
Get notified of breaking news, exclusive insights, and must-see stories!

ಗೌರಿ ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: ರಾಮಲಿಂಗಾ ರೆಡ್ಡಿ

ಬೆಂಗಳೂರು, ಸೆಪ್ಟೆಂಬರ್ 8: ಪತ್ರಕರ್ತೆ ಗೌರಿ ಲಂಕೇಶ್ ರನ್ನು ಹತ್ಯೆ ಮಾಡಿದ ಕೊಲೆಗಾರ(ನ)ರ ಕುರಿತು ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಕರ್ನಾಟಕ ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಇಂದು(ಸೆ.8) ಘೋಷಿಸಿದ್ದಾರೆ.

ವಿಕಾಸ ಸೌಧದಲ್ಲಿ ನಾಳೆ(ಸೆ.9) ರಂದು ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸರ್ಕಾರ ಗೌರಿ ಲಂಕೇಶ್ ಹಂತಕರ ಬಂಧನದ ಕುರಿತು ಚರ್ಚೆ ನಡೆಸಲಿದೆ. ಗೌರಿ ಹಂತಕರ ಕುರಿತು ಯಾವುದೇ ಮಾಹಿತಿ ದೊರಕಿದಲ್ಲಿ 09480800202 ಅಥವಾ [email protected] ಇಮೇಲ್ ಗೆ ಮಾಹಿತಿ ನೀಡುವಂತೆ ಬೆಂಗಳೂರು ಸಿಟಿ ಪೊಲೀಸರು ಟ್ವೀಟ್ ಮಾಡಿ ತಿಳಿಸಿದ್ದಾರೆ.

10 lakh reward for the person who will give information about Gauri Lankesh's killers.

ಸೆ.5 ರಂದು ರಾತ್ರಿ 8 ಗಂಟೆಗೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ರಾಜರಾಜೇಶ್ವರಿ ನಗರದಲ್ಲಿರುವ ಅವರ ಮನೆಯಲ್ಲಿಯೇ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಲಂಕೇಶ್ ಪತ್ರಿಕೆಯ ಸಂಪಾದಕಿಯಾಗಿದ್ದ ದಿಟ್ಟ ಪತ್ರಕರ್ತೆ ಗೌರಿ ಅವರ ಹತ್ಯೆಯನ್ನು ಇಡೀ ರಾಜ್ಯದ ಜನತೆಯೂ ಖಂಡಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+