10 ಪೊಲೀಸ್ ಯೂನಿಫಾರ್ಮ್ ಖರೀದಿಸಿದ್ದು ಯಾರು?
ಬೆಂಗಳೂರು, ನ. 13 : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಸಮಾವೇಶಕ್ಕಾಗಿ ಬೆಂಗಳೂರು ಪೊಲೀಸರು ಅಗತ್ಯ ಸಿದ್ಧತೆ ಕೈಗೊಳ್ಳುತ್ತಿರುವ ಹೊತ್ತಿನಲ್ಲೇ, ಅನಾಮಿಕ ವ್ಯಕ್ತಿಯೊಬ್ಬರು 10 ಪೊಲೀಸ್ ಸಮವಸ್ತ್ರ ಖರೀದಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇದನ್ನು ಖರೀದಿ ಮಾಡಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಎರಡು ದಿನಗಳ ಹಿಂದೆ ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯ ಸಮವಸ್ತ್ರ ಒದಗಿಸುವ ಟೈಲರ್ ನಿಂದ ಸಮಸ್ತ್ರದ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದ ಅನಾಮಿಕ ವ್ಯಕ್ತಿ, 10 ಸಮವಸ್ತ್ರ ಖರೀದಿಸಿದ್ದಾನೆ, ಮಾರುಕಟ್ಟೆಯಿಂದ ಲಾಠಿ ಮತ್ತು ಟೋಪಿಗಳನ್ನು ಖರೀದಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಇದನ್ನು ದೃಢಪಡಿಸಿದ್ದು, ಹೆಚ್ಚಿನ ಮಾಹಿತಿ ನೀಡಲು ನಿಕಾರಿಸಿದ್ದಾರೆ.

ನರೇಂದ್ರ ಮೋದಿ ಅವರ ಸಮಾವೇಶದ ಹಿನ್ನಲೆಯಲ್ಲಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಿದ್ದಾರೆ, ಪೊಲೀಸ್ ಇಲಾಖೆಗೆ ಸಮವಸ್ತ್ರ ಪೂರೈಸುವ ಟೈಲರ್ ಅನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಅನಾಮಿಕ ವ್ಯಕ್ತಿ ಹೇಗಿದ್ದ ಎಂಬ ಕುರಿತು ಟೈಲರ್ ಪೊಲೀಸರಿಗೆ ವಿವರ ನೀಡಿದ್ದಾರೆ. ಪ್ರಾಥಮಿಕ ತನಿಖೆಯಂತೆ ಖರೀದಿ ಮಾಡಿರುವ ವ್ಯಕ್ತಿ ಉತ್ತರ ಭಾರತ ಮೂಲದವನು ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸದ್ಯ ಬೆಂಗಳೂರು ಪೊಲೀಸರು ಸಮವಸ್ತ್ರ ಖರೀದಿ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಅನುಮಾನ ಬಂದ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ ತನಿಖೆ ನಡೆಸಲು ಮುಂದಾಗಿದ್ದಾರೆ. ನರೇಂದ್ರ ಮೋದಿ ಸಮಾವೇಶದ ಹಿನ್ನಲೆಯಲ್ಲಿ ತನಿಖೆ ಚುರುಕುಗೊಳಿಸಲಾಗಿದ್ದು, ಪ್ರಕರಣವನ್ನು ಬಗರಹರಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.
ನರೇಂದ್ರ ಮೋದಿ ಅವರ ಸಮಾವೇಶದ ಭದ್ರತೆಯ ನೋಡಿಕೊಳ್ಳುತ್ತಿರುವ ಪೊಲೀಸರಿಗೆ ವಿಶೇಷ ಪಾಸ್ ಗಳನ್ನು ನೀಡಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಹೇಳಿದ್ದಾರೆ. ಆ ಮೂಲಕ ನಕಲಿ ಸಮವಸ್ತ್ರ ಧರಿಸಿ ಬರುವ ಅನಾಮಿಕ ವ್ಯಕ್ತಿಗಳನ್ನು ತಡೆಯಲು ಮುಂದಾಗಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications