ಪ್ರವೀಣ್ ಹತ್ಯೆ ಪ್ರಕರಣ: 10 ಆರೋಪಿಗಳ ಬಂಧನ- ಗೃಹಸಚಿವ ಅರಗ ಜ್ಞಾನೇಂದ್ರ ಮಾಹಿತಿ
ಬೆಂಗಳೂರು, ಜುಲೈ 27: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವಾರಜ ಬೊಮ್ಮಾಯಿ, ಸಿಟಿ ರವಿ ಜೊತೆಗೆ ಸಭೆ ನಡೆಸಿ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿದ್ದೇವೆ. ಪ್ರವೀಣ್ ಅಂತ್ಯಕ್ರಿಯೆ ನೆರೆವೇರಿದೆ. ಪ್ರಕರಣದ ಎಲ್ಲಾ ಬೆಳವಣಿಗೆಯನ್ನು ಡಿಜಿ ಪ್ರವೀಣ್ ಸೂದ್ ವಿವರಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಈಗಾಗಲೆ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಕೇರಳಕ್ಕೂ ಪೊಲೀಸರು ತೆರಳಿದ್ದು, ಅಲ್ಲಿಯೂ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ನಾವು ಇಂತಹ ಘಟನೆ ನಡೆದಾಗ ಯಾವ ಪ್ರಕರಣಗಳನ್ನು ಬಿಟ್ಟಿಲ್ಲ, ಎಲ್ಲವೂ ತನಿಖೆಯಾಗಿವೆ. ಕೇರಳ ಸರಕಾರದ ಜೊತೆಗೆ ನಮ್ಮ ಡಿಜಿ ಮಾತನಾಡಿದ್ದಾರೆ, ಜಂಟಿಯಾಗಿ ಕಾರ್ಯಾಚಾರಣೇ ಮಾಡಿ ಆರೋಪಿಗಳನ್ನು ಹಿಡಿದು ತರಲಾಗುತ್ತದೆ ಎಂದು ತಿಳಿಸಿದರು.

ಸಾಮಾಜಿಕ ಜಾಲಾತಾಣದಲ್ಲಿ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿರುವುದರ ಬಗ್ಗೆ ಮಾತನಾಡಿ, ಅಮಾಯಕರು ಕೊಲೆಯಾದಾಗ ಎಲ್ಲರಿಗೂ ನೋವುಂಟಾಗಲಿದೆ, ಮನಸ್ಸು ಕಲಕುತ್ತದೆ, ಸಿಟ್ಟು ಉಂಟಾಗಿ ಮಾತನಾಡುತ್ತಾರೆ, ಆರೋಪಿಗಳನ್ನು ಬಂಧಿಸಿದ ಮೇಲೆ ಅವರ ಆಕ್ರೋಶ ಕಡಿಮೆಯಾಗಲಿದೆ ಎಂದು ತಿಳಿಸಿದರು.
ಆದಷ್ಟು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುತ್ತದೆ. ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣ ಸಂಬಂಧ ಕೇರಳ ಪೊಲೀಸರ ಜೊತೆಗೆ ರಾಜ್ಯದ ಪೊಲೀಸರು ನಿರಂತರ ಸಂಪರ್ಕದಲ್ಲಿದ್ದಾರೆ. ಮಂಗಳೂರು ಎಸ್.ಪಿ ಈಗಾಗಲೇ ಕಾಸರಗೋಡು ಎಸ್.ಪಿ ಜೊತೆ ಸತತವಾಗಿ ಸಂಪರ್ಕದಲ್ಲಿದ್ದಾರೆ. ರಾಜ್ಯದ ಡಿಜಿಪಿ ಕೂಡ ಕೇರಳದ ಡಿಜಿಪಿ ಜೊತೆ ಸಂಪರ್ಕದಲ್ಲಿದ್ದಾರೆ. ಆದಷ್ಟು ಬೇಗ ಅವರನ್ನ ಬಂಧಿಸುತ್ತೇವೆ ಎಂದರು.
ಪ್ರವೀಣ್ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಪ್ರಕರಣವನ್ನ ಎನ್ಐಎಗೆ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿರುವ ಕುರಿತು ಯಾವುದೇ ಪ್ರತಿಕ್ರಿಯೆ ನೀಡದ ಸಿಎಂ, ಪೊಲೀಸರೇ ತನಿಖೆ ನಡೆಸಲಿದ್ದಾರೆ ಎಂದು ಹೇಳಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications