ಕೆಆರ್ ಪುರಂನಲ್ಲಿ ಬೆಳ್ಳಂಬೆಳಗ್ಗೆ 10 ವರ್ಷದ ಬಾಲಕ ಕಿಡ್ನಾಪ್

ಬೆಂಗಳೂರು, ನವೆಂಬರ್ 26: ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ಬಾಲಕನನ್ನು ಅಪಹರಿಸಲಾಗಿದೆ. ತನ್ನ ತಾತನ ಜತೆಗೆ ಶಾಲೆಗೆ ತೆರಳುತ್ತಿದ್ದ ಹತ್ತು ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಯ್ಯಪ್ಪ ನಗರ ಮುಖ್ಯರಸ್ತೆಯಲ್ಲಿ ಅಪಹರಿಸಿದ್ದಾರೆ. ಕಾರಿನಲ್ಲಿ ಬಂದಂಥ ದುಷ್ಕರ್ಮಿಗಳು ಹತ್ತು ವರ್ಷದ ಬಾಲಕ ಮಯಾಂಕ್ ನನ್ನು ಹೊತ್ತೊಯ್ದಿದ್ದಾರೆ.

ಅಯ್ಯಪ್ಪ ನಗರದಲ್ಲಿರುವ ವಿನಾಯಕ ಟಿಂಬರ್ ಯಾರ್ಡ್ ನ ಮಾಲೀಕರಾದ ಹರೀಶ್ ಅವರ ಮಗ ಮಯಾಂಕ್ ಇಲ್ಲಿನ ನಾರಾಯಣ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶನಿವಾರ ಬೆಳಗ್ಗೆ ತನ್ನ ತಾತನ ಜತೆಗೆ ಶಾಲೆಗೆ ಹೋಗುತ್ತಿದ್ದಾಗ ಇಯಾನ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಆತನನ್ನು ಅಪಹರಣ ಮಾಡಿದ್ದಾರೆ.

10 year boy kidnapped in KR Puram

ಬೆಳ್ಳಂಬೆಳಗ್ಗೆ ನಡೆದ ಅಪಹರಣ ಘಟನೆಯಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಪೋಷಕರು ಈ ಬಗ್ಗೆ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಅಪಹರಣ ನಂತರದ ಬೆಳವಣಿಗೆಗಳ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದು, ತೀವ್ರ ತನಿಖೆಗೆ ಮುಂದಾಗಿದ್ದಾರೆ. ಆ ರಸ್ತೆಯಲ್ಲಿ ಸಾಮನ್ಯವಾಗಿ ಜನರ ಓಡಾಟ ಇರುತ್ತದೆ. ಈ ಕೃತ್ಯವನ್ನು ಯಾರು ಮಾಡಿರಬಹುದು ಎಂಬ ಬಗ್ಗೆ ವಿವಿಧ ಆಯಾಮಗಳಲ್ಲಿ ಪೊಲೀಸರು ಯೋಚಿಸಲು ಆರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+