Sports City in Bengaluru: ಬೆಂಗಳೂರಿನ ಯಲಹಂಕ ಬಳಿ ಬರಲಿದೆ 100 ಎಕರೆಯ ಸ್ಪೋರ್ಟ್ಸ್ ಸಿಟಿ- ಮಾಹಿತಿ, ವಿವರ
ಬೆಂಗಳೂರು, ಫೆಬ್ರವರಿ 15: ಬೆಂಗಳೂರಿನ ಯಲಹಂಕ ಸಮೀಪದ ಮಾವಳ್ಳಿಪುರದಲ್ಲಿ 100 ಎಕರೆ ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಸ್ಪೋರ್ಟ್ಸ್ ಸಿಟಿ ನಿರ್ಮಿಸಲಿದೆ ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ವಿಧಾನಸಭೆಗೆ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ನಾಗೇಂದ್ರ, ಬೆಂಗಳೂರಿನಲ್ಲಿಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಸ್ಪೋರ್ಟ್ಸ್ ಸಿಟಿ ನಿರ್ಮಿಸುವುದಾಗಿ ಹೇಳಿದರು.

ಈ ವೇಳೆ ಅಧಿವೇಶನದಲ್ಲಿ ಸ್ಪೋರ್ಟ್ಸ್ ಸಿಟಿಗೆ ಬಂದರೆ ಸಚಿವರನ್ನು ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡುವುದಾಗಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದು, ಕಾಂಗ್ರೆಸ್ ಸರ್ಕಾರ ಸ್ಪೋರ್ಟ್ಸ್ ಸಿಟಿ ಮಾಡಲಿದೆ, ಅದರ ಉದ್ಘಾಟನೆಯ ದಿನ ಕಬಡ್ಡಿ ಆಡೋಣ ಎಂದು ಸಚಿವ ನಾಗೇಂದ್ರ ಪ್ರತಿಕ್ರಿಯಿಸಿದ್ದಾರೆ. ಈ ಚರ್ಚೆಯು ಅಧಿವೇಶನವನ್ನು ನಗೆಗಡಲಲ್ಲಿ ತೇಲಿಸಿತು.
ಇನ್ನು ಬೆಂಗಳೂರಿನಲ್ಲಿ ಸ್ಪೋರ್ಟ್ಸ್ ಸಿಟಿಯ ರಚನೆ ಬಗ್ಗೆ ವಿವರಿಸಿದ ಸಚಿವ ನಾಗೇಂದ್ರ, ಮಾವಳ್ಳಿಪುರದಲ್ಲಿ 60 ಎಕರೆಯಲ್ಲಿ ಸ್ಪೋರ್ಟ್ಸ್ ಸಿಟಿ ನಿರ್ಮಿಸಲು ಆರಂಭಿಕ ಪ್ರಸ್ತಾವನೆ ಇದೆ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಕಂದಾಯ ಇಲಾಖೆಗೆ ಇನ್ನೂ 40 ಎಕರೆ ಭೂಮಿಗೆ ಮನವಿ ಮಾಡಿದೆ. ಭೂಮಿ ದೊರೆತ ನಂತರ ಮತ್ತು ರಾಜ್ಯ ಸಚಿವ ಸಂಪುಟವು ಪ್ರಸ್ತಾವನೆಯನ್ನು ತೆರವುಗೊಳಿಸಿದ ನಂತರ ಇದರ ಕೆಲಸ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ಸ್ಪೋರ್ಟ್ಸ್ ಸಿಟಿ ನಿರ್ಮಿಸಲು ರಾಜ್ಯ ಕಂದಾಯ ಇಲಾಖೆಯಿಂದ ಭೂಮಿ ಹಸ್ತಾಂತರಿಸಬೇಕಾಗಿದೆ. ಇದನ್ನು ಸರ್ಕಾರದಿಂದ ಅಥವಾ ಖಾಸಗಿಯವರ ನೆರವಿನಿಂದ ನಿರ್ಮಿಸಲಾಗುತ್ತದೆ, ಸ್ಪೋರ್ಟ್ಸ್ ಸಿಟಿಯಲ್ಲಿ ಒಂದೇ ಸೂರಿನಡಿ ಕ್ರೀಡಾ ಚಟುವಟಿಕೆಗಳಿಗೆ ಎಲ್ಲಾ ಸೌಕರ್ಯಗಳನ್ನು ಹೊಂದಿರುತ್ತದೆ ಎಂದು ಅವರು ಹೇಳಿದರು. ಇನ್ನು ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿಯೂ ಕ್ರೀಡಾಂಗಣ ನಿರ್ಮಿಸಲು ಸರ್ಕಾರ ಗಮನಹರಿಸುತ್ತಿದೆ ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು










Click it and Unblock the Notifications