ಆನೆಕಲ್ನಲ್ಲಿ ಭರ್ಜರಿ ಭೇಟೆ: ಒಂದು ಸಾವಿರ ಕೆ.ಜಿ ಗಾಂಜಾ ವಶ
ಆನೆಕಲ್, ಸೆಪ್ಟೆಂಬರ್ 24: ಒಂದು ಕೆ.ಜಿ, ಎರಡು ಕೆ.ಜಿ ಹೆಚ್ಚೆಂದರೆ 50-100 ಕೆ.ಜಿ ಗಾಂಜಾ ದೊರಕುವುದು ಸಾಮಾನ್ಯವಾಗಿ ಕೇಳಿರುತ್ತೇವೆ, ಆದರೆ ನಿನ್ನೆ ಪೊಲೀಸರು ಒಬ್ಬನ ಬಳಿಯೇ ಬರೋಬ್ಬರಿ 1000 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಹೌದು, ಆನೆಕಲ್ನಲ್ಲಿ ನಿನ್ನೆ ಪೊಲೀಸರು ಡೇವಿಡ್ ಎಂಬ ವ್ಯಕ್ತಿಯಿಂದ ಬರೋಬ್ಬರಿ 1000 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆ ವೇಳೆ ಡೇವಿಡ್ನಿಗೆ ಗುಂಡು ಹಾರಿಸಿ ಗಾಯಗೊಳಿಸಲಾಗಿದೆ.
ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮರಸೂರು ಬಳಿ ಘಟನೆ ನಡೆದಿದ್ದು, ಆರೋಪಿ ಡೇವಿಡ್ ಅನ್ನು ಬಂಧಿಸುವ ಕಾರ್ಯದಲ್ಲಿ ಒಬ್ಬ ಪೊಲೀಸ್ ಪೇದೆಗೂ ಗಾಯವಾಗಿದೆ.

ಮರಸೂರು ಬಳಿ ಸ್ಕಾರ್ಪಿಯೋ ವಾಹನದಲ್ಲಿ ಆರೋಪಿ ಡೇವಿಡ್ ತೆರಳುತ್ತಿದ್ದ ಈ ವೇಳೆ ವೃತ್ತ ನಿರೀಕ್ಷಕ ವಿಕ್ಟರ್ ಸೈಮನ್, ಎಸ್ಐ ಜಗದೀಶ್, ಕಾನ್ಸ್ಟೇಬಲ್ ಹನುಂತಯ್ಯ ಸ್ಕಾರ್ಪಿಯೋ ವಾಹನವನ್ನು ಅಡ್ಡಗಟ್ಟಿದ್ದಾರೆ.
ಡೇವಿಡ್ನನ್ನು ವಿಚಾರಣೆ ನಡೆಸಬೇಕಾದರೆ ಆತ ಚಾಕುವಿನಿಂದ ಕಾನ್ಸ್ಟೇಬಲ್ ಹನುಮಂತಯ್ಯನಿಗೆ ಚುಚ್ಚಿ ರಸ್ತೆ ಪಕ್ಕದ ನೀಲಗಿರಿ ತೋಪಿನಲ್ಲಿ ಪರಾರಿ ಆಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಡೇವಿಡ್ನ ಕಾಲಿಗೆ ಗುಂಡು ಹೊಡೆದು ಗಾಯಗೊಳಿಸಿ ಆತನನ್ನು ಬಂಧಿಸಿದ್ದಾರೆ.
ಸ್ಕಾರ್ಪಿಯೋ ವಾಹನದಲ್ಲಿದ್ದ ಹಾಗೂ ಆರೋಪಿಯ ಮನೆಯಲ್ಲಿದ್ದ ಬರೋಬ್ಬರಿ 1000 ಕೆ.ಜಿ ಗಾಂಜಾ ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಅಂದಾಜು ಮೌಲ್ಯ 3.6 ಕೋಟಿ ರೂಪಾಯಿಗಳಾಗುತ್ತದೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣನವರ್, ಡಿವೈಎಸ್ಪಿ ನಂಜುಂಡೇಗೌಡ ಭೇಟಿ ನೀಡಿದ್ದರು. ಆನೆಕಲ್ ಮತ್ತು ಸುತ್ತ-ಮುತ್ತ ಗಾಂಜಾ ಹಾವಳಿ ಹೆಚ್ಚಾಗಿದೆಯೆಂದು ಇತ್ತೀಚೆಗೆ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ದೂರು ನೀಡಿದ್ದರು. ಹಾಗಾಗಿ ಗಾಂಜಾ ದಂಧೆ ತಡೆ ಬಗ್ಗೆ ಪೊಲೀಸರು ಹೆಚ್ಚಿನ ಕಾಳಜಿ ವಹಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications