ಫೆ.23ರ ಭಾನುವಾರ ಬೆಂಗಳೂರಿನಲ್ಲಿ ಪಿಂಕಥಾನ್
ಬೆಂಗಳೂರು, ಫೆ.22 : ಸ್ತನ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಇವೆಂಟ್ ಸಲ್ಯೂಷನ್ ಸಂಸ್ಥೆ, ಫೆ.23ರ ಭಾನುವಾರ '10ಕೆ ಪಿಂಕಥಾನ್' ಆಯೋಜಿಸಿದ್ದು, ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಭಾರತದಲ್ಲಿ 22 ಮಹಿಳೆಯರ ಪೈಕಿ ಒಬ್ಬರು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಆದ್ದರಿಂದ ಅರಿವು ಮೂಡಿಸಲು ಈ ಪಿಂಕಥಾನ್ ಆಯೋಜಿಸಲಾಗಿದೆ. ಭಾನುವಾರ ಕಂಠೀರವ ಸ್ಟೇಡಿಯಂನ ಅರ್ಚರಿ ಮೈದಾನದಿಂದ ಪಿಂಕಥಾನ್ ಆರಂಭವಾಗಲಿದೆ. [ನೋಂದಣಿಗಾಗಿ ವೆಬ್ ಸೈಟ್]

ಬೆಂಗಳೂರು ಹಾಗೂ ದೇಶದ ಇತರ ನಗರಗಳಲ್ಲಿ ಪಿಂಕಥಾನ್ ನಡೆಯಲಿದೆ. ಬೆಂಗಳೂರಿನಲ್ಲಿ ಸುಮಾರು 5 ಸಾವಿರ ಹಾಗೂ ದೇಶದ ವಿವಿಧ ನಗರಗಳಿಂದ ಸುಮಾರು 12 ಸಾವಿರ ಮಹಿಳೆಯರು ಪಿಂಕಥಾನ್ನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಪಿಂಕಥಾನ್ ನೋಂದಣಿಯಿಂದ ಬರುವ ಹಣವನ್ನು ಅನಾಥ ಹೆಣ್ಣು ಮಕ್ಕಳ ಕ್ಯಾನ್ಸರ್ ಚಿಕಿತ್ಸೆಗಾಗಿ ಖರ್ಚು ಮಾಡುವ ಉದ್ದೇಶವನ್ನು ಇವೆಂಟ್ ಸಲ್ಯೂಷನ್ ಸಂಸ್ಥೆ ಇಟ್ಟುಕೊಂಡಿದೆ. ಮುಂಬೈ, ಪುಣೆ, ದೆಹಲಿ ಮತ್ತು ಬೆಂಗಳೂರಿನಲ್ಲಿ ಪಿಂಕಥಾನ್ನಲ್ಲಿ ನಡೆಯಲಿದೆ. ಭಾಗವಹಿಸಲು ಇಚ್ಚಿಸುವವರು ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. [ಬೆಂಗಳೂರು, ಭಾರತದ ನೂತನ ಸ್ತನ ಕ್ಯಾನ್ಸರ್ ರಾಜಧಾನಿ]
ಭಾರತದಲ್ಲಿ 22 ಮಹಿಳೆಯರ ಪೈಕಿ ಒಬ್ಬ ಮಹಿಳೆ ಸ್ತನ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನಗಳು ತಿಳಿಸಿವೆ. ಭಾರತದಲ್ಲಿ ವಾರ್ಷಿಕ 1,15,000 ಸ್ತನ ಕ್ಯಾನ್ಸರ್ ಪ್ರಕರಣ ದಾಖಲಾಗುತ್ತಿವೆ. 2015ರಲ್ಲಿ ಈ ಸಂಖ್ಯೆ 2,50,000 ಏರಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ. ಆದ್ದರಿಂದ ಜಾಗೃತಿ ಮೂಡಿಸಲು ಈ ಪಿಂಕಥಾನ್ ಆಯೋಜಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications