ನಗರದ ಸಾಧಕರಿಗೆ 'ನಮ್ಮ ಬೆಂಗಳೂರು' ಪ್ರಶಸ್ತಿ ಗೌರವ
ಬೆಂಗಳೂರು, ಏಪ್ರಿಲ್ 27: ನಮ್ಮ ಬೆಂಗಳೂರು ಪ್ರಶಸ್ತಿಯ ಹತ್ತನೇ ಆವೃತ್ತಿಯ ಪ್ರಧಾನ ಕಾರ್ಯಕ್ರಮವು ಇಂದು ವಸಂತನಗರದಲ್ಲಿ ನಡೆದಿದ್ದು, ಐದು ವಿಭಾಗಗಳಲ್ಲಿ ಸಾಧನೆ ಮಾಡಿದ ಬೆಂಗಳೂರಿನ ವ್ಯಕ್ತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವರ್ಷದ ನಾಗರೀಕ, ವರ್ಷದ ಉದಯೋನ್ಮುಖ ತಾರೆ, ವರ್ಷದ ಪತ್ರಕರ್ತ, ವರ್ಷದ ಸಾಮಾಜಿಕ ಉದ್ಯಮಿ, ವರ್ಷದ ಸರ್ಕಾರಿ ಅಧಿಕಾರಿ, ವರ್ಷದ ನಮ್ಮ ಬೆಂಗಳೂರಿಗ ಎಂಬ ಐದು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಇಂದು ನೀಡಲಾಯಿತು.
ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅರ್ಹರೆಲ್ಲರಿಗೂ ನಿವೃತ್ತ ನ್ಯಾಯಮೂರ್ತಿ ಎನ್.ವೆಂಕಟಾಚಲಯ್ಯ ಅವರು ಹಾಗೂ ಇತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಈ ವರ್ಷದ ಅತ್ಯುತ್ತಮ ನಾಗರೀಕ ಪ್ರಶಸ್ತಿಗೆ ಇತಿಹಾಸಜ್ಞ ಉದಯ್ ಕುಮಾರ್ ಪಿಎಲ್ ಅವರು ಭಾಜನರಾದರು, ಬೆಂಗಳೂರನ್ನು ಕೇಂದ್ರೀಕರಿಸಿ ಅವರು ಮಾಡಿರುವ ಇತಿಹಾಸ ಸಂಶೋಧನೆಗಳನ್ನು ನಮ್ಮ ಬೆಂಗಳೂರು ಫೌಂಡೇಶನ್ ಮತ್ತು ಬೆಂಗಳೂರಿನ ಜನತೆ ಗುರುತಿಸಿದ್ದಾರೆ.

ವರ್ಷದ ರೈಸಿಂಗ್ ಸ್ಟಾರ್ ಪ್ರಶಸ್ತಿ
ವರ್ಷದ ರೈಸಿಂಗ್ ಸ್ಟಾರ್ ಪ್ರಶಸ್ತಿಗೆ ಮೇಘನಾ ಮೂರ್ತಿ ಅವರು ಭಾಜನರಾಗಿದ್ದಾರೆ. 'ನೋಹೆಸೆಟೇಷನ್' ಎಂಬ ಕಾರ್ಯಕ್ರಮದ ಮೂಲಕ ಕಾರ್ಯಾಗಾರಗಳನ್ನು ಹಮ್ಮಿಕೊಂಡು 1200 ಸರ್ಕಾರಿ ಶಾಲಾ ವಿದ್ಯಾರ್ಥಿನಿಯರಿಗೆ ಋತುಚಕ್ರ ಮತ್ತು ಮುಟ್ಟಿನ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಿದ್ದಾರೆ.

ವರ್ಷದ ಸಾಮಾಜಿಕ ಉದ್ಯಮಿ ಪ್ರಶಸ್ತಿ
2019ರ 'ವರ್ಷದ ಸಾಮಾಜಿಕ ಉದ್ಯಮಿ'ಪ್ರಶಸ್ತಿಗೆ ಸ್ವಚ್ಚ ಇಕೋ ಸೊಲ್ಯೂಶನ್ಸ್ ಸಂಸ್ಥೆಯ ಶ್ರೀ ರಾಜೇಶ್ ಬಾಬು & ಶ್ರೀಮತಿ ವಿಕ್ಟೋರಿಯಾ ಜೆ ಡಿಸೋಜಾರವರು ಭಾಜನರಾಗಿದ್ದಾರೆ. ತಂತ್ರಜ್ಞಾನ ಬಳಸಿಕೊಂಡು ಪ್ಲಾಸ್ಟಿಕ್ ತ್ಯಾಜ್ಯವನ್ನು ನವೀನ ಉತ್ಪನ್ನಗಳಾಗಿ ಪರಿವರ್ತಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ವರ್ಷದ ಪತ್ರಕರ್ತ ಪ್ರಶಸ್ತಿ
ವರ್ಷದ ಪತ್ರಕರ್ತ ಪ್ರಶಸ್ತಿಯು ಟೈಮ್ಸ್ ಆಫ್ ಇಂಡಿಯಾದ ರೋಹಿತ್ ಬಿಆರ್ ಅವರಿಗೆ ನೀಡಲಾಗಿದೆ. ನಾಗರೀಕ ಸಮಸ್ಯೆಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಅವರು ವರದಿಗಾರಿಕೆ ಮಾಡಿದ್ದಾರೆ, ಹಾಗಾಗಿ ಅವರನ್ನು ಈ ವರ್ಷದ ಪತ್ರಕರ್ತನಾಗಿ ನಮ್ಮ ಬೆಂಗಳೂರು ಫೌಂಡೇಶ್ ಗುರುತಿಸಿದೆ.

ವರ್ಷದ ಅತ್ಯುತ್ತಮ ಸರ್ಕಾರಿ ಅಧಿಕಾರಿ
ವರ್ಷದ ಅತ್ಯುತ್ತಮ ಸರ್ಕಾರಿ ಅಧಿಕಾರಿ ಪ್ರಶಸ್ತಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಅವರು ಭಾಜನರಾಗಿದ್ದಾರೆ. ಬೆಂಗಳೂರಿನ ಅಳಿವಂಚಿನಲ್ಲಿರುವ ಕಾಡನ್ನು ಉಳಿಸುವಲ್ಲಿ ಅವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ. ಇವರು 130 ಎಕರೆ ಅರಣ್ಯ ಪ್ರದೇಶವನ್ನು ಹಿಂಪಡೆಯುವಲ್ಲಿ ಇವರು ಯಶಸ್ವಿಯಾಗಿದ್ದಾರೆ.
-
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications