ಬೆಂಗಳೂರು: ಪಟಾಕಿ ಸಿಡಿತ, ಈವರೆಗೆ 11 ಜನರ ಕಣ್ಣಿಗೆ ಗಾಯ
ಬೆಂಗಳೂರು, ಅಕ್ಟೋಬರ್ 19: ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸೋದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಹಿನ್ನಲೆಯಲ್ಲಿ ಪಟಾಕಿ ಸಿಡಿಸುವಾಗ ಹಲವರು ಕಣ್ಣು ಕಳೆದುಕೊಂಡಿರುವುದು ಉಂಟು. ಪ್ರತಿವರ್ಷವೂ ಪಟಾಕಿಯಿಂದ ಆಗುವ ಅನಾಹುತದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಲೇ ಇದೆ.ಆದರೂ ಪಟಾಕಿಯಿಂದ ಹಲವು ದುರ್ಘಟನೆಗಳು ನಡೆಯುತ್ತಲೇ ಇವೆ.
ಈ ಬಾರಿಯ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಸಿಡಿತದಿಂದಾಗಿ ಬೆಂಗಳೂರು ನಗರದಲ್ಲಿ ಈ ವರೆಗೆ ಒಟ್ಟು 11 ಜನರು ಗಾಯಗೊಂಡಿರುವುದು ತಿಳಿದುಬಂದಿದೆ.

ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದ್ದರೆ, ಮತ್ತೊಂದೆಡೆ ಪಟಾಕಿ ಅವಘಡಗಳು ನಡೆಯುತ್ತಲೇ ಇವೆ. ಮಾಮುಲುಪೇಟೆಯ ನಿವಾಸಿಯಾದ ಗೋಪಾಲ ಎನ್ನುವರ ಪುತ್ರ ಭಾವಿಷ್ ಪಟಾಕಿ ಸಿಡಿಸಲು ಹೋಗಿ ಕಣ್ಣಿಗೆ ಗಾಯ ಮಾಡಿಕೊಂಡಿದ್ದು, ವಿಂಟೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಎಲ್ ಆರ್ ನಗರದ ನಿವಾಸಿಯಾದ ಶಾರುಕ್ ಎನ್ನುವರು ಬುಧವಾರ ರಾತ್ರಿ ಮನೆಗೆ ತೆರಳುತ್ತಿರುವ ವೇಳೆ ಬೇರೆಯವರು ಹಚ್ಚಿದ ರಾಕೆಟ್ ಪಟಾಕಿ ಬಂದು ಕಣ್ಣಿ ತಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಇಲ್ಲಿಯವರೆಗೆ ಒಟ್ಟು 8 ಜನರು ಚಿಕಿತ್ಸೆ ಪಡೆದಿದ್ದಾರೆ. ರಾಜಾಜಿನಗರದಲ್ಲಿ 5 ಜನ, ಬನ್ನೇರುಘಟ್ಟ ಆಸ್ಪತ್ರೆಯಲ್ಲಿ ಒಬ್ಬರು, ಬೊಮ್ಮಸಂದ್ರದಲ್ಲಿ 2.
ಇನ್ನು ವಿಂಟೋ ಆಸ್ಟತ್ರೆಯಲ್ಲಿ ಈವರೆಗೆ ಒಟ್ಟು 3 ಜನರು ದಾಖಲಾಗಿದ್ದಾರೆ ಎಂದು ವರದಿ ಸಿಕ್ಕಿದೆ. ಅಷ್ಟೇ ಅಲ್ಲದೇ ಪಟಾಕಿ ಅನಾಹುತದಲ್ಲಿ ಕಣ್ಣಿಗೆ ಗಾಯ ಮಾಡಿಕೊಂಡು ಹೊರ ರೋಗಿಯಾಗಿ ನಗರದ ಇತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಮಿಂಟೋ ಹಾಸ್ಪಿಟಲ್ ಬಗ್ಗೆ:1913 ರಲ್ಲಿ ಆರಂಭವಾದ ಮಿಂಟೋ ಹಾಸ್ಪಿಟಲ್ ಲಕ್ಷಾಂತರ ಜನರ ಕಣ್ಣಿನ ದೋಷಗಳನ್ನು ನಿವಾರಿಸಿಕೊಂಡು ಬಂದಿದೆ. ಬೆಂಗಳೂರಿನ ಹೆಮ್ಮೆಯ ಸರಕಾರಿ ಆಸ್ಪತ್ರೆಗಳಲ್ಲಿ ಒಂದಾದ ಇಲ್ಲಿ 300 ಹಾಸಿಗೆ ಇದೆ. ಈ ಆಸ್ಪತ್ರೆ ಹೆಚ್ಚು ಸುದ್ದಿ ಮಾಡುವುದು ದೀಪಾವಳಿ ಹಬ್ಬ ಬಂದಾಗ. ಕಣ್ಣಿಗೆ ಪಟಾಕಿ ಕಿಡಿ ಬಡಿದು ಚಿಕಿತ್ಸೆಗಾಗಿ ಪ್ರತೀವರ್ಷ ನೂರಾರು ಜನ ಇಲ್ಲಿಗೆ ಬರ್ತಾರೆ. ಈ ವರ್ಷವೂ ಅದೇ ಕತೆ, ಅದೇ ವ್ಯಥೆ.
ಮಿಂಟೋ ಆಸ್ಪತ್ರೆ ಚಾಮರಾಜಪೇಟೆಯ ಆಲ್ಬರ್ಟ್ ವಿಕ್ಟರ್ ರೋಡಿನಲ್ಲಿದೆ. ಹಳೇ ತರಗುಪೇಟೆಯ ಹೆಬ್ಬಾಗಿಲು. ವಾಣಿವಿಲಾಸ ಆಸ್ಪತ್ರೆಯ ಹಿಂದುಗಡೆ. ಚಾಮರಾಜಪೇಟೆ ಪೊಲೀಸ್ ಸ್ಟೇಷನ್ನಿನ ಎದರುಗಡೆ. ಟಿಪು ಸುಲ್ತಾನ್ ಅರಮನೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೂಗಳತೆ ದೂರದಲ್ಲಿದೆ. ದೂರವಾಣಿ: 080-2670 7176/ 080-26702322.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications