ಪೆರೋಲ್ ರಜೆ ಮೇಲೆ ತೆರಳಿದ 11 ಕೈದಿಗಳು ವಾಪಸು ಜೈಲಿಗೆ ಬಂದಿಲ್ಲ!
ಬೆಂಗಳೂರು, ಜು. 17: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳು ಜೈಲು ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ್ದಾರೆ. ಪೆರೋಲ್ ರಜೆ ಮೇಲೆ ತೆರಳಿರುವ ಹನ್ನೊಂದು ಮಂದಿ ಕೈದಿಗಳು ರಜೆ ಅವಧಿ ಮುಗಿದರೂ ವಾಪಸು ಜೈಲಿಗೆ ಬಂದಿಲ್ಲ. ಪೆರೋಲ್ ರಜೆ ಮೇಲೆ ಕೈದಿಗಳನ್ನು ಮೂರು ತಿಂಗಳ ರಜೆ ಮೇಲೆ ಕಳಿಸಿದ ಜೈಲು ಅಧಿಕಾರಿಗಳು ಇದೀಗ ಇಂಗು ತಿಂದ ಮಂಗನಂತಾಗಿದ್ದಾರೆ.
ಜೀವಾವಧಿ ಅಥವಾ ಬೇರೆ ಯಾವುದೇ ಶಿಕ್ಷೆಗೆ ಗುರಿಯಾಗುವ ಕೈದಿಗಳಿಗೆ ವರ್ಷದಲ್ಲಿ ಮೂರು ತಿಂಗಳು ರಜೆ ಹೋಗಲು ಅವಕಾಶ ನೀಡಲಾಗಿದೆ. ಕೈದಿಗಳು ಜೈಲಿನಲ್ಲಿ ತೋರುವ ಸನ್ನಡತೆ ಆಧಾರದ ಮೇಲೆ ಪೆರೋಲ್ ರಜೆ ಮೇಲೆ ಕಳಿಸಲಾಗುತ್ತದೆ. ಆದರೆ ಭ್ರಷ್ಟ ಅಧಿಕಾರಿಗಳು ಕೈದಿಗಳಿಂದ ಬಿಡಿಗಾಸಿಗೆ ಕೈ ಚಾಚಿ ಅನರ್ಹರನ್ನು ಸಹ ಪೆರೋಲ್ ಮೇಲೆ ಕಳಿಸುತ್ತಾರೆ. ಪೆರೋಲ್ ರಜೆ ಮೇಲೆ ಹೊರ ಬರುವ ಕೈದಿಗಳು ಕೆಲವರು ಸನ್ನಡತೆಯಿದ ಮನೆಯಲ್ಲಿ ಕುಟುಂಬದ ಜತೆ ಕಾಲ ಕಳೆದು ವಾಪಸು ಜೈಲಿಗೆ ಬರುತ್ತಾರೆ. ಇನ್ನೂ ಕೆಲವರು ಜೈಲಿನಿಂದ ಹೊರಗೆ ಹೋಗಿ ಮಾಡಬಾರದ ಕೃತ್ಯಗಳನ್ನು ಮಾಡಿ ಬರುತ್ತಾರೆ. ಅಂತಹ ಅಪರಾಧಗಳು ಬಹುತೇಕ ಬರುವುದೇ ಇಲ್ಲ. ಈ ಸತ್ಯ ಗೊತ್ತಿದ್ದರೂ ಕೈದಿಗಳನ್ನು ಪೆರೋಲ್ ರಜೆ ಮೇಲೆ ಕಳುಹಿಸಲಾಗುತ್ತದೆ.
ಹನ್ನೊಂದು ಕೈದಿಗಳು ಎಸ್ಕೇಪ್ : ಜೀವಾವಧಿ, ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ಹನ್ನೊಂದು ಮಂದಿ ಕೈದಿಗಳು ಮೂರು ತಿಂಗಳ ಪೆರೋಲ್ ರಜೆ ಮೇಲೆ ತೆರಳಿದ್ದರು. ರಜೆ ಮೇಲೆ ಹೋಗಿದ್ದ ಅನೇಕರು ವಾಪಸು ಬಂದಿದ್ದಾರೆ. ಹನ್ನೊಂದು ಮಂದಿ ಕೈದಿಗಳು ವಾಪಸು ಬಂದಿಲ್ಲ. ಪೆರೋಲ್ ರಜೆ ಮೇಲೆ ಹೋಗಿರುವರ ಬಗ್ಗೆ ಸ್ಥಳೀಯ ಪೊಲೀಸರಿಗೂ ಮಾಹಿತಿ ಇಲ್ಲ.ಹೀಗಾಗಿ ಕಾರಾಗೃಹ ಅಧಿಕಾರಿಗಳು ತಲೆ ಚಚ್ಚಿಕೊಳ್ಳುವಂತಾಗಿದೆ.

Recommended Video
ಸನ್ನಡತೆ ಆಧಾರದ ಮೇಲೆ ಪೆರೋಲ್ ರಜೆ ಮೇಲೆ ಹೋಗುವ ಕೈದಿಗಳು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸಹಿ ಹಾಕಬೇಕು. ಈ ಮೂಲಕ ತನ್ನ ಇರುವಿಕೆಯನ್ನು ಕಾರಾಗೃಹ ಸಿಬ್ಬಂದಿಗೆ ಖಚಿತ ಪಡಿಸಬೇಕು. ಕಾರಾಗೃಹ ಅಧಿಕಾರಿಗಳು ಮಾಡಿರುವ ಎಡವಟ್ಟಿಗೆ ಇದೀಗ ಜೈಲು ಅಧಿಕಾರಿಗಳಲ್ಲಿ ನಡುಕ ಹುಟ್ಟಿದೆ. ಪೆರೋಲ್ ರಜೆ ಮೇಲೆ ಹೋದವರು ಈವರೆಗೂ ಬಂದಿಲ್ಲ. ಮೂರು ತಿಂಗಳ ರಜೆ ಅದಿ ಮುಗಿದು ಒಂದು ತಿಂಗಳು ಆದರೂ ಬಂದಿಲ್ಲ. ಹೀಗಾಗಿ ಕಣ್ಮರೆಯಾಗಿರುವ ಶಿಕ್ಷಾ ಬಂಧಿಗಳನ್ನು ಹುಡುಕುವ ಕಾರ್ಯಕ್ಕೆ ಕಾರಾಗೃಹ ಇಲಾಖೆ ಅಧಿಕಾರಿಗಳೇ ಮುಂದಾಗಿದ್ದರೆ. ಪೆರೋಲ್ ರಜೆ ಮೇಲೆ ತೆರಳಿದವರು ನಿಗದಿತ ಕಾಲ ಮಿತಿಯಲ್ಲಿ ಬರದಿದ್ದರೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು. ಸಿಕ್ಕಿಬಿದ್ದು ಕಾರಾಗೃಹಕ್ಕೆ ತೆರಳಿದರೆ ಮತ್ತೆ ಅವರಿಗೆ ಪೆರೋಲ್ ರಜೆ ಸೌಲಭ್ಯ ಸಿಗುವುದಿಲ್ಲ. ಜತೆಗೆ ಹದಿನೈದು ತಿಂಗಳ ತುರ್ತು ರಜೆ ಕೂಡ ಸಿಗುವುದಿಲ್ಲ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications