ನೈಸ್ ರಸ್ತೆಯಲ್ಲಿ ಯುವತಿಯರ ತೋರಿಸಿ ಸುಲಿಗೆ, 12 ಜನರ ಬಂಧನ
ಬೆಂಗಳೂರು, ಜೂನ್ 16: ಇಲ್ಲಿ ನೈಸ್ ರಸ್ತೆಯಲ್ಲಿ ಯುವತಿಯರನ್ನು ಬಳಸಿಕೊಂಡು ಸಾರ್ವಜನಿಕರ ಸುಲಿಗೆ ಮಾಡುತ್ತಿದ್ದ ದರೋಡೆಕೋರರ ತಂಡವನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.
ಮೋನಿಷಾ(20) ಎನ್ನುವಳನ್ನು ನೈಸ್ ರಸ್ತೆಯಲ್ಲಿ ನಿಲ್ಲಿಸಿ ವಾಹನ ಸವಾರರನ್ನು ಆಕರ್ಷಿಸಿ ಲೈಂಗಿಕ ಕ್ರಿಯೆ ನಡೆಸಲು ನಿರ್ಜನ ಪ್ರದೇಶಕ್ಕೆ ಕರೆತಂದು ಬಳಿಕ ಸುಲಿಗೆ ಮಾಡುತ್ತಿದ್ದ ಮಹಿಳೆ ಸೇರಿ ಒಟ್ಟು 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಈ ತಂಡ ಸುಮಾರು 25 ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದೆ.

ತಮಿಳುನಾಡು ಹಾಗೂ ಕೇರಳ ಮತ್ತು ಬೆಂಗಳೂರು ನಗರದವರಾದ ಮೋನಿಷಾ(20), ಸಾವಾನ್ ಅಲಿಯಾಸ್ ಬಬ್ಲು, ಮುತ್ತುರಾಜ್, ಪುನೀತ್ ಅಲಿಯಾಸ್ ಕಾಡಿ, ತುಳಸಿರಾಮ್, ಅರುಣ್ ಏಸುರಾಜ್, ಸ್ಟೀಫನ್ ರಾಜ್ ಅಲಿಯಾಸ್ ಮುಕುಡಿ, ವಿಗ್ನೇಶ್ ಅಲಿಯಾಸ್ ದೀಲಾ, ಅಮರ್, ಶಾಂತ್ ಕುಮಾರ್, ಕೇಶವಮೂರ್ತಿ, ಮತ್ತು ದೀಪಕ್ ಗಾರ್ಗ್ ಬಂಧಿತ ಆರೋಪಿಗಳು.
ಪ್ರಮುಖ ಆರೋಪಿ ಸಾವನ್ ಅಲಿಯಾಸ್ ಬಬ್ಲು ಎಲೆಕ್ಟ್ರಾನಿಕ್ ಸಿಟಿಯ ನೈಸ್ ರಸ್ತೆಯಲ್ಲಿ ಮೊನಿಷಾಳನ್ನು ನಿಲ್ಲಿಸಿ ವಾಹನ ಸವಾರರನ್ನು ಸೆಳೆದು ಅವರಿಗೆ ಅನುಮಾನ ಬರದಂತೆ ರಸ್ತೆಯ ಪಕ್ಕದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಬರಲಾಗುತ್ತಿತ್ತು.
ಅಲ್ಲಿ ಮಾರಕಾಸ್ತ್ರಗಳೊಂದಿಗೆ ಸಜ್ಜಾಗಿರುತ್ತಿದ್ದ ಆರೋಪಿಗಳು ಅವರ ಬಳಿ ಇದ್ದ ಹಣ, ಚಿನ್ನಾಭರಣ ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ಸುಲಿಗೆ ಮಾಡುತ್ತಿದ್ದರು.
ಬಬ್ಲು ವರ್ತನೆಯಿಂದ ಅನುಮಾನಗೊಂಡ ಪೊಲೀಸರು ಆತನನ್ನು ಕರೆದು ವಿಚಾರಣೆ ನಡೆಸಿದಾಗ ತಮ್ಮ ಕಾಯಕವನ್ನು ಬಹಿರಂಗ ಪಡಿಸಿದ್ದಾನೆ. ಬಳಿಕ ಕಾರ್ಯಚರಣೆಗಿಳಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತವರ ಸಿಬ್ಬಂದಿ ಗ್ಯಾಂಗ್ ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications