Boy Missing: ಬೆಂಗಳೂರಿನ ವೈಟ್ಫೀಲ್ಡ್ನಿಂದ ಬಾಲಕ ನಾಪತ್ತೆ: ಪ್ರಕರಣ ದಾಖಲು!
ಬೆಂಗಳೂರು ಜನವರಿ 23: 12 ವರ್ಷದ ಬಾಲಕ ಟ್ಯೂಷನ್ನಿಂದ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಒಂದೆರಡು ಕಡೆ ಬಾಲಕ ಕಂಡುಬಂದಿದ್ದು, ಆತ ಎಲ್ಲಿದ್ದಾನೆ ಎಂಬುದು ತಿಳಿದುಬಂದಿಲ್ಲ. ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಗುಂಜೂರಿನ ದೀನ್ ಅಕಾಡೆಮಿಯ 6ನೇ ತರಗತಿ ವಿದ್ಯಾರ್ಥಿ ಪರಿಣವ್ ಜನವರಿ 21ರ ಭಾನುವಾರದಿಂದ ನಾಪತ್ತೆಯಾಗಿದ್ದಾನೆ. ಪರಿಣವ್ ಸುಕೇಶ್ ಮತ್ತು ನಿವೇದಿತಾ ದಂಪತಿಯ ಪುತ್ರ. ಭಾನುವಾರದಂದು ಆತನ ತಂದೆ ವೈಟ್ಫೀಲ್ಡ್ನಲ್ಲಿರುವ ಅಲೆನ್ ಟ್ಯುಟೋರಿಯಲ್ ತರಗತಿಗೆ ಡ್ರಾಪ್ ಮಾಡಿದ್ದರು. ಅವನ ತಂದೆ ಅವನನ್ನು ಟ್ಯೂಷನ್ ಮುಗಿದ ಬಳಿಕ ಕರೆದುಕೊಂಡು ಹೋಗಬೇಕಾಗಿತ್ತು. ಆದರೆ ತಂದೆ ಬರುವುದು ಕೊಂಚ ತಡವಾಗಿದೆ. ಆ ಹೊತ್ತಿಗೆ ಪರಿಣವ್ ತರಗತಿಯಿಂದ ಹೊರಟು ಹೋಗಿದ್ದನು.

ಕುಂದಲಹಳ್ಳಿ ಗೇಟ್ ಮತ್ತು ಮಾರತ್ತಹಳ್ಳಿ ಸೇತುವೆ ನಡುವಿನ ಕಾವೇರಿ ಆಸ್ಪತ್ರೆಯ ಸಿಸಿಟಿವಿಯಲ್ಲಿ ಪರಿಣವ್ ಮಧ್ಯಾಹ್ನ 2:30ಕ್ಕೆ ಸೆರೆಯಾಗಿದ್ದಾರೆ. ಮಧ್ಯಾಹ್ನ 3:04 ಕ್ಕೆ ಮಾರತ್ತಹಳ್ಳಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಹತ್ತುತ್ತಿರುವಾಗ ಬಾಲಕ ಕಾಣಿಸಿಕೊಂಡಿದ್ದಾನೆ.
Still missing.
— Whitefield Rising (@WFRising) January 22, 2024
Parinav was last seen boarding a bmtc bus at 3.04 pm, Jan 21, 2024.
Route number, and other footage details are being investigated by the @wfieldps https://t.co/HUseuKTF13 pic.twitter.com/Cr1jdg1jke
ಮಾರತ್ತಹಳ್ಳಿ ಮಾರುಕಟ್ಟೆಯಲ್ಲಿ ಪರಿಣವ್ ಇಳಿದಿರುವುದು ಸೆರೆಯಾಗಿದೆ. ಪೊಲೀಸರು ಬಸ್ನ ಜಾಡು ಹಿಡಿದು ಕಂಡಕ್ಟರ್ನನ್ನು ವಿಚಾರಿಸಿದ್ದಾರೆ. ಹುಡುಗನ ಬಳಿ ಹಣ ಸೀಮಿತವಾಗಿತ್ತು ಎಂದು ಕಂಡಕ್ಟರ್ ಹೇಳಿದ್ದಾರೆ. ಕಂಡಕ್ಟರ್ ಟಿಕೆಟ್ ಕೊಡಲು ಮುಂದಾದಾಗ ಪರಿಣವ್ ಹಣವಿಲ್ಲವೆಂದು ಹೇಳಿದ್ದು ಆತನನ್ನು ಬಸ್ನಿಂದ ಕೆಳಗಿಳಿಸಲಾಗಿದೆ ಎಂದು ಕಂಡಕ್ಟರ್ ಹೇಳಿದ್ದಾರೆ.
ಯಮಲೂರು ಬಳಿ ಮಧ್ಯಾಹ್ನ 3:11 ರ ಸುಮಾರಿಗೆ ಪೆಟ್ರೋಲ್ ಬಂಕ್ ಬಳಿ ನಡೆದುಕೊಂಡು ಹೋಗುತ್ತಿದ್ದ ಬಾಲಕನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರನೇ ತರಗತಿಯ ಹುಡುಗ ಕೊನೆಯದಾಗಿ ಹಳದಿ ಬಣ್ಣದ ಟೀ ಶರ್ಟ್ ಧರಿಸಿ ಕಪ್ಪು ಪ್ಯಾಂಟ್ ಮತ್ತು ಸ್ಕೂಲ್ ಬ್ಯಾಗ್ ಧರಿಸಿದ್ದು ಕಂಡು ಬಂದಿದೆ. ಮಾರತ್ತಹಳ್ಳಿಯಲ್ಲಿ ಬಾಲಕನ ಉಪಸ್ಥಿತಿಯ ಬಗ್ಗೆ ಬಾಲಕನ ಪೋಷಕರು ಗೊಂದಲಕ್ಕೊಳಗಾಗಿದ್ದಾರೆ. ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
-
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications