ಬೆಂಗಳೂರಿನಲ್ಲಿ ರಸ್ತೆ ನಿಯಮ ಉಲ್ಲಂಘನೆ ದಂಡ ಸಂಗ್ರಹದಲ್ಲಿ ಶೇ.120ರಷ್ಟು ಹೆಚ್ಚಳ
ಬೆಂಗಳೂರು, ಜನವರಿ 5: ಬೆಂಗಳೂರಿನಲ್ಲಿ ಮೋಟಾರು ವಾಹನ ಅಪಘಾತಗಳ ಸಂಖ್ಯೆ ನಿಧಾನಗತಿಯಲ್ಲಿ ಕಡಿಮೆಯಾಗಿದ್ದು, ರಸ್ತೆ ನಿಯಮ ಉಲ್ಲಂಘಿಸಿ ಅಪರಾಧ ಎಸಗುವ ವಾಹನ ಚಾಲಕರಿಂದ ಸಂಗ್ರಹಿಸಲಾದ ದಂಡಗಳು ಬರೋಬ್ಬರಿ ಶೇಕಡ 120ರಷ್ಟು ಹೆಚ್ಚಾಗಿವೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿಶೇಷ ಪೊಲೀಸ್ ಕಮಿಷನರ್ (ಸಂಚಾರ) ಎಂಎ ಸಲೀಂ ಮಾತನಾಡಿ, "ರಸ್ತೆ ಸುರಕ್ಷತೆಯ ಅಭಿಯಾನದ ಜೊತೆಗೆ ಕಾನೂನು ಜಾರಿ ಪ್ರಮುಖ ಆದ್ಯತೆಯಾಗಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಶೀತ ವಾತಾವರಣ ಮತ್ತು ಹಬ್ಬದ ಕಾರಣ ಮದ್ಯಪಾನದಿಂದ ಅಪಘಾತಗಳು ಹೆಚ್ಚಾಗುತ್ತವೆ ಎಂದು ನಾವು ಕುಡಿದು ವಾಹನ ಚಲಾಯಿಸುವುದರ ವಿರುದ್ಧ ವ್ಯಾಪಕ ಅಭಿಯಾನವನ್ನು ನಡೆಸಿದ್ದೇವೆ. ನಮ್ಮ ಅಭಿಯಾನವು ಫಲ ನೀಡಿದೆ ಎಂದು ತಿಳಿಸಿದ್ದಾರೆ.
2018 ರಿಂದ ಅಪಘಾತಗಳು 17% ಕಡಿಮೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಕೋವಿಡ್ ರೋಗದ ಬಳಿಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತುಸು ಅಪರಾಧ ಪ್ರಕರಣಗಳು ಇಳಿಕೆ ಆಗಿವೆ. ಕಳೆದ 2022ರಲ್ಲಿ 172 ಕೊಲೆಗಳು ನಡೆದಿದ್ದು, ಡಕಾಯಿತಿ, ಕಳ್ಳತನ ಪ್ರಕರಣಗಳು ಸಹ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರಲ್ಲಿ 2022ರ ಒಂದೇ ವರ್ಷದಲ್ಲಿ ಒಟ್ಟು 172 ಕೊಲೆಯ ಪ್ರಕರಣಗಳು ದಾಖಲಾಗಿದ್ದು, 2021ರಲ್ಲಿ 154, 2020 ರಲ್ಲಿ 177 ಹಾಗೂ 2019 ರಲ್ಲಿ 204 ಹತ್ಯೆಗಳು ನಡೆದಿವೆ ಎಂದು ವರದಿ ತಿಳಿಸಿದೆ. 2019ರಲ್ಲಿ 39 ಕಂಡು ಬಂದಿದ್ದ ಡಕಾಯಿಟಿ ಪ್ರಕರಣಗಳು 2022 ರಲ್ಲಿ 23ಕ್ಕೆ ಇಳಿಯುವ ಮೂಲಕ ಶೇ.41ರಷ್ಟು ಕಡಿಮೆ ಆಗಿದೆ ಎಂದು ತಿಳಿದು ಬಂದಿದೆ.
ಕಳೆದ ವರ್ಷದಲ್ಲಿ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತು ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದು, 2022 ರಲ್ಲಿ (ನವೆಂಬರ್ 30 ರವರೆಗೆ) ಫುಟ್ಪಾತ್ ಪಾರ್ಕಿಂಗ್ ಪ್ರಕರಣಗಳು 1,40,086 ಎಂದು ಹೇಳಿದೆ. ಫುಟ್ಪಾತ್ ಪಾರ್ಕಿಂಗ್ ಪ್ರಕರಣಗಳ ಸಂಖ್ಯೆಯು 2021 ರಿಂದ 87% ರಷ್ಟು ಏರಿಕೆ ಕಂಡಿದೆ. 2021 ಮತ್ತು 2020 ರಲ್ಲಿ, ಪ್ರಕರಣಗಳ ಸಂಖ್ಯೆ ಕ್ರಮವಾಗಿ 74,851 ಮತ್ತು 45,455 ಆಗಿತ್ತು.
ಫುಟ್ಪಾತ್ಗಳಲ್ಲಿ ವಾಹನ ನಿಲುಗಡೆ ಮಾಡುವ ಜನರ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಗಂಭೀರ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ವಿಶೇಷ ಪೊಲೀಸ್ ಕಮಿಷನರ್ (ಸಂಚಾರ) ಎಂ ಎ ಸಲೀಂ ಅವರು ತಿಳಿಸಿದ್ದು, ಸಾರ್ವಜನಿಕರ ಈ ನಡವಳಿಕೆಯನ್ನು ಅವರು ಅಸಂಸ್ಕೃತ ಎಂದು ಜರೆದಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ











Click it and Unblock the Notifications