ಕುಡಿದ ಮತ್ತಿನಲ್ಲಿ ಶಾಲಾ ಬಸ್ ಚಾಲನೆ, ಡಿಕ್ಕಿ, 13 ವಿದ್ಯಾರ್ಥಿಗಳಿಗೆ ಗಾಯ
ಬೆಂಗಳೂರು, ಫೆಬ್ರವರಿ 11: ಕುಡಿದ ಮತ್ತಿನಲ್ಲಿ ಶಾಲಾ ಬಸ್ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಈ ಘಟನೆ ಬೆಂಗಳೂರಿನ ಬಾಗಲೂರು ಸಂತೆ ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ನಾಗಾರ್ಜುನ ಕಾಲೇಜು ಬಸ್ಗೆ ಡಿಕ್ಕಿ ಹೊಡೆದಿದೆ. ಹದಿಮೂರು ವಿದ್ಯಾರ್ಥಿಗಳು ಗಾಯಗೊಂಡುದ್ದಾರೆ.ಡೆಲ್ಲಿ ಪಬ್ಲಿಕ್ ಶಾಲಾ ಬಸ್ ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ
ಘಟನೆಯಲ್ಲಿ ನಿತೀಶ್ ಎಂಬ ವಿದ್ಯಾರ್ಥಿಗೆ ಕಾಲು ಮುರಿದಿದೆ. ಪಬ್ಲಿಕ್ ಸ್ಕೂಲ್ ಬಸ್ ಚಾಲಕ ಘಟನೆ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ್ದಾರೆ. ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ: ಸಿಐಡಿಗೆ ಪತ್ರ
ಮೊದಲಿಗೆ ರಸ್ತೆ ಪಕ್ಕದಲ್ಲಿ ನಿಂತಿದ್ದ ನಾಗಾರ್ಜುನ ಕಾಲೇಜ್ ಬಸ್ಗೆ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಬಳಿಕ ಟ್ರಾನ್ಸ್ಫಾರಂಗೆ ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.