ಬೆಂಗಳೂರನ್ನೆ ಬೆಚ್ಚಿ ಬೀಳಿಸಿದ ಘಟನೆ: 5 ಲಕ್ಷಕ್ಕಾಗಿ ಟ್ಯೂಷನ್ ಹೋಗಿ ಬರುವ ವೇಳೆ ಬಾಲಕ ನಿಶ್ಚಿತ್ನ ಕಿಡ್ನಾಪ್ ಮಾಡಿ ಕೊಲೆ!
ಬೆಂಗಳೂರು, ಆಗಸ್ಟ್ 01: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೊಬ್ಬರ ಪುತ್ರನನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಅರಕೆರೆಯ ವಿಜಯ ಬ್ಯಾಂಕ್ ಕಾಲೋನಿಯ ಜೆ.ಸಿ. ಅಶ್ವತ್ಥ್ ಅವರ ಪುತ್ರ ನಿಶ್ಚಿತ್(13) ಹತ್ಯೆಯಾದ ಬಾಲಕ. 13 ವರ್ಷದ ಬಾಲಕ ನಿಶ್ಚಿತ್ ನನ್ನು ಟ್ಯೂಷನ್ ಗೆ ಹೋಗಿ ಬರುವ ವೇಳೆ ಕಿಡ್ನಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಟ್ಯೂಷನ್ ಗೆ ಹೋಗಿದ್ದ ಬಾಲಕ ಮನೆಗೆ ಬಾರದಿದ್ದಾಗ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣೆ ಡಿಸಿಪಿ ನಾರಾಯಣ್ ಸೇರಿದಂತೆ ಹಿರಿಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಪೋಷಕರಿಗೆ ಕರೆ ಮಾಡಿದ್ದ ಅಪಪಹರಣಕಾರರು 5 ಲಕ್ಷ ಹಣಕ್ಕೆ ಒತ್ತಾಯಿಸಿದ್ದರು. ಆದರೆ, ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚುವ ವೇಳೆಗೆ ಕೊಲೆ ಮಾಡಿದ್ದಾರೆ. ನಿಶ್ಚಿತ್ ಮನೆಯ ಸಮೀಪ ಟ್ಯೂಷನ್ ಗೆ ಹೋಗಿ ಮರಳುವಾಗ ಗುರುವಾರ ಸಂಜೆ 7:30ಕ್ಕೆ ಅಪಹರಿಸಿದ ದುಷ್ಕರ್ಮಿಗಳು ಬನ್ನೇರುಘಟ್ಟ ರಸ್ತೆಯ ಸಮೀಪ ಕತ್ತು ಸೀಳಿ ಕೊಲೆ ಮಾಡಿ ಶವಕ್ಕೆ ಬೆಂಕಿ ಹಚ್ಚಿದ್ದಾರೆ. ಆನೇಕಲ್ ತಾಲೂಕು ವ್ಯಾಪ್ತಿಯ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿತ್ತು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಲಕನೇ ಕೃತ್ಯದ ಹಿಂದಿದ್ದಾನೆ ಎನ್ನಲಾಗಿದೆ.

ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚುವ ವೇಳೆಗೆ ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ 6 ಸುತ್ತು ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿದೆ. ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಎಂಬುವರನ್ನು ಬಂಧಿಸಲಾಗಿದೆ. ಇನ್ಸ್ಪೆಕ್ಟರ್ ಕುಮಾರಸ್ವಾಮಿ ಮತ್ತು ಪಿಎಸ್ಐ ಅರವಿಂದ ಕುಮಾರ್ ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. 5 ಲಕ್ಷಕ್ಕೆ ಪೋಷಕರಿಂದ ಡಿಮ್ಯಾಂಡ್ ಮಾಡಿದ ದುಷ್ಕರ್ಮಿಗಳು, ಬಳಿಕ ಬಾಲಕನ ಕೊಲೆ ಮಾಡಿದ್ದಾರೆ. ಸುಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ನಗರದ ಆಗ್ನೇಯ ಭಾಗದಲ್ಲಿ 13 ವರ್ಷದ ಬಾಲಕನನ್ನು ಅಪರಿಚಿತ ಶಂಕಿತರು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನೇರುಘಟ್ಟ ರಸ್ತೆಯ ಬಳಿ ನಗರದ ಹೊರವಲಯದಲ್ಲಿ ಮೃತನ ಶವವನ್ನು ಛಿದ್ರಗೊಳಿಸಿ ಸುಟ್ಟು ಹಾಕಲಾಗಿದೆ. ಪೊಲೀಸರ ಪ್ರಕಾರ, ಅರೆಕೆರೆಯ ನಿವಾಸಿಗಳಾದ ಮೃತನ ಪೋಷಕರು ಜುಲೈ 30 ರಂದು ರಾತ್ರಿ 10.30 ಕ್ಕೆ ತಮ್ಮ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು.
8 ನೇ ತರಗತಿಯ ಬಾಲಕ ಟ್ಯೂಷನ್ಗೆ ಹಾಜರಾಗಲು ಸಂಜೆ 5 ಗಂಟೆಗೆ ತನ್ನ ಸೈಕಲ್ನಲ್ಲಿ ಮನೆಯಿಂದ ಹೊರಟಿದ್ದ ಎಂದು ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ. ಆದರೆ, ಅವನು ರಾತ್ರಿ 8 ಗಂಟೆಯವರೆಗೆ ಹಿಂತಿರುಗಲಿಲ್ಲ. ವಿಚಾರಿಸಿದಾಗ, ಟ್ಯೂಷನ್ ಶಿಕ್ಷಕರು ಪೋಷಕರಿಗೆ ಬಾಲಕ ಸಂಜೆ 7.30 ಕ್ಕೆ ಹೊರಟಿದ್ದ ಎಂದು ತಿಳಿಸಿದ್ದಾರೆ. ತೀವ್ರ ಹುಡುಕಾಟ ನಡೆದಾಗ, ಪೋಷಕರು ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಅರಿಕೆರೆಯ ಶಾಂತಿನಿಕೇತನ ಲೇಔಟ್ನಲ್ಲಿರುವ ಉದ್ಯಾನವನದಲ್ಲಿ ಬಾಲಕನ ಸೈಕಲ್ ಅನ್ನು ಸಿಕ್ಕಿದೆ. ನಂತರ ಅವರು ಸಂಬಂಧಿಕರು ಮತ್ತು ಬಾಲಕನ ಸ್ನೇಹಿತರನ್ನು ಸಂಪರ್ಕಿಸಿದ ನಂತರ ದೂರು ದಾಖಲಿಸಿದರು.
ಇನ್ಸ್ಪೆಕ್ಟರ್ ಕುಮಾರಸ್ವಾಮಿ ಮತ್ತು ಪಿಎಸ್ಐ ಅರವಿಂದ ಕುಮಾರ್ ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರೂ ಆರೋಪಿಗಳನ್ನು ತಕ್ಷಣವೇ ವಶಕ್ಕೆ ತೆಗೆದುಕೊಂಡು ಪ್ರಾಥಮಿಕ ಚಿಕಿತ್ಸೆಗಾಗಿ ಜಯನಗರ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಚಾಲಕರಾಗಿ ಕೆಲಸ ಮಾಡುತ್ತಿದ್ದ ಆರೋಪಿಗಳು ನಿಶ್ಚಿತ್ ಅವರ ತಂದೆಯ ಪರಿಚಯಸ್ಥರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಅವರ ಕುಟುಂಬದ ಹಿನ್ನೆಲೆಯ ಬಗ್ಗೆ ತಿಳಿದುಕೊಂಡ ನಂತರ ಹಣ ಸುಲಿಗೆ ಮಾಡುವ ಉದ್ದೇಶದಿಂದ ಅವರು ಹುಡುಗನನ್ನು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಣಕ್ಕೆ ಬೇಡಿಕೆ ಇಟ್ಟ ನಂತರ, ಅವರು ಹುಡುಗನ ಗಂಟಲು ಸೀಳಿ ಕೊಲೆ ಮಾಡಿ, ದೇಹವನ್ನು ಸುಟ್ಟು ಸಾಕ್ಷ್ಯಗಳನ್ನು ನಾಶಮಾಡಲು ಪ್ರಯತ್ನಿಸಿದರು ಎನ್ನಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications