ಅಡ್ಡ ಪರಿಣಾಮ ಬೀರದ ಆಯುರ್ವೇದ ಉತ್ಪನ್ನಗಳು
ಬೆಂಗಳೂರು, ಮಾ. 11: ಆಯುರ್ವೇದ ಮಾರುಕಟ್ಟೆಯಲ್ಲಿ ಹೆಸರು ಸಾಧಿಸಿರುವ ಶತಾಯು ಆಯುರ್ವೇದ ಸಂಸ್ಥೆ 14 ಬಗೆಯ ಆಯುರ್ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಸಾವಯವ ಚ್ಯವನಪ್ರಾಶ ಲೇಹ, ಅಶ್ವಗಂಧ ಲೇಹ, ಶತಾವರಿ ಲೇಹ, ತ್ರಿಫಲ ಗುಳಿಗೆ, ಟರ್ಮೆರಿಕ್, ತುಳಸಿ, ಅಮಲಕಿ, ನೀಮ್, ಭೂಮಿಅಮಲಕಿ, ಬ್ರಾಹ್ಮಿ, ಗುಡುಚಿ, ತ್ರಿಕಟು, ಮಧುನಾಶಿನಿ, ಹಿಂಗ್ವಾಸ್ಟಕ ಮಾತ್ರೆಗಳನ್ನು ಸಂಸ್ಥೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.[ಜಯನಗರ ಸೌತ್ ಎಂಡ್ ವೃತ್ತಕ್ಕೀಗ 'ಸಂಜೀವಿನಿ' ಶಕ್ತಿ]

ಸಿಂಥಟಿಕ್ ಗೊಬ್ಬರ, ತ್ಯಾಜ್ಯ, ನ್ಯಾನೊ ಉತ್ಪನ್ನಗಳಂತಹ ಕೃತಕ ಪೂರಕ ಅಂಶಗಳಿಂದ ಮುಕ್ತವಾದ ಸಂಪೂರ್ಣವಾಗಿ ಶುದ್ಧ ಸಾವಯವ ಪರಿಸರದಲ್ಲಿ ಬೆಳೆದಂತಹ ಗಿಡಮೂಲಿಕೆಗಳಿಂದಲೇ ಈ ಔಷಧಗಳನ್ನು ಸಿದ್ಧಪಡಿಸಲಾಗಿದೆ ಎಂದು ಶತಾಯು ಆಯುರ್ವೇದ ಸಂಸ್ಥೆಯ ನಿರ್ದೇಶಕ ಡಾ. ಮೃತ್ಯುಂಜಯ ಸ್ವಾಮಿ ಹೇಳುತ್ತಾರೆ.
ಸಂಸ್ಥೆಗೆ ಕಂಟ್ರೋಲ್ ಯೂನಿಯನ್ ಮಾನ್ಯತೆಯಿದೆ. ಸ್ಥಳೀಯ ನಿಯಂತ್ರಕ ಸಂಘಟನೆಗಳ ಅನುಮತಿ ಪತ್ರವೂ ಇದೆ. ಗ್ರಾಹಕರಿಗೆ ಗುಣಮಟ್ಟದ ಆಯುರ್ವೇದ ಉತ್ಪನ್ನಗಳನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ ಎಂದು ಸ್ವಾಮಿ ಹೇಳಿದ್ದಾರೆ.

ಪ್ರಾಚೀನ ಪದ್ಧತಿಯಲ್ಲಿ ಆಯುರ್ವೇದ ಮೂಲಿಕೆಗಳನ್ನು ಬೆಳೆಸಿದರೆ ಮಾತ್ರ ಔಷಧ ಉತ್ಪನ್ನಗಳ ಗುಣಮಟ್ಟ ಚೆನ್ನಾಗಿರುತ್ತದೆ. ಬಳಸುವವರ ಮೇಲೆಯೂ ಇವು ಯಾವುದೇ ಅಡ್ಡ ಪರಿಣಾಮ ಬಿರುವುದಿಲ್ಲ ಎಂದು ತಿಳಿಸಿದ್ದಾರೆ.
ಸಾವಯವ ಮಾರುಕಟ್ಟೆ
2010ರಲ್ಲಿ ಜಾಗತಿಕ ಸಾವಯವ ಉತ್ಪನ್ನಗಳ ಮಾರುಕಟ್ಟೆ ಮೌಲ್ಯ 57.5 ಶತಕೋಟಿ ಡಾಲರ್ ಆಗಿತ್ತು. 2015ರಲ್ಲಿ ಅದರ ಪ್ರಮಾಣ 104.7 ಶತಕೋಟಿ ಡಾಲರ್ ಗೆ ಏರಿದೆ ಎಂದರೆ ಜನರು ಆಯುರ್ವೇದ ಉತ್ಪನ್ನಗಳಿಗೆ ಒತ್ತು ನೀಡಿರುವುದು ಕಂಡುಬರುತ್ತದೆ ಎಂದು ಸ್ವಾಮಿ ತಿಳಿಸಿದ್ದಾರೆ. ಶತಾಯು ಆಯುರ್ವೇದ ಸಂಸ್ಥೆ ಉತ್ಪನ್ನಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗೆ 7829910171 ನ್ನು ಸಂಪರ್ಕಿಸಬಹುದು.

-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications