14 ಗಂಟೆಗಳ ವಿಮಾನ ವಿಳಂಬ: ಸಿಟ್ಟಿಗೆದ್ದ ಸ್ಪೈಸ್ಜೆಟ್ ಪ್ರಯಾಣಿಕರು ಮಾಡಿದ್ದೇನು?
ಬೆಂಗಳೂರು, ಡಿಸೆಂಬರ್ 6: ಬೆಂಗಳೂರಿನಿಂದ ಮುಂಬೈಗೆ ತೆರಳುವ ವಿಮಾನ 14 ಗಂಟೆ ತಡವಾದ್ದರಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಸ್ಪೈಸ್ಜೆಟ್ ಸಿಬ್ಬಂದಿ ವಿರುದ್ಧ ನೂರಾರು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಯಾಣಿಕರು ತಾವು ತಲುಪಬೇಕಾದ ಸ್ಥಳವನ್ನು ತಲುಪಲು ಯಾವುದೇ ಪರ್ಯಾಯ ವ್ಯವಸ್ಥೆ ಮಾಡದ ಕಾರಣ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಬೆಂಗಳೂರು ವಿಮಾನ ನಿಲ್ದಾಣದ ಗೇಟ್ ಸಂಖ್ಯೆ 15 ರಲ್ಲಿ ತಾಂತ್ರಿಕ ದೋಷದ ಕಾರಣದಿಂದ ಸುಮಾರು 250 ಪ್ರಯಾಣಿಕರನ್ನು ವಿಮಾನದಿಂದ ಹತ್ತಲು ಅಸ್ತವ್ಯಸ್ತವಾಗಿರುವ ದೃಶ್ಯಗಳು ಕಂಡುಬಂದವು.

ಪ್ರಯಾಣಿಕರೊಬ್ಬರು ಮಾತನಾಡಿ, ಸ್ಪೈಸ್ ಜೆಟ್ ವಿಮಾನವು ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿತ್ತು. ತಾವು ಕೊನೆಗೆ ವಿಮಾನವನ್ನು ಏರಿದೆವು. ಎರಡು ಗಂಟೆಗಳ ಕಾಲ ವಿಮಾನದಲ್ಲಿ ಕಳೆದ ನಂತರ ತಾಂತ್ರಿಕ ದೋಷಗಳನ್ನು ಉಲ್ಲೇಖಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಲಾಯಿತು. ಪ್ರಯಾಣಿಕರು ಬೋರ್ಡಿಂಗ್ ಕೌಂಟರ್ಗೆ ಹಿಂತಿರುಗಿದ ನಂತರ ಸ್ಪೈಸ್ಜೆಟ್ ಸಿಬ್ಬಂದಿ ವಿಮಾನವನ್ನು ಮಧ್ಯಾಹ್ನ 12 ಗಂಟೆಗೆ ಮರು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. ನಂತರ ಅದನ್ನು ಮಧ್ಯಾಹ್ನ 3 ಗಂಟೆಗೆ ಮತ್ತು ಈಗ ರಾತ್ರಿ 8:30ಕ್ಕೆ ಬದಲಾಯಿಸಲಾಯಿತು ಎಂದು ತಿಳಿಸಿದರು.
ತನಗೆ ತುರ್ತು ಕೆಲಸವಿರುವುದರಿಂದ ಮಧ್ಯಾಹ್ನ 3 ಗಂಟೆಯೊಳಗೆ ಮುಂಬೈ ತಲುಪಬೇಕು ಎಂದು ಪ್ರಯಾಣಿಕರೊಬ್ಬರು ಹೇಳಿದ್ದು ಕೇಳಿಸಿತು. ಸರಿಯಾದ ಮಾಹಿತಿ ನೀಡದ ಕಾರಣ ಪ್ರಯಾಣಿಕರು ವಿಮಾನ ವಿಳಂಬಕ್ಕೆ ಸ್ಪೈಸ್ ಜೆಟ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.
"ಬೆಂಗಳೂರಿನಿಂದ ಮುಂಬೈಗೆ ಸ್ಪೈಸ್ ಜೆಟ್ ವಿಮಾನವು ವಿಳಂಬವಾಗಿದೆ. ವಿಮಾನವು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗಿತ್ತು. ಅದನ್ನು 20 ನಿಮಿಷಗಳಷ್ಟು ಮುಂಚಿತವಾಗಿ ಮುಂದೂಡಲಾಗಿದೆ ಎಂಬ ಸಂದೇಶವು ನಮಗೆ ಬಂದಿತು. ನಾವು ಆ ವಿಮಾನ ನಿಲ್ದಾಣವನ್ನು ಮುಂಜಾನೆ 3:30 ಕ್ಕೆ ತಲುಪಿದೆವು. ಸರಿಯಾದ ಸಮಯಕ್ಕೆ ವಿಮಾನವನ್ನು ಹತ್ತಿದೆವು. 2. 25 ಗಂಟೆಗಳ ಕಾಲ ಕಳೆದ ನಂತರ ತಾಂತ್ರಿಕ ಸಮಸ್ಯೆ ಇದೆ ಎಂದು ಹೇಳಿ ನಮ್ಮನ್ನು ಡಿಬೋರ್ಡ್ ಮಾಡಲಾಯಿತು. ನಂತರ ಮಧ್ಯಾಹ್ನ 3:15 ಮತ್ತು ಈಗ ರಾತ್ರಿ 8:30 ಕ್ಕೆ ವಿಮಾನವನ್ನು ಮುಂದೂಡಲಾಯಿತು. ನಮ್ಮ ಮಾತು ಕೇಳಲು ಯಾರೂ ಇಲ್ಲ" ಎಂದು ಪ್ರಯಾಣಿಕರೊಬ್ಬರು ಹೇಳಿದರು. ಘಟನೆ ಕುರಿತು ಸ್ಪೈಸ್ ಜೆಟ್ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications