14 ಗಂಟೆಗಳ ವಿಮಾನ ವಿಳಂಬ: ಸಿಟ್ಟಿಗೆದ್ದ ಸ್ಪೈಸ್ಜೆಟ್ ಪ್ರಯಾಣಿಕರು ಮಾಡಿದ್ದೇನು?
ಬೆಂಗಳೂರು, ಡಿಸೆಂಬರ್ 6: ಬೆಂಗಳೂರಿನಿಂದ ಮುಂಬೈಗೆ ತೆರಳುವ ವಿಮಾನ 14 ಗಂಟೆ ತಡವಾದ್ದರಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಸ್ಪೈಸ್ಜೆಟ್ ಸಿಬ್ಬಂದಿ ವಿರುದ್ಧ ನೂರಾರು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಯಾಣಿಕರು ತಾವು ತಲುಪಬೇಕಾದ ಸ್ಥಳವನ್ನು ತಲುಪಲು ಯಾವುದೇ ಪರ್ಯಾಯ ವ್ಯವಸ್ಥೆ ಮಾಡದ ಕಾರಣ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಬೆಂಗಳೂರು ವಿಮಾನ ನಿಲ್ದಾಣದ ಗೇಟ್ ಸಂಖ್ಯೆ 15 ರಲ್ಲಿ ತಾಂತ್ರಿಕ ದೋಷದ ಕಾರಣದಿಂದ ಸುಮಾರು 250 ಪ್ರಯಾಣಿಕರನ್ನು ವಿಮಾನದಿಂದ ಹತ್ತಲು ಅಸ್ತವ್ಯಸ್ತವಾಗಿರುವ ದೃಶ್ಯಗಳು ಕಂಡುಬಂದವು.

ಪ್ರಯಾಣಿಕರೊಬ್ಬರು ಮಾತನಾಡಿ, ಸ್ಪೈಸ್ ಜೆಟ್ ವಿಮಾನವು ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿತ್ತು. ತಾವು ಕೊನೆಗೆ ವಿಮಾನವನ್ನು ಏರಿದೆವು. ಎರಡು ಗಂಟೆಗಳ ಕಾಲ ವಿಮಾನದಲ್ಲಿ ಕಳೆದ ನಂತರ ತಾಂತ್ರಿಕ ದೋಷಗಳನ್ನು ಉಲ್ಲೇಖಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಲಾಯಿತು. ಪ್ರಯಾಣಿಕರು ಬೋರ್ಡಿಂಗ್ ಕೌಂಟರ್ಗೆ ಹಿಂತಿರುಗಿದ ನಂತರ ಸ್ಪೈಸ್ಜೆಟ್ ಸಿಬ್ಬಂದಿ ವಿಮಾನವನ್ನು ಮಧ್ಯಾಹ್ನ 12 ಗಂಟೆಗೆ ಮರು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. ನಂತರ ಅದನ್ನು ಮಧ್ಯಾಹ್ನ 3 ಗಂಟೆಗೆ ಮತ್ತು ಈಗ ರಾತ್ರಿ 8:30ಕ್ಕೆ ಬದಲಾಯಿಸಲಾಯಿತು ಎಂದು ತಿಳಿಸಿದರು.
ತನಗೆ ತುರ್ತು ಕೆಲಸವಿರುವುದರಿಂದ ಮಧ್ಯಾಹ್ನ 3 ಗಂಟೆಯೊಳಗೆ ಮುಂಬೈ ತಲುಪಬೇಕು ಎಂದು ಪ್ರಯಾಣಿಕರೊಬ್ಬರು ಹೇಳಿದ್ದು ಕೇಳಿಸಿತು. ಸರಿಯಾದ ಮಾಹಿತಿ ನೀಡದ ಕಾರಣ ಪ್ರಯಾಣಿಕರು ವಿಮಾನ ವಿಳಂಬಕ್ಕೆ ಸ್ಪೈಸ್ ಜೆಟ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.
"ಬೆಂಗಳೂರಿನಿಂದ ಮುಂಬೈಗೆ ಸ್ಪೈಸ್ ಜೆಟ್ ವಿಮಾನವು ವಿಳಂಬವಾಗಿದೆ. ವಿಮಾನವು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗಿತ್ತು. ಅದನ್ನು 20 ನಿಮಿಷಗಳಷ್ಟು ಮುಂಚಿತವಾಗಿ ಮುಂದೂಡಲಾಗಿದೆ ಎಂಬ ಸಂದೇಶವು ನಮಗೆ ಬಂದಿತು. ನಾವು ಆ ವಿಮಾನ ನಿಲ್ದಾಣವನ್ನು ಮುಂಜಾನೆ 3:30 ಕ್ಕೆ ತಲುಪಿದೆವು. ಸರಿಯಾದ ಸಮಯಕ್ಕೆ ವಿಮಾನವನ್ನು ಹತ್ತಿದೆವು. 2. 25 ಗಂಟೆಗಳ ಕಾಲ ಕಳೆದ ನಂತರ ತಾಂತ್ರಿಕ ಸಮಸ್ಯೆ ಇದೆ ಎಂದು ಹೇಳಿ ನಮ್ಮನ್ನು ಡಿಬೋರ್ಡ್ ಮಾಡಲಾಯಿತು. ನಂತರ ಮಧ್ಯಾಹ್ನ 3:15 ಮತ್ತು ಈಗ ರಾತ್ರಿ 8:30 ಕ್ಕೆ ವಿಮಾನವನ್ನು ಮುಂದೂಡಲಾಯಿತು. ನಮ್ಮ ಮಾತು ಕೇಳಲು ಯಾರೂ ಇಲ್ಲ" ಎಂದು ಪ್ರಯಾಣಿಕರೊಬ್ಬರು ಹೇಳಿದರು. ಘಟನೆ ಕುರಿತು ಸ್ಪೈಸ್ ಜೆಟ್ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications