Mall of Asia: 15ದಿನ 'ಮಾಲ್ ಆಫ್ ಏಶಿಯಾ' ಬಂದ್, ಹೊಸವರ್ಷಕ್ಕೆ ಮಾಲ್ಗೆ ತೆರಳುವವರು ದಿನಾಂಕ ಗಮನಿಸಿ
ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಅತ್ಯಧಿಕ ಬೃಹತ್ ಮಾಲ್ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ನೂತನ 'ಮಾಲ್ ಆಫ್ ಏಶಿಯಾ' (Mall of Asia Bengaluru) ಎರಡು ವಾರಗಳ ಕಾಲ ಬಂದ್ ಆಗಿರಲಿದೆ. ಇತ್ತೀಚೆಗಷ್ಟೇ ಆರಂಭವಾಗಿದ್ದ ಈ ಮಾಲ್ ಏಕೆ ಬಂದ್ ಆಗಲಿದೆ?, ಕಾರಣವೇನು? ಎಂಬೆಲ್ಲ ಮಾಹಿತಿ ಇಲ್ಲಿ ತಿಳಿಯೋಣ.
ಬೆಂಗಳೂರು ಹೊಸ ವರ್ಷಾಚರಣೆ ಹಾಗೂ ಮುಂಬರುವ ಸಂಕ್ರಾಂತಿ ನಿಮಿತ್ತ ಹೆಚ್ಚಿನ ಜನರು ಜಮಾಯಿಸುವ ಹಿನ್ನೆಲೆಯಲ್ಲಿ ನಗರದ ಬ್ಯಾಟರಾಯನಪುರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ರಸ್ತೆಯ ಫಿನಿಕ್ಸ್ ಮಾಲ್ ಆಫ್ ಏಶಿಯಾಗೆ ಹದಿನಾರು ದಿನ ನಿಷೇಧಾಜ್ಞೆ ಜಾರಿಗೊಳಿಸಿ ಜನ ಸಂಚಾರಕ್ಕೆ (ಸಂಪೂರ್ಣ ಬಂದ್) ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.

ಕಳೆದ ಅಕ್ಟೋಬರ್ ನಲ್ಲಿ ಈ ಮಾಲ್ ಆಫ್ ಏಶಿಯಾ ಆರಂಭವಾಗಿತ್ತು. ಅಂದಿನಿಂದ ಈ ಮಾಲ್ಗೆ ಆಗಮಿಸುವ ಸಾರ್ವಜನಿಕರು ರಸ್ತೆ ಬದಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದು ಕಂಡು ಬಂದಿದೆ. ಇದರಿಂದ ಸಂಚಾರಕ್ಕೆ ಮಾತ್ರವಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ಮೇಲೂ ಪರಿಣಾಮ ಉಂಟಾಗುತ್ತಿದೆ.
ಟ್ರಾಫಿಕ್ ಸಮಸ್ಯೆ ಗಂಭೀರವಾಗಿ ಪರಿಗಣಿಸಿದ ಬಿಟಿಪಿ
ಈ ವಿಷಯವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಆಯುಕ್ತರಿಗೆ ಜಂಟಿ ಆಯುಕ್ತ (ಟ್ರಾಫಿಕ್), ಈಶಾನ್ಯ ವಿಭಾಗದ ಡಿಸಿಪಿ ಹಾಗೂ ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ವರದಿ ನೀಡಿದ್ದಾರೆ. ಈ ವರದಿ ಆಧರಿಸಿ ಆಯುಕ್ತ ಬಿ.ದಯಾನಂದ್ ಅವರು, ಮಾಲ್ ಆಫ್ ಏಶಿಯಾಗೆ ನಿಷೇಧಾಜ್ಞೆ ಹೇರಿದ್ದಾರೆ.
ಪೊಲೀಸರ ಈ ನಿಷೇಧಾಜ್ಞೆ ಪ್ರಕಾರ ಇಂದು ಡಿಸೆಂಬರ್ 31ರಿಂದ 2024 ಜನವರಿ 15ರವರೆಗೆ ಮಾಲ್ ಆಫ್ ಏಶಿಯಾವು ಬಂದ್ ಆಗಿರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನೋಟಿಸ್ ನೀಡಿದರೂ ಎಚ್ಚರಿಕೆ ವಹಿಸಿಲ್ಲ
ಈ ಮಾಲ್ ಆರಂಭವಾದಾಗಿನಿಂದ ಸಾರ್ವಜನಿಕರಿಗೆ ಸಂಚಾರಕ್ಕೆ ಸಾಕಷ್ಟು ತೊಂದರೆ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಹಲವು ಬಾರಿ ಸಂಬಂಧ ಪಟ್ಟ ಮಾಲ್ ಮುಖ್ಯಸ್ಥರಿಗೆ ನೋಟಿಸ್ ನೀಡಲಾಯಿತು, ಎಚ್ಚರಿಸಲಾಯಿತು. ಆದರೆ ಯಾವುದೇ ಪ್ರಯೋಜವಾಗಲಿಲ್ಲ.
ಈ ಹಿನ್ನೆಲೆಯಲ್ಲಿ ನೆನ್ನೆ ಶನಿವಾರ ಖುದ್ದು ಪೊಲೀಸ್ ಆಯುಕ್ತರೇ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಸಂಚಾರ ಅಡಚಣೆ ಇನ್ನಿತರ ವಾಸ್ತವಾಂಶಗಳನ್ನು ಪರಿಶೀಲಿಸಿದ್ದಾರೆ. ಹೊಸ ವರ್ಷಾಚರಣೆ ಎದುರಾಗಿದ್ದು, ಈ ವೇಳೆ ಹೆಚ್ಚು ಜನ ಜಂಗುಳಿ ಕಂಡು ಬರಲಿದೆ. ಅಲ್ಲದೇ ಸಂಕ್ರಾಂತಿ ವೇಳೆಯು ಅಧಿಕ ಜನರು ಓಡಾಡುವ ಕಾರಣ ಈ ರಸ್ತೆಗಳಲ್ಲಿ ಮತ್ತಷ್ಟು ಸಂಚಾರ ದಟ್ಟಣೆ (ಟ್ರಾಫಿಕ್) ಉಂಟಾಗುವ ನಿರೀಕ್ಷೆ ಇದೆ.
ಇದೇಲ್ಲ ಪರಿಸ್ಥಿತಿ ಅವಲೋಕಿಸಿರುವ ನಗರ ಸಂಚಾರ ವಿಭಾಗದ ಪೊಲೀಸರು ಚರ್ಚೆ ನಡೆಸಿ ಮುಂದಿನ ಹದಿನೈದು ದಿನಗಳ ವರೆಗೆ ಈ ಮಾಲ್ ಆಫ್ ಏಶಿಯಾಗೆ ನಿಷೇಧಾಜ್ಞೆ ಹೊರಡಿಸಿದ್ದಾರೆ. ಜನ ಸಂಚಾರಕ್ಕೆ ಇಲ್ಲಿ ನಿಷೇಧಾಜ್ಞೆ ಹೇರಿದ್ದಾರೆ.
ಕ್ರಮ ಬೇಡ ಎಂದ ಹೈಕೋರ್ಟ್
ಸದ್ಯ ಮಾಲ್ ಆಫ್ ಏಶಿಯಾ ಪರ ವಕೀಲರ ದೂರು ದಾಖಲಿಸಿಕೊಂಡ ಕರ್ನಾಟಕ ರಾಜ್ಯ ಹೈಕೋರ್ಟ್ ಮುಂದಿನ ಆದೇಶದವರೆಗೂ ಮಾಲ್ ಆಫ್ ಏಶಿಯಾ ವಿರುದ್ಧ ಕ್ರಮ ಕೈಗೊಳ್ಳದಂತೆ ಸೂಚಿಸಿದೆ. ಮಾಲ್ ಬಂದ್ ಮಾಡುವುದು ಬೇಡ ಎಂದು ಬೆಂಗಳೂರು ಪೊಲೀಸರಿಗೆ ನಿರ್ದೇಶಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ












Click it and Unblock the Notifications