ಬಿಎಂಟಿಸಿ: ಗುಂಪಾಗಿ ಟಿಕೇಟ್ ಖರೀದಿಸಿದರೆ ಶೇ.15 ರಷ್ಟು ರಿಯಾಯಿತಿ!
ಬೆಂಗಳೂರು, ಜನವರಿ, 27 : ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ ಸಂಚಿರಿಸುವ ಮೂರಕ್ಕಿಂತ ಹೆಚ್ಚು ಜನರ ಸಮೂಹಕ್ಕೆ ಶೇ.15 ರಷ್ಟು ಪ್ರಯಾಣ ದರದಲ್ಲಿ ರಿಯಾಯಿತಿ ನೀಡಲು ಬಿಎಂಟಿಸಿ ನಿರ್ಧರಿಸಿದೆ.
ಈ ಹೊಸ ಆದೇಶವು ಶನಿವಾರದಿಂದಲೇ ಜಾರಿಗೆ ಬರಲಿದೆ. ಸಮೂಹ ಸಾರಿಗೆಯಾದ ಬಿಎಂಟಿಸಿಗೆ ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಈಗಾಗಲೇ ವೋಲ್ವೋ ಬಸ್ ಪ್ರಯಾಣ ದರವನ್ನು ಶೇ.38ರಷ್ಟು ಇಳಿಕೆ ಮಾಡಿರುವ ಬಿಎಂಟಿಸಿ ಅದಕ್ಕೆ ದೊರೆತಿರುವ ಉತ್ತಮ ಪ್ರತಿಕ್ರಿಯೆಯಿಂದ ಸಂತಸಗೊಂಡು ಇನ್ನು ಮುಂದೆ ಮೂರಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಬಸ್ ನಲ್ಲಿ ಟಿಕೇಟ್ ಖರೀದಿಸಿದರೆ ಬಿಎಂಟಿಸಿಯ ಯಾವುದೇ ಸಾರಿಗೆಯಲ್ಲಿ ಶೇ.15ರಷ್ಟು ರಿಯಾಯಿತಿಯನ್ನು ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದ್ದಾರೆ.
ಶನಿವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಂಟಿಸಿಗೆ ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ವೋಲ್ವೋ ಬಸ್ ಈಗಾಗಲೇ ಜನಪ್ರಿಯಗೊಳ್ಳುತ್ತಿದೆ. ಅದೇ ಮಾದರಿಯಲ್ಲಿ ವೋಲ್ವೋ ಸೇರಿದಂತೆ ಉಳಿದ ಎಲ್ಲಾ ಬಗೆಯ ಸಾಮಾನ್ಯ ಪ್ರಯಾಣದ ಬಸ್ ಸೇರಿದಂತೆ ಎಲ್ಲಾ ಬಸ್ ಗಳ ಪ್ರಯಾಣಕ್ಕೆ ಶೇ. 15ರಷ್ಟು ರಿಯಾಯಿತಿ ದರವು ಅನ್ವಯವಾಗಲಿದೆ ಎಂದು ವಿವರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಬಜೆಟ್ ಪೂರ್ವ ಸಭೆ ನಡೆಸಲಿದ್ದು, ಮುಂದಿನ ಬಜೆಟ್ ನಲ್ಲಿ ಸಾರಿಗೆ ಇಲಾಖೆಯಲ್ಲಿ 1 ಸಾವಿರ ಕೋಟಿ ರೂ. ಗಳ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗುವುದು. ಈ ಕುರಿತಾಗಿ ಮುಖ್ಯಮಂತ್ರಿಗಳು ಸ್ಪಂದಿಸುವ ನಿರೀಕ್ಷೆ ಇದೆ ಎಂದರು.
ಕೆಎಸ್ ಆರ್ ಟಿಸಿಯ ನಾಲ್ಕು ನಿಗಮಗಳಿಗೆ ಬಸ್ ಖರೀದಿ ಮೇಲಿನ ತೆರಿಗೆ ರವಿಯಾಯಿತಿ ನೀಡುವುದು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬಸ್ ಪಾಸ್, ಎಸ್ ಎಸ್ಟಿ ಅಭ್ಯರ್ಥಿಗಳಿಗೆ ಭಾರಿ ವಾಹನಗಳ ಕಲಿಕೆ ಪರವಾನಗಿ ಯೋಜನೆ, ಹಾಗೂ ಬಸ್ ಪಾಸ್ ಮೇಲೆ ನೀಡುತ್ತಿರುವ ರಿಯಾಯಿತಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ 340 ಕೋಟಿ ರೂ.ಗಳನ್ನು ಸಾರಿಗೆ ನಿಗಮಕ್ಕೆ ಪಾವತಿಸಿ ಎಂದು ಮುಖ್ಯಮಂತ್ರಿಗಳನ್ನು ಕೋರಲಾಗವುದು ಎಂದು ತಿಳಿಸಿದರು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications