Get Updates
Get notified of breaking news, exclusive insights, and must-see stories!

BBMP Clearance: 1500 ಬೀದಿಬದಿ ವ್ಯಾಪಾರಿಗಳಿಂದ ನಗರದಲ್ಲಿ ಪ್ರತಿಭಟನಾ ರ‍್ಯಾಲಿ

ಬೆಂಗಳೂರು, ಜುಲೈ 30: ಒಂದಲ್ಲ ಒಂದು ಕಾರಣದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (BBMP) ಬಿಬಿಎಂಪಿಯ ಬೀದಿಬದಿ (footpath) ವ್ಯಾಪಾರಿಗಳ ಅಂಗಡಿ ಮುಂಗಟ್ಟುಗಳನ್ನು ಒತ್ತುವರಿ ತೆರವು ಮಾಡುತ್ತಲೇ ಬರುತ್ತಿದ್ದಾರೆ. ಇದೀಗ ಈ ತೆರವು ಕಾರ್ಯಾಚರಣೆ ವಿರೋಧಿಸಿ ಮಹದೇವಪುರ ವಲಯದ ಬೀದಿಬದಿ ವ್ಯಾಪಾರಿಗಳು ನಾಳೆ (ಜುಲೈ 31) ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ಇದರಿಂದ ಕೆಲವೆಡೆ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇವೆ.

ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೀದಿಬದಿ ವ್ಯಾಪಾರ ವಲಯವನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಲು ನೂರಾರು ವ್ಯಾಪಾರಿಗಳು ಸಜ್ಜಾಗಿದ್ದಾರೆ. ಈ ಸಂಬಂಧ ಕೆ.ಆರ್ ಪುರಂನ ಸರ್ಕಾರಿ ಆಸ್ಪತ್ರೆಯಿಂದ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ವರೆಗೆ ಈ ಬೀದಿ ಬದಿಯ ವ್ಯಾಪಾರಿಗಳ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ಸುಮಾರು 1,500 ಕ್ಕೂ ಹೆಚ್ಚು ಮಂದಿ ಭಾಗಿಯಾಗುವ ಸಾಧ್ಯತೆ ಇದೆ.

1500 Road Side Vendors Rally Mahadevapura To KPCC Office Against Clear Of BBMP On Monday

ಮಹಾದೇವಪುರದ ಟೌನ್ ವೆಂಡಿಂಗ್ ಸಮಿತಿ ಅಧ್ಯಕ್ಷ ಶಂಕರ್‌ ಅವರು ಮಾತನಾಡಿ, ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಮುಖಂಡರಾದ ರಾಹುಲ್‌ಗಾಂಧಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರೊಂದಿಗೆ ಈಗಾಗಲೇ ಎರಡು ಬಾರಿ ಸಭೆ ನಡೆಸಿ ಈ ಬಗ್ಗೆ ಚರ್ಚಿಇಸದ್ದೇವೆ. , ಮಾರಾಟಗಾರರಿಗೆ ಸೂಕ್ತ ವೆಂಡಿಂಗ್‌ ಜೋನ್‌ ಕೊಡಿಸುವುದಾಗಿ ಅವರು ಭರವಸೆ ನೀಡಿದ್ದರು. ಸದ್ಯ ಅವರು ಅಂದುಕೊಂಡಂತೆ ಅಧಿಕಾರಕ್ಕೆ ಬಂದರೂ ಸಹ ನಾವಿನ್ನು ಸಮಸ್ಯೆಗಳ ಸುಳಿಯಲ್ಲಿ ಬದುಕುತ್ತಿದ್ದೇವೆ. ಬೇಡಿಕೆ ಈಡೇರಿಸಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸರ್ಕಾರ ಮೊದಲು ಮಾರಾಟ ವಲಯ ಗುರುತಿಸಲಿ

ಸರ್ಕಾರ ಮಹತ್ವದ ಬ್ರ್ಯಾಂಡ್ ಬೆಂಗಳೂರು ಕಲ್ಪನೆಗೆ ಮಾರಾಟಗಾರರು ವಿರುದ್ಧವಾಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸರ್ಕಾರವು ಅವರಿಗೆ ಮೊದಲು ಮಾರಾಟ ವಲಯಗಳನ್ನು ನಿಗದಿಪಡಿಸಬೇಕು. ನಂತರ ಅವುಗಳನ್ನು ಬೀದಿಗಳಿಂದ ತೆಗೆದು ಹಾಕಬೇಕು ಎಂದು ಆಗ್ರಹಿಸಿದರು. ಮಹದೇವಪುರ ಜಂಟಿ ಆಯುಕ್ತರ ಜತೆ ನಡೆದ ಸಭೆಯಲ್ಲಿ ಟೌನ್‌ ವೆಂಡಿಂಗ್ ಸಮಿತಿ ಸದಸ್ಯರು ವಾಹನ ಚಾಲನೆ ನಿಲ್ಲಿಸುವಂತೆ ಅವರು ಮನವಿ ಮಾಡಿದರು.

ಎಲ್ಲ ವಲಯಗಳಲ್ಲಿನ ಜಂಟಿ ಆಯುಕ್ತರು ಮಾರಾಟಗಾರರಿಗೆ ಕಾರ್ಯ ಸಾಧ್ಯವಾದ ವಲಯಗಳನ್ನು ಗುರುತಿಸಲು ಎಂಜಿನಿಯರ್‌ಗಳು ಮತ್ತು ಟೌನ್ ವೆಂಡಿಂಗ್ ಕಮಿಟಿಯ ಸದಸ್ಯರನ್ನು ಕೇಳಲಾಗಿದೆ ಎಂದು ತಿಳಿದು ಬಂದಿದೆ.

1500 Road Side Vendors Rally Mahadevapura To KPCC Office Against Clear Of BBMP On Monday

2019 ರಲ್ಲಿನಡೆದಿದ್ದೇ ಕೊನೆಯ ಸಮೀಕ್ಷೆ

ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರಂಗಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿ, ರಸ್ತೆ ಬದಿ ವ್ಯಾಪಾರಿಗಳ (ಜೀವನೋಪಾಯ ರಕ್ಷಣೆ ಮತ್ತು ಬೀದಿಬದಿ ವ್ಯಾಪಾರ ನಿಯಂತ್ರಣ) ಕಾಯ್ದೆ 2014ರ ಪ್ರಕಾರ ಪ್ರತಿ ಆರು ತಿಂಗಳಿಗೆ ಒಮ್ಮೆ ಸಮೀಕ್ಷೆ ಕೈಗೊಳ್ಳಬೇಕು. ಕೇಂದ್ರದ ಹಣ ವ್ಯರ್ಥವಾಗುತ್ತಿದೆ. ಸಮೀಕ್ಷೆಯ ಅನುಪಸ್ಥಿತಿಯಲ್ಲಿ ಮತ್ತು ಮಾರಾಟಗಾರರನ್ನು ಗುರುತಿಸಲಾಗಿಲ್ಲ. 2018-19ರ ಕೊನೆಯ ಸಮೀಕ್ಷೆಯಲ್ಲಿ ನಗರದಲ್ಲಿ 25,000 ಬೀದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+