Bengaluru Film Festival: ಇಂದಿನಿಂದ ಒಂದು ವಾರ 15ನೇ ಬೆಂಗಳೂರು ಚಲನಚಿತ್ರೋತ್ಸವ
ಬೆಂಗಳೂರು ಫೆಬ್ರವರಿ 29: ಇಂದಿನಿಂದ ಒಂದು ವಾರ 15ನೇ ಬೆಂಗಳೂರು ಚಲನಚಿತ್ರೋತ್ಸವ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇದನ್ನು ಇಂದು ಉದ್ಘಾಟನೆ ಮಾಡಲಾಗಿದ್ದಾರೆ.
ಪ್ರತಿಷ್ಠಿತ 15ನೇ ಬೆಂಗಳೂರು ಅಂತಾ ರಾಷ್ಟ್ರೀಯ ಚಲನಚಿತ್ರೋತ್ಸವ ಇಂದು ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ.

ಖ್ಯಾತ ನಟ ಜಬ್ಬಾರ್ ಪಟೇಲ್, ಬಾಂಗ್ಲಾ ನಟಿ ಅಜಮೇರಿ ಬಂದೋನ್, ಜೆಕ್ ವಿಮರ್ಶಕಿ ವಿಯರಾ ಲ್ಯಾಂಗರೋವಾ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಉದ್ಘಾಟನಾ ಚಲನಚಿತ್ರವಾಗಿ ಪೀಟರ್ಲೂಸಿ ನಿರ್ದೇಶನದ ಸ್ವಿಸ್ ಚಲನಚಿತ್ರ ಬೋಂಜೋರ್ ಸ್ವಿಜರ್್ಲ್ಯಾಂಡ್ ಪ್ರದರ್ಶನಗೊಳ್ಳಲಿದೆ.
ಸಮಾರಂಭದಲ್ಲಿ ಮುರು ಬಾರಿ ಗ್ಯಾಮಿ ಪ್ರಶಸ್ತಿ ಪಡೆದ ರಿಕ್ಕಿ ಕೇಜ್ ಸಂಗೀತ-ಸಾಂಸ್ಕೃತಿಕ ಕಾರ್ಯಕ್ರಮ ಇರಲಿದೆ. ಈ ಚಿತ್ರೋತ್ಸವದಲ್ಲಿ ಅಬ್ಬಾಸ್ ಕಿರೋಸಮಿ ಹಾಗೂ ಮ್ರಣಾಲದ ಸೇನ್ ನಿರ್ದೇಶನದ ಚಿತ್ರಗಳು ಪುನರಾವಲೋಕನ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿವೆ.
ಕನ್ನಡ, ಏಷಿಯನ್ ಸಿನಿಮಾ ಸ್ಪರ್ಧಾತ್ಮಕ ವಿಭಾಗ, ಸಮ ಕಾಲೀನ ವಿಶ್ವ ಸಿನಿಮಾ, ವಿಮರ್ಶಕರ ವಾರ, ಸಾಕ್ಷ್ಯಚಿತ್ರ ವಿಭಾಗ, ಜೀವನ ಚರಿತ್ರೆ, ಸಂಸ್ಮರಣೆ- ಹೀಗೆ ಹಲವು ವಿಭಾಗಗಳಲ್ಲಿ ಸುಮಾರು 50ಕ್ಕೂ ಹೆಚ್ಚು ದೇಶಗಳು 200 ಚಿತ್ರಗಳು ಪ್ರದರ್ಶನ ಕಾಣಲಿವೆ.
ನಟ ಧನಂಜಯ್ ಚಿತ್ರೋತ್ಸವದ ರಾಯಬಾರಿಯಾಗಿ ಆಯ್ಕೆಯಾಗಿದ್ದಾರೆ. ಒರಾಯನ್ ಮಾಲ್, ಸುಚಿತ್ರಾ ಸಿನಮಾ ಅಕಾಡೆಮಿ, ಕಲಾವಿದರ ಸಂಘಗಳ 14 ಪರದೆಗಳಲ್ಲಿ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಕನ್ನಡ ಚಿತ್ರರಂಗಕ್ಕೆ 90 ವರ್ಷ ತುಂಬಿದ ಪ್ರಯುಕ್ತ ಕನ್ನಡ ವಿಭಾಗದಲ್ಲಿ 30 ಕನ್ನಡ ಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಲೀಲಾವತಿ, ಭಗವಾನ್, ಸಿವಿ ಶಿವಶಂಕರ್, ವಾಣಿಜಯರಾಂ ಗೌರವಾರ್ಥ ಅವರ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಸಿನಿಮಾಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ 800 ರೂಪಾಯಿ, ಚಿತ್ರೋದ್ಯಮದ ಸದಸ್ಯರಿಗೆ 400 ರೂಪಾಯಿ, ಹಿರಿಯ ನಾಗರಿಕರಿಗೆ 400 ರೂಪಾಯಿ ಪ್ರವೇಶದ ದರ ನಿಗದಿಪಡಿಸಲಾಗಿದೆ. ಆನ್ಲೈನ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
ಪುನರಾವಲೋಕನ ವಿಭಾಗದಲ್ಲಿ ಮೃಣಾಲ್ ಸೇನ್ ಅವರ ಚಿತ್ರಗಳು ಪ್ರದರ್ಶನ ಆಗಲಿದೆ. ತಶಮಾನೋತ್ಸವ ನೆನಪು ಹಾಗೂ ಶ್ರದ್ಧಾಂಜಲಿ ವಿಭಾಗದಲ್ಲಿ ಸಂಗೀತ ನಿರ್ದೇಶಕ ವಿಜಯ್ ಬಾಸ್ಕರ್, ನಟ ಸಾಬು ದಸ್ತಗೀರ್, ನಿರ್ದೇಶಕ ಭಗವಾನ್, ನಟಿ ಲೀಲಾವತಿ, ನಿರ್ಮಾಪಕ ಸಿ.ವಿ.ಶಿವಶಂಕರ್, ಗಾಯಕಿ ವಾಣಿ ಜಯರಾಂಗೆ ಶ್ರದ್ಧಾಂಜಲಿ ಸಲ್ಲಿಕೆ ಆಗಲಿದೆ.
ಖ್ಯಾತ ಕಲಾವಿದ ಮತ್ತು ರಂಗ ನಿರ್ದೇಶಕ ಡಾ.ಜಬ್ಬಾರ್ ಪಟೇಲ್ ''ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸನದ' ಕೈಪಿಡಿ, ನಟ ಶಿವಕುಮಾರ್ ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.
-
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ











Click it and Unblock the Notifications