ಅದಮ್ಯ ಚೇತನದಿಂದ ಸತತ 160 ವಾರಗಳ ಗಿಡನೆಡುವ ಕಾರ್ಯಕ್ರಮ
ಬೆಂಗಳೂರು ಜನವರಿ 20 2018: 160 ವಾರಗಳಿಂದ ಸತತವಾಗಿ ಹಸಿರ ಭಾನುವಾರ ಆಚರಿಸುವ ಮೂಲಕ ಅದಮ್ಯ ಚೇತನ ಸಂಸ್ಥೆ ಹೊಸದೊಂದು ಮೈಲುಗಲ್ಲನ್ನು ಸಾಧಿಸಿದೆ. 1 ಕೋಟಿ ಗಿಡ ನೆಡುವ ದಿವಂಗತ ಅನಂತಕುಮಾರ್ ಅವರ ಆಶಯವನ್ನು ಸಾಕಾರಗೊಳಿಸುತ್ತ ನಾವು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್ ಹೇಳಿದರು.
ನಗರದ ಕೆಂಪಾಂಬುಧಿ ಕೆರೆಯ ಅವರಣದಲ್ಲಿ ಪೌರ ಕಾರ್ಮಿಕರ ಮಕ್ಕಳ ಕೈಯಲ್ಲಿ ಗಿಡ ನೆಡೆಸುವ ಮೂಲಕ ಈ 160 ನೇ ಹಸಿರು ಭಾನುವಾರವನ್ನು ವಿಶಿಷ್ಷವಾಗಿ ಆಚರಿಸಲಾಯಿತು.
ಹಸಿರು ಭಾನುವಾರ ಆಚರಣೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್, ಕೆಂಪಾಂಬುಧಿ ಕೆರೆಯ ಅಭಿವೃದ್ಧಿಗೆ ಅನಂತ ಕುಮಾರ್ ಅವರು ಸಾಕಷ್ಟು ಕನಸುಗಳನ್ನು ಕಂಡಿದ್ದರು.

ಅಲ್ಲದೆ, ತಮ್ಮ ಅಷ್ಟೇ ಅಲ್ಲದೆ ಇಲ್ಲಿನ ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದಲ್ಲಿ ಅಭಿವೃದ್ದಿ ಕಾರ್ಯಕ್ಕೂ ಕೈ ಹಾಕಿದ್ದರು. ಈ ಪ್ರಯತ್ನದ ಫಲವಾಗಿ ಜನವರಿ ತಿಂಗಳಿನಲ್ಲಿಯೂ ಕೆರೆಯಲ್ಲಿ ನೀರನ್ನು ಕಾಣಬಹುದಾಗಿದೆ. ಇದು ಒಳ್ಳೆಯ ಬೆಳವಣಿಗೆ ಯಾಗಿದ್ದು ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ ಎಂದರು.

ಕೆರೆಯ ಆವರಣದಲ್ಲಿ ವಾಸಿಸುತ್ತಿರುವ ಮಕ್ಕಳ ಕೈಯಲ್ಲಿ ಗಿಡ ನೆಡುಸುವ ಮೂಲಕ ಮಕ್ಕಳಲ್ಲಿಯೂ ಪರಿಸರ ಕಾಳಜಿ ಮೂಡಿಸುವುದು ನಮ್ಮ ಉದ್ದೇಶವಾಗಿದೆ. ಈ ಮಕ್ಕಳೇ ಮುಂದೆ ಈ ಗಿಡ ಮರಗಳ ಬೆಳವಣಿಗೆಯ ಜವಾಬ್ದಾರಿಯನ್ನೂ ಹೊತ್ತುಕೊಳ್ಳಲಿರುವುದು ಸಂತಸದ ವಿಷಯ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಬೆಂಗಳೂರು ನಗರ ಅಧ್ಯಕ್ಷ ಸದಾಶಿವ ಸೇರಿದಂತೆ ಹಲವರು ಭಾಗವಹಿಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications