ಬೆಂಗಳೂರು ಸುತ್ತ 161 ಹಳ್ಳಿಗಳಿಗೆ ಕಾವೇರಿ ಭಾಗ್ಯ!
ಬೆಂಗಳೂರು, ಜನವರಿ 13 : ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ನಗರ ಜಿಲ್ಲೆಯ 161 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಇದಕ್ಕಾಗಿ ಜಲಮಂಡಳಿಯು ನಿತ್ಯ 16.10 ದಶಲಕ್ಷ ಲೀಟರ್ ನೀರು ಪೂರೈಸಲಿದೆ. ಬಿಬಿಎಂಪಿ ವ್ಯಾಪ್ತಿಯಿಂದ ಹೊರಗಿರುವ ಕರ್ನಾಟಕ ಗೃಹ ಮಂಡಳಿಯ ಸೂರ್ಯನಗರ 1,2,3 , ಮತ್ತು 4 ನೇ ಹಂತ ಆನೇಕಲ್ ಪಟ್ಟಣ ಮತ್ತು ಸುತ್ತಮುತ್ತಲಿನ 17 ಗ್ರಾಮಗಳಿಗೆ ಕಾವೇರಿ ನೀರು ಸರಬರಾಜು ಮಾಡಲು ಸರ್ಕಾರ ಅನುಮೋದನೆ ನೀಡಿದೆ. ಈ ಪೈಕಿ ಈಗಾಗಲೇ ಆನೇಕಲ್ ಪಟ್ಟಣಕ್ಕೆ ನಿತ್ಯ 7.5 ಎಂ ಎಲ್ ಡಿ ಪೂರೈಕೆ ಮಾಡಲಾಗುತ್ತಿದೆ.
30 ಎಂಎಲ್ ಡಿ ನೀಡು ಹಂಚಿಕೆ: ರಾಜ್ಯ ಸರ್ಕಾರವು ಸೂರ್ಯನಗರ ವಸತಿ ಬಡಾವಣೆಗಳಿಗೆ 15 ಎಂ ಎಲ್ ಡಿ , ಆನೇಕಲ್ ಪಟ್ಟಣಕ್ಕೆ 7.5 ಎಂಎಲ್ ಡಿ ಮತ್ತು 17 ಹಳ್ಳಿಗಳಿಗೆ 7.5 ಎಂಎಲ್ ಡಿ ಸೇರಿ ಒಟ್ಟು 30 ಎಂಎಲ್ ಡಿ ಕಾವೇರಿ ನೀಡು ಹಂಚಿಕೆ ಮಾಡಿದೆ.

ಇದಕ್ಕಾಗಿ ಜಲಮಂಡಳಿಗೆ 168 ಕೋಟಿ ರೂ. ಪಾವತಿಸಬೇಕು. ಕೆಎಚ್ ಬಿ 84 ಕೋಟಿ ರೂ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 47 ಕೋಟಿ ರೂ. ಮತ್ತು ಆನೇಕಲ್ ಪುರಸಭೆಯು 43.5 ಕೋಟಿ ರೂ ಗಳನ್ನು ಜಲಮಂಡಳಿಗೆ ಪಾವತಿ ಮಾಡಬೇಕಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ರಾಜಾಪುರ, ಹೆನ್ನಾಗರ, ಲಿಂಗಾಪುರ, ಇಂಡ್ಲವಾಡಿಪುರ, ಚಿಕ್ಕ ಹೊಸೂರು, ಬೋಗನದೊಡ್ಡಿ, ಮೈಸೂರಮ್ಮನದೊಡ್ಡಿ, ಬೊಮ್ಮಹಳ್ಳಿ, ಕೋಣಸಂದ್ರ,ಕಾಡಜಕ್ಕಸಂದ್ರ, ಜಿಗಣಿ, ಸೇರಿದಂತೆ 17 ಹಳ್ಳಿಗಳಿಗೆ7.5 ಎಂಎಲ್ ಡಿ ಕಾವೇರಿ ನೀರನ್ನು ಹಂಚಿಕೆ ಮಾಡಿ ಸರ್ಕಾರ ಅನುಮೋದನೆ ನೀಡಿದೆ.
161 ಹಳ್ಳಿಗಳಿಗೆ ಕಾವೇರಿ ಭಾಗ್ಯ: ಸರ್ಕಾರವು ಆನೇಕಲ್ ತಾಲೂಕಿನ ಕೇವಲ 17 ಹಳ್ಳಿಗಳಿಗೆ ಮಾತ್ರ ನೀರು ಪೂರೈಸಲು 7.5 ಎಂಎಲ್ ಡಿ ಹಂಚಿಕೆ ಹಂಚಿಕೆ ಮಾಡಿತ್ತು. ಈ ಮಧ್ಯೆ ಸಂಸದ ಡಿ.ಕೆ. ಸುರೇಶ್ ಅವರು 10 ಗ್ರಾಮ ಪಂಚಾಯಿತಿ ವ್ಯಾಪ್ತಿಯ 161 ಜನ ವಸತಿ ಪ್ರದೇಶಗಳಿಗೂ ಕಾವೇರಿ ನೀರು ಒದಗಿಸಬೇಕೆಂದು ಒತ್ತಡ ಹೇರಿದ್ದಾರೆ.
8.60 ಎಂ.ಎಲ್.ಡಿ ನೀರು ಒದಗಿಸಲು ಸಮ್ಮತಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮನವಿ ಪತ್ರಕ್ಕೆ ಸ್ಪಂದಿಸಿರುವ ಜಲಮಂಡಳಿ ತಾತ್ಕಾಲಿಕವಾಗಿ 8.60 ಎಂಎಲ್ ಡಿ ನೀರು ನೀಡಲು ಒಪ್ಪಿಗೆ ನೀಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ












Click it and Unblock the Notifications