ಬೆಂಗಳೂರಿನಲ್ಲಿ ನಡೆದಿದೆ ಪೈಶಾಚಿಕ ಕೃತ್ಯ
ಬೆಂಗಳೂರು, ನವೆಂಬರ್ 15 : ದೆಹಲಿಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರಕ್ಕಿಂತಲೂ ಭೀಕರ ಎನ್ನಬಹುದಾದ ಅತ್ಯಾಚಾರ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದೆ. ಪಾರ್ಟಿ ಮಾಡಲೆಂದು ಕರೆದು ಕೋಣೆಯೊಂದರಲ್ಲಿ ಕೂಡಿಹಾಕಿ ಸತತ 9 ದಿನಗಳ ಕಾಲ 17 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಕಾಮುಕರು.
ನಗರದ ಕಾಡುಗೋಡಿಯಲ್ಲಿ ಅಕ್ಟೋಬರ್ 26ರಂದು ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿದೆ ಬಂದಿದೆ.

ಮೊದಲಿಗೆ ಯುವತಿಯನ್ನು ಆಕೆಯ ಗೆಳೆಯ ರಾಘವೇಂದ್ರ (26) ಕಾಡುಗೋಡಿಯ ಕ್ಲಾಸಿಕ್ ಲಾಡ್ಜ್ ಗೆ ಕರೆತಂದು ರೇಪ್ ಮಾಡಿದ್ದಾನೆ. ನಂತರ ಆತನ ಗೆಳೆಯರಾದ ಸಾಗರ್ ಮತ್ತು ಮನೋರಾಜನ್ ಅವರುಗಳು ಆಕೆಯ ಮೇಲೆ ಬಲಾತ್ಕಾರ ಮಾಡಿದ್ದಾರೆ. ಲಾಡ್ಜ್ ಮಾಲೀಕ ಮಂಜುರಾಜ್ ಕೂಡ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ. ರಾಘವೇಂದ್ರ ಮತ್ತು ಲಾಡ್ಜ್ ಮಾಲೀಕ ಮಂಜುರಾಜ್ ಕೂಡ ಮುಂಚೆಯೇ ಸ್ನೇಹಿತರಂತೆ.
ಅತ್ಯಾಚಾರಕ್ಕೊಳಗಾಗಿರುವ ಯುವತಿ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ.
ಘಟನೆಗೆ ಸಂಬಂಧಿಸಿದಂತೆ ಉಡುಪಿಯ ರಾಘವೇಂದ್ರ, ಬಂಗಾಳದ ಮನೋರಾಜನ್, ದಾವಣಗೆರೆಯ ಸಾಗರ್, ಮೈಸೂರಿನ ಮಂಜುರಾಜ್ ಅವರುಗಳನ್ನು ಕಾಡುಗೋಡಿ ಪೊಲೀಸರು ನವೆಂಬರ್ 6ರಂದು ಬಂಧಿಸಿದ್ದಾರೆ.
ಶೀಘ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿರುವ ಕಾಡುಗೋಡಿ ಪೊಲೀಸರ ಕರ್ತವ್ಯಕ್ಕೆ ಪ್ರಶಂಸೆ ದೊರೆತಿದೆ.
ಪ್ರಕರಣ ಹೊರ ಬಂದದ್ದು ಹೀಗೆ...
ನಗರದ ಕೆ.ಆರ್.ಪುರಂ ಠಾಣೆಯಲ್ಲಿ ಅಕ್ಟೋಬರ್ 30 ರಂದು ವ್ಯಕ್ತಿಯೊಬ್ಬರು ತಮ್ಮ 17 ವರ್ಷದ ಮಗಳು akfqObrf 26 ರಿಂದ ಕಾಣೆಯಾಗಿರುವುದಾಗಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಕೆ.ಆರ್.ಪುರ ಠಾಣೆಯ ಎಸ್.ಐ ಜಯರಾಜ್ ನವೆಂಬರ್ 4 ರಂದು ಕಾಡುಗೋಡಿಯ ಕ್ಲಾಸಿಕ್ ಲಾಡ್ಜ್ ನಲ್ಲಿ ಯುವತಿಯನ್ನು ಪತ್ತೆ ಮಾಡಿದ್ದಾರೆ.
ಯುವತಿಯನ್ನು ವಿಚಾರಣೆಗೊಳಪಡಿಸಿದಾಗ ಯುವತಿಯು ಅತ್ಯಾಚಾರದ ವಿಷಯ ತಿಳಿಸಿದ್ದಾಳೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications